<p><strong>ಚಿಂತಾಮಣಿ: </strong>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಡಿಲಿಜಿಯನ್ಸ್ ಸಂಯುಕ್ತ ಪ್ರೌಢಶಾಲೆಯಲ್ಲಿ ದಾಸಶ್ರೇಷ್ಠ ಕನಕದಾಸರ ಜಯಂತಿ ಆಚರಿಸಲಾಯಿತು.</p>.<p>ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕೈವಾರ ಶ್ರೀನಿವಾಸ್ ಮಾತನಾಡಿ, 15ನೇ ಶತಮಾನದಲ್ಲಿ ಭಕ್ತ ಕನಕದಾಸ, ಪುರಂದರದಾಸರು ಭಕ್ತಿಮಾರ್ಗದಿಂದ ಸಮಾಜದಲ್ಲಿನ ಮೌಢ್ಯ ತೊಲಗಿಸಲು ಶ್ರಮಿಸಿದ ಮಹಾನ್ ತ್ಯಾಗಿಗಳಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.</p>.<p>ಸಮಾಜದ ಅನಿಷ್ಟ ಪದ್ಧತಿಗಳಾದ ಜಾತಿಪದ್ಧತಿಯನ್ನು ತೊಲಗಿಸಲು ಕನಕದಾಸರು ಕುಲ ಕುಲವೆಂದು ಹೊಡೆದಾಡದಿರಿ ಎಂಬ ಸಂದೇಶವನ್ನು ಸಮಾಜಕ್ಕೆ ನೀಡಿದ್ದರು. ಸರಳವಾದ ಹಾಗೂ ಜನತೆಗೆ ಸುಲಭ ಅರ್ಥವಾಗುಂತಹ ಆಡುಭಾಷೆಯಲ್ಲಿ ಜನಜಾಗೃತಿ ಮೂಡಿಸುತ್ತಿದ್ದರು ಎಂದರು.</p>.<p>ಕಾಲ್ನಡಿಗೆಯಲ್ಲಿ ಹಳ್ಳಿ ಹಳ್ಳಿ ಸುತ್ತಿ ಸಮಾಜದಲ್ಲಿನ ಮೂಢನಂಬಿಕೆ, ಅಸ್ಪೃಶ್ಯತೆ, ಮಹಿಳೆಯರ ಶೋಷಣೆ ಹೋಗಲಾಡಿಸಲು ಹಗಲಿರುಳು ಶ್ರಮಿಸುತ್ತಿದ್ದರು. ಇಂದಿನ ಜನರು ದಾಸ ಸಾಹಿತ್ಯವನ್ನು ಉಳಿಸಿ ಬೆಳೆಸಬೇಕು. ದಾಸ ಸಾಹಿತ್ಯದ ನೀತಿ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಮುಖ್ಯಶಿಕ್ಷಕ ರಾಜಣ್ಣ ಮಾತನಾಡಿ, ಮಹಾಪುರುಷರನ್ನು ಕುಲ, ಜಾತಿಗಳ ಚೌಕಟ್ಟಿನಲ್ಲಿ ಬಂಧಿಸಬಾರದು. ಸಮಾಜದ ಎಲ್ಲ ವರ್ಗಗಳ ಮಾರ್ಗದರ್ಶಕರು ಹಾಗೂ ಜಾತೀಯತೆ ಹೋಗಲಾಡಿಸಲು ಶ್ರಮಿಸಿದ ಮಹಾತ್ಮರನ್ನು ಒಂದೊಂದು ಜಾತಿಗೆ ಸೀಮಿತಗೊಳಿಸುವುದು ಸಲ್ಲದು. ಸಮಾಜದ ಎಲ್ಲ ವರ್ಗದವರು ಒಗ್ಗೂಡಿ ಮಹಾತ್ಮರ ಜಯಂತಿ ಆಚರಿಸಬೇಕು ಎಂದರು.</p>.<p>ಶಿಕ್ಷಕರಾದ ರಾಮಚಂದ್ರಸಿಂಗ್, ಗೀತಾ, ಮಹಾದೇವಿ, ಶುಭವೆಂಕಟ ರೆಡ್ಡಿ, ಲಕ್ಷ್ಮೀಕುಮಾರ್, ಮುರಳಿ, ಮನೋಹರ್, ಕೃಷ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ: </strong>ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಡಿಲಿಜಿಯನ್ಸ್ ಸಂಯುಕ್ತ ಪ್ರೌಢಶಾಲೆಯಲ್ಲಿ ದಾಸಶ್ರೇಷ್ಠ ಕನಕದಾಸರ ಜಯಂತಿ ಆಚರಿಸಲಾಯಿತು.</p>.<p>ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಡಾ.ಕೈವಾರ ಶ್ರೀನಿವಾಸ್ ಮಾತನಾಡಿ, 15ನೇ ಶತಮಾನದಲ್ಲಿ ಭಕ್ತ ಕನಕದಾಸ, ಪುರಂದರದಾಸರು ಭಕ್ತಿಮಾರ್ಗದಿಂದ ಸಮಾಜದಲ್ಲಿನ ಮೌಢ್ಯ ತೊಲಗಿಸಲು ಶ್ರಮಿಸಿದ ಮಹಾನ್ ತ್ಯಾಗಿಗಳಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.</p>.<p>ಸಮಾಜದ ಅನಿಷ್ಟ ಪದ್ಧತಿಗಳಾದ ಜಾತಿಪದ್ಧತಿಯನ್ನು ತೊಲಗಿಸಲು ಕನಕದಾಸರು ಕುಲ ಕುಲವೆಂದು ಹೊಡೆದಾಡದಿರಿ ಎಂಬ ಸಂದೇಶವನ್ನು ಸಮಾಜಕ್ಕೆ ನೀಡಿದ್ದರು. ಸರಳವಾದ ಹಾಗೂ ಜನತೆಗೆ ಸುಲಭ ಅರ್ಥವಾಗುಂತಹ ಆಡುಭಾಷೆಯಲ್ಲಿ ಜನಜಾಗೃತಿ ಮೂಡಿಸುತ್ತಿದ್ದರು ಎಂದರು.</p>.<p>ಕಾಲ್ನಡಿಗೆಯಲ್ಲಿ ಹಳ್ಳಿ ಹಳ್ಳಿ ಸುತ್ತಿ ಸಮಾಜದಲ್ಲಿನ ಮೂಢನಂಬಿಕೆ, ಅಸ್ಪೃಶ್ಯತೆ, ಮಹಿಳೆಯರ ಶೋಷಣೆ ಹೋಗಲಾಡಿಸಲು ಹಗಲಿರುಳು ಶ್ರಮಿಸುತ್ತಿದ್ದರು. ಇಂದಿನ ಜನರು ದಾಸ ಸಾಹಿತ್ಯವನ್ನು ಉಳಿಸಿ ಬೆಳೆಸಬೇಕು. ದಾಸ ಸಾಹಿತ್ಯದ ನೀತಿ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಮುಖ್ಯಶಿಕ್ಷಕ ರಾಜಣ್ಣ ಮಾತನಾಡಿ, ಮಹಾಪುರುಷರನ್ನು ಕುಲ, ಜಾತಿಗಳ ಚೌಕಟ್ಟಿನಲ್ಲಿ ಬಂಧಿಸಬಾರದು. ಸಮಾಜದ ಎಲ್ಲ ವರ್ಗಗಳ ಮಾರ್ಗದರ್ಶಕರು ಹಾಗೂ ಜಾತೀಯತೆ ಹೋಗಲಾಡಿಸಲು ಶ್ರಮಿಸಿದ ಮಹಾತ್ಮರನ್ನು ಒಂದೊಂದು ಜಾತಿಗೆ ಸೀಮಿತಗೊಳಿಸುವುದು ಸಲ್ಲದು. ಸಮಾಜದ ಎಲ್ಲ ವರ್ಗದವರು ಒಗ್ಗೂಡಿ ಮಹಾತ್ಮರ ಜಯಂತಿ ಆಚರಿಸಬೇಕು ಎಂದರು.</p>.<p>ಶಿಕ್ಷಕರಾದ ರಾಮಚಂದ್ರಸಿಂಗ್, ಗೀತಾ, ಮಹಾದೇವಿ, ಶುಭವೆಂಕಟ ರೆಡ್ಡಿ, ಲಕ್ಷ್ಮೀಕುಮಾರ್, ಮುರಳಿ, ಮನೋಹರ್, ಕೃಷ್ಣ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>