<p><strong>ಶಿಡ್ಲಘಟ್ಟ:</strong> ಇತ್ತೀಚಿನ ವರ್ಷಗಳಲ್ಲಿ ವಿದ್ಯಾರ್ಥಿಗಳಲ್ಲಷ್ಟೆ ಅಲ್ಲ ಯುವಜನರು ಮತ್ತು ಹಿರಿಯರು ಸೇರಿದಂತೆ ಎಲ್ಲ ವರ್ಗದವರಲ್ಲೂ ಪುಸ್ತಕ ಓದುವ ಅಭ್ಯಾಸ ಮತ್ತು ಹವ್ಯಾಸ ಕಡಿಮೆ ಆಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾರಾಯಣಸ್ವಾಮಿ ಬೇಸರ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಬಶೆಟ್ಟಹಳ್ಳಿ ಹೋಬಳಿ ಗೌಡನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಸಾಪದಿಂದ ಹಮ್ಮಿಕೊಂಡಿದ್ದ ಅಂಬಿಕಾತನಯದತ್ತ ದ.ರಾ.ಬೇಂದ್ರೆ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ನಾಡು ಐತಿಹಾಸಿಕ, ಪೌರಾಣಿಕ, ಪ್ರಾಕೃತಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಎಷ್ಟು ಉನ್ನತ ಸ್ಥಿತಿಯಲ್ಲಿ ಇದ್ದೇವೋ ಅದೇ ರೀತಿ ಸಾಹಿತ್ಯಕ್ಕೆ ಮತ್ತು ಸಾಹಿತಿಗಳಿಗೆ ನಮ್ಮಲ್ಲಿ ಕೊರತೆ ಇಲ್ಲ. ಇಡೀ ಜಗತ್ತಿನ ಸಾಹಿತ್ಯ ಕ್ಷೇತ್ರದ ಗಮನ ಸೆಳೆದ ಸಾಹಿತಿಗಳನ್ನು ನಮ್ಮ ನಾಡು ನೀಡಿದೆ ಎಂದರು.</p>.<p>ದ.ರಾ.ಬೇಂದ್ರೆ ಅವರು ಎಲ್ಲ ವರ್ಗದವರೂ ಓದುವ ಸಾಹಿತ್ಯವನ್ನು ರಚಿಸಿದ್ದು ಅವುಗಳನ್ನು ಎಲ್ಲರೂ ಓದಬೇಕು. ಅವರು ಸಾಹಿತ್ಯದ ಮೂಲಕ ನೀಡಿದ ಸಂದೇಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮ ಬದುಕನ್ನು ಇನ್ನಷ್ಟು ಉತ್ತಮಪಡಿಸಿಕೊಳ್ಳಬೇಕೆಂದು ಕೋರಿದರು.</p>.<p>ಮುಖ್ಯ ಶಿಕ್ಷಕ ಎಂ.ದೇವರಾಜ್ ಮಾತನಾಡಿ, ದ.ರಾ.ಬೇಂದ್ರೆ ಅವರು ಜೀವನದ ಹಾದಿ, ಅವರ ಸಾಹಿತ್ಯಕ್ಕೆ ನೀಡಿದ ಕೊಡುಗೆಗಳ ಬಗ್ಗೆ ವಿವರಿಸಿದರು.</p>.<p>ವಿದ್ಯಾರ್ಥಿಗಳಿಗೆ ನಡೆಸಿದ ಭಾಷಣ, ಕವನ ವಾಚನ, ಗಾಯನ ಸ್ವರ್ಧೆಯಲ್ಲಿ ವಿಜೇತ ವಿನಯ್ ಕುಮಾರ್, ರಾಕೇಶ್, ವರ್ಷಿಣಿ, ಮೋಹಿತ್, ಪೃಥ್ವಿ, ಸಹನ, ಭಾನುಪ್ರಿಯ, ಅಶ್ವಿನಿ, ಗಾನವಿ, ಪಲ್ಲವಿ, ಕೀರ್ತನ ಇನ್ನಿತರೆ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಯಿತು.</p>.<p>ಎಸ್ಡಿಎಂಸಿ ಅಧ್ಯಕ್ಷ ಎಂ.ವೆಂಕಟಶಿವಣ್ಣ, ಸಾಹಿತ್ಯ ಪರಿಷತ್ ಪದಾಧಿಕಾರಿ ಎನ್.ಸುಂದರ್, ಟಿ.ಟಿ.ನರಸಿಂಹಪ್ಪ, ರಾಮಾಂಜನೇಯ, ಡಿ.ಎಸ್.ಸತ್ಯನಾರಾಯಣ ರಾವ್, ಕವಿ ಜಿ.ಎನ್.ಶಾಮ ಸುಂದರ್, ಶಿಕ್ಷಕ ಪ್ರಭಾಕರ್, ಎಂ. ಮಂಜುನಾಥ್, ಕೃಪ, ನಳಿನಾಕ್ಷಿ, ಶ್ಯಾಮಲ, ಸುಪ್ರಿಯ, ಶ್ವೇತ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ಇತ್ತೀಚಿನ ವರ್ಷಗಳಲ್ಲಿ ವಿದ್ಯಾರ್ಥಿಗಳಲ್ಲಷ್ಟೆ ಅಲ್ಲ ಯುವಜನರು ಮತ್ತು ಹಿರಿಯರು ಸೇರಿದಂತೆ ಎಲ್ಲ ವರ್ಗದವರಲ್ಲೂ ಪುಸ್ತಕ ಓದುವ ಅಭ್ಯಾಸ ಮತ್ತು ಹವ್ಯಾಸ ಕಡಿಮೆ ಆಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾರಾಯಣಸ್ವಾಮಿ ಬೇಸರ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಬಶೆಟ್ಟಹಳ್ಳಿ ಹೋಬಳಿ ಗೌಡನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಸಾಪದಿಂದ ಹಮ್ಮಿಕೊಂಡಿದ್ದ ಅಂಬಿಕಾತನಯದತ್ತ ದ.ರಾ.ಬೇಂದ್ರೆ ಜನ್ಮ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ನಾಡು ಐತಿಹಾಸಿಕ, ಪೌರಾಣಿಕ, ಪ್ರಾಕೃತಿಕ, ಸಾಮಾಜಿಕ ಮತ್ತು ರಾಜಕೀಯವಾಗಿ ಎಷ್ಟು ಉನ್ನತ ಸ್ಥಿತಿಯಲ್ಲಿ ಇದ್ದೇವೋ ಅದೇ ರೀತಿ ಸಾಹಿತ್ಯಕ್ಕೆ ಮತ್ತು ಸಾಹಿತಿಗಳಿಗೆ ನಮ್ಮಲ್ಲಿ ಕೊರತೆ ಇಲ್ಲ. ಇಡೀ ಜಗತ್ತಿನ ಸಾಹಿತ್ಯ ಕ್ಷೇತ್ರದ ಗಮನ ಸೆಳೆದ ಸಾಹಿತಿಗಳನ್ನು ನಮ್ಮ ನಾಡು ನೀಡಿದೆ ಎಂದರು.</p>.<p>ದ.ರಾ.ಬೇಂದ್ರೆ ಅವರು ಎಲ್ಲ ವರ್ಗದವರೂ ಓದುವ ಸಾಹಿತ್ಯವನ್ನು ರಚಿಸಿದ್ದು ಅವುಗಳನ್ನು ಎಲ್ಲರೂ ಓದಬೇಕು. ಅವರು ಸಾಹಿತ್ಯದ ಮೂಲಕ ನೀಡಿದ ಸಂದೇಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವ ಮೂಲಕ ನಮ್ಮ ಬದುಕನ್ನು ಇನ್ನಷ್ಟು ಉತ್ತಮಪಡಿಸಿಕೊಳ್ಳಬೇಕೆಂದು ಕೋರಿದರು.</p>.<p>ಮುಖ್ಯ ಶಿಕ್ಷಕ ಎಂ.ದೇವರಾಜ್ ಮಾತನಾಡಿ, ದ.ರಾ.ಬೇಂದ್ರೆ ಅವರು ಜೀವನದ ಹಾದಿ, ಅವರ ಸಾಹಿತ್ಯಕ್ಕೆ ನೀಡಿದ ಕೊಡುಗೆಗಳ ಬಗ್ಗೆ ವಿವರಿಸಿದರು.</p>.<p>ವಿದ್ಯಾರ್ಥಿಗಳಿಗೆ ನಡೆಸಿದ ಭಾಷಣ, ಕವನ ವಾಚನ, ಗಾಯನ ಸ್ವರ್ಧೆಯಲ್ಲಿ ವಿಜೇತ ವಿನಯ್ ಕುಮಾರ್, ರಾಕೇಶ್, ವರ್ಷಿಣಿ, ಮೋಹಿತ್, ಪೃಥ್ವಿ, ಸಹನ, ಭಾನುಪ್ರಿಯ, ಅಶ್ವಿನಿ, ಗಾನವಿ, ಪಲ್ಲವಿ, ಕೀರ್ತನ ಇನ್ನಿತರೆ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಬಹುಮಾನವಾಗಿ ನೀಡಲಾಯಿತು.</p>.<p>ಎಸ್ಡಿಎಂಸಿ ಅಧ್ಯಕ್ಷ ಎಂ.ವೆಂಕಟಶಿವಣ್ಣ, ಸಾಹಿತ್ಯ ಪರಿಷತ್ ಪದಾಧಿಕಾರಿ ಎನ್.ಸುಂದರ್, ಟಿ.ಟಿ.ನರಸಿಂಹಪ್ಪ, ರಾಮಾಂಜನೇಯ, ಡಿ.ಎಸ್.ಸತ್ಯನಾರಾಯಣ ರಾವ್, ಕವಿ ಜಿ.ಎನ್.ಶಾಮ ಸುಂದರ್, ಶಿಕ್ಷಕ ಪ್ರಭಾಕರ್, ಎಂ. ಮಂಜುನಾಥ್, ಕೃಪ, ನಳಿನಾಕ್ಷಿ, ಶ್ಯಾಮಲ, ಸುಪ್ರಿಯ, ಶ್ವೇತ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>