<p><strong>ಚಿಕ್ಕಬಳ್ಳಾಪುರ:</strong> ಎನ್ಕೌಂಟರ್ ಕಾರಣಕ್ಕೆ ಪ್ರಸಿದ್ಧರಾದ ಪೊಲೀಸ್ ಅಧಿಕಾರಿ ದಯಾ ನಾಯಕ್ ಅವರ ಹೆಸರು ಹೇಳಿ ತಾಲ್ಲೂಕಿನ ಸಬ್ಬೇನಹಳ್ಳಿಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿವೃತ್ತ ಹಿರಿಯ ಭೂ ವಿಜ್ಞಾನಿ ಬಿ.ಕೆ. ರಾಮಚಂದ್ರಪ್ಪ ಹಾಗೂ ಇವರ ಪತ್ನಿ ಸುಜಾತ ಅವರಿಗೆ ಸೈಬರ್ ವಂಚಕರು ₹ 12.65 ಲಕ್ಷ ವಂಚಿಸಿದ್ದಾರೆ.</p>.<p>ಈ ಸಂಬಂಧ ಅವರು ಚಿಕ್ಕಬಳ್ಳಾಪುರ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ.</p>.<p>ದಂಪತಿಗೆ ಕರೆ ಮಾಡಿರುವ ಸೈಬರ್ ವಂಚಕರು, ‘ಮುಂಬೈನ ಕೆನರಾ ಬ್ಯಾಂಕಿನಲ್ಲಿ ನಿಮ್ಮ ಹೆಸರಿನ ಖಾತೆ ಇದೆ. ಕೆಲವರು ನಿಮ್ಮ ಖಾತೆಯನ್ನು ಹಣ ಅಕ್ರಮ ವರ್ಗಾವಣೆಗೆ ಬಳಸಿಕೊಂಡಿದ್ದಾರೆ. ಈ ಕಾರಣದಿಂದ ನಿಮ್ಮ ವಿರುದ್ಧ ಬಂಧನದ ಆದೇಶ ಜಾರಿಯಾಗಿದೆ. ಈ ಕೂಡಲೇ ನಿಮ್ಮ ಕೆನರಾ ಬ್ಯಾಂಕ್ ಖಾತೆಗೆ ₹ 12.65 ಲಕ್ಷ ವರ್ಗಾವಣೆ ಮಾಡಿ. ಇಲ್ಲದಿದ್ದರೆ ನಿಮ್ಮನ್ನು ಬಂಧಿಸಬೇಕಾಗುತ್ತದೆ’ ಎಂದು ಭಯಗೊಳಿಸಿದ್ದಾರೆ.</p>.<p>ಸೈಬರ್ ವಂಚಕರ ಈ ಮಾತಿಗೆ ಹೆದರಿದ ದಂಪತಿ ಕೆನರಾ ಬ್ಯಾಂಕ್ ಖಾತೆಗೆ ಹಣವನ್ನು ಆರ್ಟಿಜಿಎಸ್ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಎನ್ಕೌಂಟರ್ ಕಾರಣಕ್ಕೆ ಪ್ರಸಿದ್ಧರಾದ ಪೊಲೀಸ್ ಅಧಿಕಾರಿ ದಯಾ ನಾಯಕ್ ಅವರ ಹೆಸರು ಹೇಳಿ ತಾಲ್ಲೂಕಿನ ಸಬ್ಬೇನಹಳ್ಳಿಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿವೃತ್ತ ಹಿರಿಯ ಭೂ ವಿಜ್ಞಾನಿ ಬಿ.ಕೆ. ರಾಮಚಂದ್ರಪ್ಪ ಹಾಗೂ ಇವರ ಪತ್ನಿ ಸುಜಾತ ಅವರಿಗೆ ಸೈಬರ್ ವಂಚಕರು ₹ 12.65 ಲಕ್ಷ ವಂಚಿಸಿದ್ದಾರೆ.</p>.<p>ಈ ಸಂಬಂಧ ಅವರು ಚಿಕ್ಕಬಳ್ಳಾಪುರ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ.</p>.<p>ದಂಪತಿಗೆ ಕರೆ ಮಾಡಿರುವ ಸೈಬರ್ ವಂಚಕರು, ‘ಮುಂಬೈನ ಕೆನರಾ ಬ್ಯಾಂಕಿನಲ್ಲಿ ನಿಮ್ಮ ಹೆಸರಿನ ಖಾತೆ ಇದೆ. ಕೆಲವರು ನಿಮ್ಮ ಖಾತೆಯನ್ನು ಹಣ ಅಕ್ರಮ ವರ್ಗಾವಣೆಗೆ ಬಳಸಿಕೊಂಡಿದ್ದಾರೆ. ಈ ಕಾರಣದಿಂದ ನಿಮ್ಮ ವಿರುದ್ಧ ಬಂಧನದ ಆದೇಶ ಜಾರಿಯಾಗಿದೆ. ಈ ಕೂಡಲೇ ನಿಮ್ಮ ಕೆನರಾ ಬ್ಯಾಂಕ್ ಖಾತೆಗೆ ₹ 12.65 ಲಕ್ಷ ವರ್ಗಾವಣೆ ಮಾಡಿ. ಇಲ್ಲದಿದ್ದರೆ ನಿಮ್ಮನ್ನು ಬಂಧಿಸಬೇಕಾಗುತ್ತದೆ’ ಎಂದು ಭಯಗೊಳಿಸಿದ್ದಾರೆ.</p>.<p>ಸೈಬರ್ ವಂಚಕರ ಈ ಮಾತಿಗೆ ಹೆದರಿದ ದಂಪತಿ ಕೆನರಾ ಬ್ಯಾಂಕ್ ಖಾತೆಗೆ ಹಣವನ್ನು ಆರ್ಟಿಜಿಎಸ್ ಮಾಡಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>