<p><strong>ಶಿಡ್ಲಘಟ್ಟ</strong>: ಕನ್ನಡದ ಸಿನಿಮಾಗಳನ್ನು ನೋಡಬೇಕು. ಕನ್ನಡ ಸಾಹಿತ್ಯವನ್ನು ಓದಬೇಕು. ಆ ಮೂಲಕ ಕನ್ನಡ ಭಾಷೆ ಸಾಹಿತ್ಯವನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕಿದೆ ಎಂದು ಕೆಪಿಸಿಸಿ ಕೋ-ಆರ್ಡಿನೇಟರ್ ಬಿ.ವಿ.ರಾಜೀವ್ಗೌಡ ಹೇಳಿದರು.</p>.<p>ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝುನೈದ್ ಖಾನ್ ನಟನೆಯ ಕಲ್ಟ್ ಚಲನ ಚಿತ್ರದ ಪ್ರಚಾರ ಕಾರ್ಯ ಜ.13ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿದ್ದು ಪ್ರಚಾರ ಕಾರ್ಯಕ್ಕೆ ಕೈಗೊಂಡ ಪೂರ್ವ ಸಿದ್ಧತೆಗಳನ್ನು ವೀಕ್ಷಿಸಿ ಮಾತನಾಡಿದರು.</p>.<p>ಸಚಿವ ಜಮೀರ್ ಅಹ್ಮದ್ ಅವರು ಕಾಂಗ್ರೆಸ್ ಪಕ್ಷದ ನಾಯಕರು. ಅವರ ಪುತ್ರ ಝುನೈದ್ ಖಾನ್ ಕನ್ನಡ ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿರುವ ಕಲ್ಟ್ ಚಲನಚಿತ್ರ ಜ. 23ರಂದು ರಾಜ್ಯದಾದ್ಯಂತ ಬಿಡುಗಡೆ ಆಗುತ್ತಿದೆ. ಶಿಡ್ಲಘಟ್ಟದಲ್ಲಿ ಜ. 13ರಂದು ಸಂಜೆ 5 ಗಂಟೆಗೆ ನೆಹರೂ ಕ್ರೀಡಾಂಗಣದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ರಮ ನಡೆಯಲಿದೆ ಎಂದರು.</p>.<p>ನಾಯಕ ನಟ, ನಾಯಕಿ ಸೇರಿದಂತೆ ಚಿತ್ರದ ನಟರು, ತಾಂತ್ರಿಕ ಸಿಬ್ಬಂದಿ, ಕಾಂಗ್ರೆಸ್ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 10 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾರೆಡ್ಡಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ಕನ್ನಡದ ಸಿನಿಮಾಗಳನ್ನು ನೋಡಬೇಕು. ಕನ್ನಡ ಸಾಹಿತ್ಯವನ್ನು ಓದಬೇಕು. ಆ ಮೂಲಕ ಕನ್ನಡ ಭಾಷೆ ಸಾಹಿತ್ಯವನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕಿದೆ ಎಂದು ಕೆಪಿಸಿಸಿ ಕೋ-ಆರ್ಡಿನೇಟರ್ ಬಿ.ವಿ.ರಾಜೀವ್ಗೌಡ ಹೇಳಿದರು.</p>.<p>ಸಚಿವ ಜಮೀರ್ ಅಹ್ಮದ್ ಖಾನ್ ಪುತ್ರ ಝುನೈದ್ ಖಾನ್ ನಟನೆಯ ಕಲ್ಟ್ ಚಲನ ಚಿತ್ರದ ಪ್ರಚಾರ ಕಾರ್ಯ ಜ.13ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆಯಲಿದ್ದು ಪ್ರಚಾರ ಕಾರ್ಯಕ್ಕೆ ಕೈಗೊಂಡ ಪೂರ್ವ ಸಿದ್ಧತೆಗಳನ್ನು ವೀಕ್ಷಿಸಿ ಮಾತನಾಡಿದರು.</p>.<p>ಸಚಿವ ಜಮೀರ್ ಅಹ್ಮದ್ ಅವರು ಕಾಂಗ್ರೆಸ್ ಪಕ್ಷದ ನಾಯಕರು. ಅವರ ಪುತ್ರ ಝುನೈದ್ ಖಾನ್ ಕನ್ನಡ ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿರುವ ಕಲ್ಟ್ ಚಲನಚಿತ್ರ ಜ. 23ರಂದು ರಾಜ್ಯದಾದ್ಯಂತ ಬಿಡುಗಡೆ ಆಗುತ್ತಿದೆ. ಶಿಡ್ಲಘಟ್ಟದಲ್ಲಿ ಜ. 13ರಂದು ಸಂಜೆ 5 ಗಂಟೆಗೆ ನೆಹರೂ ಕ್ರೀಡಾಂಗಣದಲ್ಲಿ ಚಿತ್ರದ ಪ್ರಚಾರ ಕಾರ್ಯಕ್ರಮ ನಡೆಯಲಿದೆ ಎಂದರು.</p>.<p>ನಾಯಕ ನಟ, ನಾಯಕಿ ಸೇರಿದಂತೆ ಚಿತ್ರದ ನಟರು, ತಾಂತ್ರಿಕ ಸಿಬ್ಬಂದಿ, ಕಾಂಗ್ರೆಸ್ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 10 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ ಎಂದರು.</p>.<p>ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಾರೆಡ್ಡಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>