<p><strong>ಚಿಕ್ಕಬಳ್ಳಾಪುರ</strong>: ದಲಿತ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಡುವ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸಿ ದಲಿತರಿಗೆ ಮೋಸ ಮಾಡುತ್ತಿದೆ. ಗ್ಯಾರಂಟಿಗಳಿಗೆ ದಲಿತರ ಹಣ ಬಳಸುವುದಿಲ್ಲ ಎಂದು ಘೋಷಿಸದಿದ್ದಲ್ಲಿ ಎಲ್ಲ ದಲಿತ ಸಂಘಟನೆಗಳು ಒಗ್ಗೂಡಿ ಹೋರಾಟ ನಡೆಸುತ್ತೇವೆ ಎಂದು ಸಮತಾ ಸೈನಿಕ ದಳದ ರಾಜ್ಯ ಘಟಕದ ಅಧ್ಯಕ್ಷ ಜಿ.ಸಿ.ವೆಂಕಟರಮಣಪ್ಪ ಎಚ್ಚರಿಸಿದರು.</p>.<p>ನಗರದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ದಲಿತ ಸಮುದಾಯದ ಕೊಡುಗೆ ಹೆಚ್ಚಿದೆ. ಆದರೆ ನಮ್ಮ ಸಮುದಾಯದ ಬೆನ್ನುಮೂಳೆ ಮುರಿಯುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕಳೆದ 2023-24 ರಿಂದ 2025-26ನೇ ಸಾಲಿನವರೆಗೆ ದಲಿತರಿಗೆ ಮೀಸಲಿಟ್ಟಿದ್ದ ಅನುದಾನದಲ್ಲಿ ಬರೊಬ್ಬರಿ ₹53 ಸಾವಿರ ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗಿದೆ ಎಂದು ಹೇಳಿದರು.</p>.<p>ಪ್ರಸ್ತುತದ ಬಜೆಟ್ನಲ್ಲಿ ದಲಿತ ಸಮುದಾಯಗಳಿಗೆ ಮೀಸಲಿಟ್ಟಿರುವ ₹40 ಸಾವಿರ ಕೋಟಿಯಲ್ಲಿ ₹ 13,433.48 ಕೋಟಿಯನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಿಕೊಂಡಿದೆ. ಉಳಿದ ಅನುದಾನದಲ್ಲಿಯೂ ಶೇ 25 ರಷ್ಟು ಮಾತ್ರ ಬಿಡುಗಡೆ ಮಾಡುವ ಮೂಲಕ ಸಮುದಾಯವನ್ನು ವ್ಯವಸ್ಥಿತವಾಗಿ ತುಳಿಯುವ ಕಾರ್ಯವನ್ನು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. </p>.<p>ಸರ್ಕಾರ ಈಗ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಗ್ಯಾರಂಟಿಗಳಿಗೆ ದಲಿತ ಅನುದಾನ ಬಳಕೆ ಮಾಡುವುದಿಲ್ಲ ಎಂದು ಘೋಷಿಸಬೇಕು. ಸಂವಿಧಾನ ಎಲ್ಲರದ್ದೂ ಆಗಿದ್ದರೂ ಸಂವಿಧಾನ ರಕ್ಷಣೆ ಅಭಿಯಾನಕ್ಕೆ ಕೇವಲ ದಲಿತರ ಅನುದಾನ ಬಳಕೆ ಮಾಡುತ್ತಿರುವುದರಿಂದ ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತಿದೆ. ಈ ನಿಟ್ಟಿನಲ್ಲಿ ಖಜಾನೆಯಿಂದ ಹಣ ನೀಡಬೇಕು ಎಂದು ಆಗ್ರಹಿಸಿದರು.</p>.<p>ಗ್ಯಾರೆಂಟಿಗಳಿಗೆ ಬಳಕೆ ಮಾಡಿಕೊಂಡು ಅನುದಾನ ವಾಪಸ್ ನೀಡಬೇಕು, ಎಸ್ಸಿ-ಎಸ್ಟಿ ನಿಗಮಗಳಿಗೆ ತಲಾ ₹1,500 ಕೋಟಿ ನೀಡಬೇಕು. ಇಲ್ಲವಾದರೆ ಎಲ್ಲ ದಲಿತ ಸಂಘಟನೆಗಳು ಒಗ್ಗೂಡಿ ಮುಖ್ಯಮಂತ್ರಿ ಮನೆ ಮುತ್ತಿಗೆ, ವಿಧಾನಸೌಧ ಚಲೋ, ಸಚಿವರು ಹಾಗು ಶಾಸಕರಿಗೆ ಘೇರವ್ ಹಾಕುತ್ತೇವೆ ಎಂದು ಎಚ್ಚರಿಸಿದರು.</p>.<p>ಬಿ.ಎಚ್.ನರಸಿಂಹಪ್ಪ, ಹರಿಪ್ರಸಾದ್, ಪ್ರಕಾಶ್, ರಮೇಶ್, ಮಹೇಶ್, ಮುನಿರಾಜು, ವೇಣು, ನರಸಿಂಹಮೂರ್ತಿ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ದಲಿತ ಸಮುದಾಯಗಳ ಅಭಿವೃದ್ಧಿಗೆ ಮೀಸಲಿಡುವ ಅನುದಾನವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸಿ ದಲಿತರಿಗೆ ಮೋಸ ಮಾಡುತ್ತಿದೆ. ಗ್ಯಾರಂಟಿಗಳಿಗೆ ದಲಿತರ ಹಣ ಬಳಸುವುದಿಲ್ಲ ಎಂದು ಘೋಷಿಸದಿದ್ದಲ್ಲಿ ಎಲ್ಲ ದಲಿತ ಸಂಘಟನೆಗಳು ಒಗ್ಗೂಡಿ ಹೋರಾಟ ನಡೆಸುತ್ತೇವೆ ಎಂದು ಸಮತಾ ಸೈನಿಕ ದಳದ ರಾಜ್ಯ ಘಟಕದ ಅಧ್ಯಕ್ಷ ಜಿ.ಸಿ.ವೆಂಕಟರಮಣಪ್ಪ ಎಚ್ಚರಿಸಿದರು.</p>.<p>ನಗರದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ದಲಿತ ಸಮುದಾಯದ ಕೊಡುಗೆ ಹೆಚ್ಚಿದೆ. ಆದರೆ ನಮ್ಮ ಸಮುದಾಯದ ಬೆನ್ನುಮೂಳೆ ಮುರಿಯುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕಳೆದ 2023-24 ರಿಂದ 2025-26ನೇ ಸಾಲಿನವರೆಗೆ ದಲಿತರಿಗೆ ಮೀಸಲಿಟ್ಟಿದ್ದ ಅನುದಾನದಲ್ಲಿ ಬರೊಬ್ಬರಿ ₹53 ಸಾವಿರ ಕೋಟಿಯನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗಿದೆ ಎಂದು ಹೇಳಿದರು.</p>.<p>ಪ್ರಸ್ತುತದ ಬಜೆಟ್ನಲ್ಲಿ ದಲಿತ ಸಮುದಾಯಗಳಿಗೆ ಮೀಸಲಿಟ್ಟಿರುವ ₹40 ಸಾವಿರ ಕೋಟಿಯಲ್ಲಿ ₹ 13,433.48 ಕೋಟಿಯನ್ನು ಗ್ಯಾರಂಟಿಗಳಿಗೆ ಬಳಕೆ ಮಾಡಿಕೊಂಡಿದೆ. ಉಳಿದ ಅನುದಾನದಲ್ಲಿಯೂ ಶೇ 25 ರಷ್ಟು ಮಾತ್ರ ಬಿಡುಗಡೆ ಮಾಡುವ ಮೂಲಕ ಸಮುದಾಯವನ್ನು ವ್ಯವಸ್ಥಿತವಾಗಿ ತುಳಿಯುವ ಕಾರ್ಯವನ್ನು ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. </p>.<p>ಸರ್ಕಾರ ಈಗ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಗ್ಯಾರಂಟಿಗಳಿಗೆ ದಲಿತ ಅನುದಾನ ಬಳಕೆ ಮಾಡುವುದಿಲ್ಲ ಎಂದು ಘೋಷಿಸಬೇಕು. ಸಂವಿಧಾನ ಎಲ್ಲರದ್ದೂ ಆಗಿದ್ದರೂ ಸಂವಿಧಾನ ರಕ್ಷಣೆ ಅಭಿಯಾನಕ್ಕೆ ಕೇವಲ ದಲಿತರ ಅನುದಾನ ಬಳಕೆ ಮಾಡುತ್ತಿರುವುದರಿಂದ ಸಮಾಜಕ್ಕೆ ತಪ್ಪು ಸಂದೇಶ ಹೋಗುತ್ತಿದೆ. ಈ ನಿಟ್ಟಿನಲ್ಲಿ ಖಜಾನೆಯಿಂದ ಹಣ ನೀಡಬೇಕು ಎಂದು ಆಗ್ರಹಿಸಿದರು.</p>.<p>ಗ್ಯಾರೆಂಟಿಗಳಿಗೆ ಬಳಕೆ ಮಾಡಿಕೊಂಡು ಅನುದಾನ ವಾಪಸ್ ನೀಡಬೇಕು, ಎಸ್ಸಿ-ಎಸ್ಟಿ ನಿಗಮಗಳಿಗೆ ತಲಾ ₹1,500 ಕೋಟಿ ನೀಡಬೇಕು. ಇಲ್ಲವಾದರೆ ಎಲ್ಲ ದಲಿತ ಸಂಘಟನೆಗಳು ಒಗ್ಗೂಡಿ ಮುಖ್ಯಮಂತ್ರಿ ಮನೆ ಮುತ್ತಿಗೆ, ವಿಧಾನಸೌಧ ಚಲೋ, ಸಚಿವರು ಹಾಗು ಶಾಸಕರಿಗೆ ಘೇರವ್ ಹಾಕುತ್ತೇವೆ ಎಂದು ಎಚ್ಚರಿಸಿದರು.</p>.<p>ಬಿ.ಎಚ್.ನರಸಿಂಹಪ್ಪ, ಹರಿಪ್ರಸಾದ್, ಪ್ರಕಾಶ್, ರಮೇಶ್, ಮಹೇಶ್, ಮುನಿರಾಜು, ವೇಣು, ನರಸಿಂಹಮೂರ್ತಿ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>