<p><strong>ಗೌರಿಬಿದನೂರು</strong>: ತಾಲ್ಲೂಕಿನ ಹಂಪಸಂದ್ರ ಗ್ರಾಮದಲ್ಲಿ ಅಂಬೇಡ್ಕರ್ ಮತ್ತು ವಾಲ್ಮೀಕಿ ಅವರ ಪುತ್ಥಳಿ ವಿವಾದ ತೀವ್ರ ಸಂಘರ್ಷದ ಸ್ವರೂಪ ಪಡೆದಿದೆ. ಗ್ರಾಮದಲ್ಲಿ ಉದ್ವಿಗ್ವ ಸ್ಥಿತಿ ಇದ್ದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.</p><p>ಕೆಎಸ್ಆರ್ಪಿ ತುಕಡಿ ಸೇರಿದಂತೆ 150 ಕ್ಕೂ ಹೆಚ್ಚು ಪೊಲೀಸರು ಬೀಡು ಬಿಟ್ಟಿದ್ದಾರೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದ ರೀತಿಯಲ್ಲಿ ಇದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ತಹಶೀಲ್ದಾರ್ ಮಹೇಶ್ ಪತ್ರಿ ಸೇರಿದಂತೆ ಅಧಿಕಾರಿಗಳು ನಡೆಸಿದ ಶಾಂತಿ ಸಭೆಯೂ ವಿಫಲವಾಗಿದೆ.</p><p>ಎರಡೂ ಸಮುದಾಯಗಳ ನಡುವೆ ಮಾತಿನ ಚಕಮಕಿ ನಡೆದು ಕಲ್ಲು ತೂರಾಟ ನಡೆಸುವ ಹಂತಕ್ಕೂ ಪರಿಸ್ಥಿತಿ ತಲುಪಿತ್ತು. </p><p>ಉದ್ವಿಗ್ನ ಸ್ಥಿತಿ ಉಂಟಾಗಿದ್ದು ಹೀಗೆ: ಸಿದ್ದಗಂಗಮ್ಮ ಎಂಬುವವರು ವಾಲ್ಮೀಕಿ ಸಮುದಾಯಕ್ಕೆ ಸೇರಿದ ಶನಿಮಹಾತ್ಮ ದೇವಸ್ಥಾನಕ್ಕೆ ನಿವೇಶನ ದಾನ ನೀಡಿದ್ದರು. ಈ ನಿವೇಶನದಲ್ಲಿ ಪರಿಶಿಷ್ಟ ಜಾತಿಯವರು ಶನಿವಾರ ರಾತ್ರಿ ಅಂಬೇಡ್ಕರ್ ಪುತ್ಥಳಿ ಪ್ರತಿಷ್ಠಾಪಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ವಾಲ್ಮೀಕಿ ಸಮುದಾಯದವರು ಭಾನುವಾರ ಅಂಬೇಡ್ಕರ್ ಪುತ್ಥಳಿ ಮುಂಭಾಗದಲ್ಲಿಯೇ ಮಹರ್ಷಿ ವಾಲ್ಮೀಕಿಯ ಭಾವಚಿತ್ರವಿರುವ ನಾಮಫಲಕ ನಿಲ್ಲಿಸಿದ್ದಾರೆ.</p><p>ಆಗ ಎರಡೂ ಸಮುದಾಯಗಳ ನಡುವೆ ಘರ್ಷಣೆ ಉಂಟಾಗಿದೆ. ಅಂಬೇಡ್ಕರ್ ಪುತ್ಥಳಿ ಅನಾವರಣಕ್ಕೆ ಮಹರ್ಷಿ ವಾಲ್ಮೀಕಿ ನಾಮಫಲಕ ಅಡ್ಡವಿದೆ. ಆದ್ದರಿಂದ ನಾಮಫಲಕವನ್ನು ಪಕ್ಕಕ್ಕೆ ಸರಿಸಬೇಕು ಎಂದು ಪರಿಶಿಷ್ಟ ಜಾತಿ ಮುಖಂಡರು ಮನವಿ ಮಾಡಿದರು.</p><p>ತಹಶೀಲ್ದಾರ್ ಮಹೇಶ್ ಎಸ್. ಪತ್ರಿ ಮಹರ್ಷಿ ವಾಲ್ಮೀಕಿ ನಾಮಫಲಕವನ್ನು, ಅಂಬೇಡ್ಕರ್ ಪುತ್ಥಳಿ ಪಕ್ಕದಲ್ಲಿ ನಿಲ್ಲಿಸಿ ಎರಡಕ್ಕೂ ಮಾಲಾರ್ಪಣೆ ಮಾಡಿದರು.</p><p>‘ಅಂಬೇಡ್ಕರ್ ಅವರ ಬಗ್ಗೆ ಅಪಾರ ಗೌರವವಿದೆ. ಆದರೆ ಕ್ಷುಲ್ಲಕ ಕಾರಣಕ್ಕೆ ದೇವಾಲಯದ ಜಾಗ ಒತ್ತುವರಿ ಮಾಡಿಕೊಂಡು ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿರುವುದು ಸರಿಯಲ್ಲ. ಗ್ರಾಮದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ’ ಎಂದು ವಾಲ್ಮೀಕಿ ಸಮುದಾಯದ ಮುಖಂಡರು ಆರೋಪಿಸಿದರು.</p><p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಡಿವೈಎಸ್ಪಿ, ಶಿವಕುಮಾರ್, ವೃತ ನಿರೀಕ್ಷಕ ಸತ್ಯನಾರಾಯಣ, ಸಶಸ್ತ್ರ ಮೀಸಲುಪಡೆಯೊಂದಿಗೆ ಗ್ರಾಮಕ್ಕೆ ಬಂದು ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.</p><p>ಎರಡೂ ಗುಂಪುಗಳ ಮುಖಂಡರ ಸಭೆ ಕರೆದು ಮಾತುಕತೆ ನಡೆಸಿದ್ದಾರೆ. ಮಾತುಕತೆ ವಿಫಲವಾಗಿದ್ದು, ಸೋಮವಾರ ಶಾಂತಿ ಸಭೆ ನಡೆಸಿ ಮುಂದಿನ ನಿರ್ಧಾರ ಕೈ ಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.</p><p>ತಹಶೀಲ್ದಾರ್ ಮಹೇಶ್ ಎಸ್.ಪತ್ರಿ, ಜಾಗದ ದಾಖಲೆಗಳ ಪರಿಶೀಲಿಸಿದರು.</p><p>‘ಸಿದ್ದಗಂಗಮ್ಮ ಅವರಿಗೆ ಗ್ರಾಮ ಪಂಚಾಯಿತಿಯಿಂದ ಜಾಗ ಮಂಜೂರಾಗಿದೆ. ಈಗಾಗಲೆ ಅವರು ಬೇರೆ ಕಡೆ ವಾಸಿಸುತ್ತಿದ್ದಾರೆ. ಆ ಜಾಗವನ್ನು ಶನಿಮಹಾತ್ಮ ದೇವಾಲಯಕ್ಕೆ ಬಿಟ್ಟಕೊಟ್ಟಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಮುಂದಿನ ಕ್ರಮ ಕೈ ಗೊಳ್ಳಲಾಗುವುದು’ ಎಂದು ತಹಶೀಲ್ದಾರರು ತಿಳಿಸಿದರು.</p><p>ಈ ಖಾಲಿ ನಿವೇಶನದಲ್ಲಿ ಶನಿವಾರ ರಾತ್ರಿ ಇದ್ದಕ್ಕಿದ್ದಂತೆ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿರುವುದು ಗ್ರಾಮದಲ್ಲಿ ಎರಡು ಸಮುದಾಯಗ: ನಡುವೆ ಘರ್ಷಣೆಗೆ ಕಾರಣವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು</strong>: ತಾಲ್ಲೂಕಿನ ಹಂಪಸಂದ್ರ ಗ್ರಾಮದಲ್ಲಿ ಅಂಬೇಡ್ಕರ್ ಮತ್ತು ವಾಲ್ಮೀಕಿ ಅವರ ಪುತ್ಥಳಿ ವಿವಾದ ತೀವ್ರ ಸಂಘರ್ಷದ ಸ್ವರೂಪ ಪಡೆದಿದೆ. ಗ್ರಾಮದಲ್ಲಿ ಉದ್ವಿಗ್ವ ಸ್ಥಿತಿ ಇದ್ದು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.</p><p>ಕೆಎಸ್ಆರ್ಪಿ ತುಕಡಿ ಸೇರಿದಂತೆ 150 ಕ್ಕೂ ಹೆಚ್ಚು ಪೊಲೀಸರು ಬೀಡು ಬಿಟ್ಟಿದ್ದಾರೆ. ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದ ರೀತಿಯಲ್ಲಿ ಇದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ತಹಶೀಲ್ದಾರ್ ಮಹೇಶ್ ಪತ್ರಿ ಸೇರಿದಂತೆ ಅಧಿಕಾರಿಗಳು ನಡೆಸಿದ ಶಾಂತಿ ಸಭೆಯೂ ವಿಫಲವಾಗಿದೆ.</p><p>ಎರಡೂ ಸಮುದಾಯಗಳ ನಡುವೆ ಮಾತಿನ ಚಕಮಕಿ ನಡೆದು ಕಲ್ಲು ತೂರಾಟ ನಡೆಸುವ ಹಂತಕ್ಕೂ ಪರಿಸ್ಥಿತಿ ತಲುಪಿತ್ತು. </p><p>ಉದ್ವಿಗ್ನ ಸ್ಥಿತಿ ಉಂಟಾಗಿದ್ದು ಹೀಗೆ: ಸಿದ್ದಗಂಗಮ್ಮ ಎಂಬುವವರು ವಾಲ್ಮೀಕಿ ಸಮುದಾಯಕ್ಕೆ ಸೇರಿದ ಶನಿಮಹಾತ್ಮ ದೇವಸ್ಥಾನಕ್ಕೆ ನಿವೇಶನ ದಾನ ನೀಡಿದ್ದರು. ಈ ನಿವೇಶನದಲ್ಲಿ ಪರಿಶಿಷ್ಟ ಜಾತಿಯವರು ಶನಿವಾರ ರಾತ್ರಿ ಅಂಬೇಡ್ಕರ್ ಪುತ್ಥಳಿ ಪ್ರತಿಷ್ಠಾಪಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ವಾಲ್ಮೀಕಿ ಸಮುದಾಯದವರು ಭಾನುವಾರ ಅಂಬೇಡ್ಕರ್ ಪುತ್ಥಳಿ ಮುಂಭಾಗದಲ್ಲಿಯೇ ಮಹರ್ಷಿ ವಾಲ್ಮೀಕಿಯ ಭಾವಚಿತ್ರವಿರುವ ನಾಮಫಲಕ ನಿಲ್ಲಿಸಿದ್ದಾರೆ.</p><p>ಆಗ ಎರಡೂ ಸಮುದಾಯಗಳ ನಡುವೆ ಘರ್ಷಣೆ ಉಂಟಾಗಿದೆ. ಅಂಬೇಡ್ಕರ್ ಪುತ್ಥಳಿ ಅನಾವರಣಕ್ಕೆ ಮಹರ್ಷಿ ವಾಲ್ಮೀಕಿ ನಾಮಫಲಕ ಅಡ್ಡವಿದೆ. ಆದ್ದರಿಂದ ನಾಮಫಲಕವನ್ನು ಪಕ್ಕಕ್ಕೆ ಸರಿಸಬೇಕು ಎಂದು ಪರಿಶಿಷ್ಟ ಜಾತಿ ಮುಖಂಡರು ಮನವಿ ಮಾಡಿದರು.</p><p>ತಹಶೀಲ್ದಾರ್ ಮಹೇಶ್ ಎಸ್. ಪತ್ರಿ ಮಹರ್ಷಿ ವಾಲ್ಮೀಕಿ ನಾಮಫಲಕವನ್ನು, ಅಂಬೇಡ್ಕರ್ ಪುತ್ಥಳಿ ಪಕ್ಕದಲ್ಲಿ ನಿಲ್ಲಿಸಿ ಎರಡಕ್ಕೂ ಮಾಲಾರ್ಪಣೆ ಮಾಡಿದರು.</p><p>‘ಅಂಬೇಡ್ಕರ್ ಅವರ ಬಗ್ಗೆ ಅಪಾರ ಗೌರವವಿದೆ. ಆದರೆ ಕ್ಷುಲ್ಲಕ ಕಾರಣಕ್ಕೆ ದೇವಾಲಯದ ಜಾಗ ಒತ್ತುವರಿ ಮಾಡಿಕೊಂಡು ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿರುವುದು ಸರಿಯಲ್ಲ. ಗ್ರಾಮದಲ್ಲಿ ಅಶಾಂತಿ ಸೃಷ್ಟಿಸುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ’ ಎಂದು ವಾಲ್ಮೀಕಿ ಸಮುದಾಯದ ಮುಖಂಡರು ಆರೋಪಿಸಿದರು.</p><p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಡಿವೈಎಸ್ಪಿ, ಶಿವಕುಮಾರ್, ವೃತ ನಿರೀಕ್ಷಕ ಸತ್ಯನಾರಾಯಣ, ಸಶಸ್ತ್ರ ಮೀಸಲುಪಡೆಯೊಂದಿಗೆ ಗ್ರಾಮಕ್ಕೆ ಬಂದು ಪರಿಸ್ಥಿತಿ ಹತೋಟಿಗೆ ತಂದಿದ್ದಾರೆ.</p><p>ಎರಡೂ ಗುಂಪುಗಳ ಮುಖಂಡರ ಸಭೆ ಕರೆದು ಮಾತುಕತೆ ನಡೆಸಿದ್ದಾರೆ. ಮಾತುಕತೆ ವಿಫಲವಾಗಿದ್ದು, ಸೋಮವಾರ ಶಾಂತಿ ಸಭೆ ನಡೆಸಿ ಮುಂದಿನ ನಿರ್ಧಾರ ಕೈ ಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.</p><p>ತಹಶೀಲ್ದಾರ್ ಮಹೇಶ್ ಎಸ್.ಪತ್ರಿ, ಜಾಗದ ದಾಖಲೆಗಳ ಪರಿಶೀಲಿಸಿದರು.</p><p>‘ಸಿದ್ದಗಂಗಮ್ಮ ಅವರಿಗೆ ಗ್ರಾಮ ಪಂಚಾಯಿತಿಯಿಂದ ಜಾಗ ಮಂಜೂರಾಗಿದೆ. ಈಗಾಗಲೆ ಅವರು ಬೇರೆ ಕಡೆ ವಾಸಿಸುತ್ತಿದ್ದಾರೆ. ಆ ಜಾಗವನ್ನು ಶನಿಮಹಾತ್ಮ ದೇವಾಲಯಕ್ಕೆ ಬಿಟ್ಟಕೊಟ್ಟಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಮುಂದಿನ ಕ್ರಮ ಕೈ ಗೊಳ್ಳಲಾಗುವುದು’ ಎಂದು ತಹಶೀಲ್ದಾರರು ತಿಳಿಸಿದರು.</p><p>ಈ ಖಾಲಿ ನಿವೇಶನದಲ್ಲಿ ಶನಿವಾರ ರಾತ್ರಿ ಇದ್ದಕ್ಕಿದ್ದಂತೆ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸಿರುವುದು ಗ್ರಾಮದಲ್ಲಿ ಎರಡು ಸಮುದಾಯಗ: ನಡುವೆ ಘರ್ಷಣೆಗೆ ಕಾರಣವಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>