<p><strong>ಚಿಕ್ಕಬಳ್ಳಾಪುರ</strong>: ನಗರದ ಜಿಲ್ಲಾಡಳಿತ ಭವನ (ಪ್ರಜಾಸೌಧ) ಹೊರಭಾಗದಲ್ಲಿ ಪ್ರತಿಭಟನೆ ನಡೆಸಲು ಇನ್ನು ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಅಲ್ಲದೆ ಈ ಕೋರಿಕೆಗೆ ಪೊಲೀಸರು ಸಹ ನಿಶಾನೆ ತೋರಬೇಕು. ಆಗ ಮಾತ್ರ ಪ್ರತಿಭಟನೆ ನಡೆಸಲು ಅವಕಾಶ ದೊರೆಯುತ್ತದೆ!</p>.<p>ಹೌದು ಜಿಲ್ಲಾಡಳಿತ ಭವನದ ಆವರಣದ ಹೊರಭಾಗದಲ್ಲಿ ಅಂದರೆ ರಸ್ತೆ ಬದಿಯಲ್ಲಿ ಪ್ರತಿಭಟನೆ ನಡೆಸಲು ಸಹ ಜಿಲ್ಲಾಡಳಿತ ಒಪ್ಪಿಗೆ ನೀಡಬೇಕು. ಈ ಸಂಬಂಧ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಸಹ ಹೊರಡಿಸಿದ್ದಾರೆ.</p>.<p>‘ಪ್ರಜಾಸೌಧದ ಆವರಣದ ಹೊರಭಾಗದಲ್ಲಿ ಅನುಮತಿ ಪಡೆಯದೆ ಚಳವಳಿಗಳನ್ನು ನಡೆಸುತ್ತಿರುವುದು ಕಂಡು ಬಂದಿರುತ್ತದೆ. ಆದ್ದರಿಂದ ಇನ್ನು ಮುಂದೆ ಯಾವುದೇ ಚಳವಳಿ ಮಾಡಬೇಕಾದಲ್ಲಿ 10 ದಿನಗಳ ಮುಂಚಿತವಾಗಿ ಅನುಮತಿ ಪಡೆಯಲು ಈ ಕಚೇರಿಗೆ ಪತ್ರ ಸಲ್ಲಿಸಬೇಕು. ತಾವು ಸಲ್ಲಿಸಿದ ಕೋರಿಕೆಯನ್ನು ಪೊಲೀಸ್ ಇಲಾಖೆಗೆ ಸಲ್ಲಿಸಿ ಸದರಿ ಇಲಾಖೆಯಿಂದ ಪರಿಶೀಲಿಸಿ ಅನುಮತಿ ನೀಡುವ ಕುರಿತು ಈ ಕಚೇರಿಗೆ ಪ್ರಸ್ತಾವ ಸಲ್ಲಿಸಿದಲ್ಲಿ ಚಳವಳಿ ನಡೆಸಲು ಅನುಮತಿ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. </p>.<p>ಸಂಘಟನೆಗಳ ಆಕ್ರೋಶ: ಹೀಗೆ ಜಿಲ್ಲಾಡಳಿತ ಭವನದ ಹೊರಭಾಗದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಪಡೆಯಬೇಕು ಎನ್ನುವ ಜಿಲ್ಲಾಡಳಿತದ ಆದೇಶಕ್ಕೆ ನಾಗರಿಕರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಇದು ಪ್ರತಿಭಟನೆಯ ಹಕ್ಕು ಕಸಿಯುವ ಯತ್ನ ಎಂದು ಖಂಡಿಸಿವೆ. </p>.<p>‘ಆಡಳಿತಶಾಹಿಗಳಿಂದ ಹೋರಾಟಗಾರರಿಗೆ ಅಂಕುಶ ಹಾಕುವ ಕೆಲಸ. ಇದನ್ನು ಖಂಡಿಸಲೇಬೇಕು’ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ನಗರದ ಜಿಲ್ಲಾಡಳಿತ ಭವನ (ಪ್ರಜಾಸೌಧ) ಹೊರಭಾಗದಲ್ಲಿ ಪ್ರತಿಭಟನೆ ನಡೆಸಲು ಇನ್ನು ಕಡ್ಡಾಯವಾಗಿ ಅನುಮತಿ ಪಡೆಯಬೇಕು. ಅಲ್ಲದೆ ಈ ಕೋರಿಕೆಗೆ ಪೊಲೀಸರು ಸಹ ನಿಶಾನೆ ತೋರಬೇಕು. ಆಗ ಮಾತ್ರ ಪ್ರತಿಭಟನೆ ನಡೆಸಲು ಅವಕಾಶ ದೊರೆಯುತ್ತದೆ!</p>.<p>ಹೌದು ಜಿಲ್ಲಾಡಳಿತ ಭವನದ ಆವರಣದ ಹೊರಭಾಗದಲ್ಲಿ ಅಂದರೆ ರಸ್ತೆ ಬದಿಯಲ್ಲಿ ಪ್ರತಿಭಟನೆ ನಡೆಸಲು ಸಹ ಜಿಲ್ಲಾಡಳಿತ ಒಪ್ಪಿಗೆ ನೀಡಬೇಕು. ಈ ಸಂಬಂಧ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶ ಸಹ ಹೊರಡಿಸಿದ್ದಾರೆ.</p>.<p>‘ಪ್ರಜಾಸೌಧದ ಆವರಣದ ಹೊರಭಾಗದಲ್ಲಿ ಅನುಮತಿ ಪಡೆಯದೆ ಚಳವಳಿಗಳನ್ನು ನಡೆಸುತ್ತಿರುವುದು ಕಂಡು ಬಂದಿರುತ್ತದೆ. ಆದ್ದರಿಂದ ಇನ್ನು ಮುಂದೆ ಯಾವುದೇ ಚಳವಳಿ ಮಾಡಬೇಕಾದಲ್ಲಿ 10 ದಿನಗಳ ಮುಂಚಿತವಾಗಿ ಅನುಮತಿ ಪಡೆಯಲು ಈ ಕಚೇರಿಗೆ ಪತ್ರ ಸಲ್ಲಿಸಬೇಕು. ತಾವು ಸಲ್ಲಿಸಿದ ಕೋರಿಕೆಯನ್ನು ಪೊಲೀಸ್ ಇಲಾಖೆಗೆ ಸಲ್ಲಿಸಿ ಸದರಿ ಇಲಾಖೆಯಿಂದ ಪರಿಶೀಲಿಸಿ ಅನುಮತಿ ನೀಡುವ ಕುರಿತು ಈ ಕಚೇರಿಗೆ ಪ್ರಸ್ತಾವ ಸಲ್ಲಿಸಿದಲ್ಲಿ ಚಳವಳಿ ನಡೆಸಲು ಅನುಮತಿ ನೀಡಲಾಗುವುದು’ ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ. </p>.<p>ಸಂಘಟನೆಗಳ ಆಕ್ರೋಶ: ಹೀಗೆ ಜಿಲ್ಲಾಡಳಿತ ಭವನದ ಹೊರಭಾಗದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ಪಡೆಯಬೇಕು ಎನ್ನುವ ಜಿಲ್ಲಾಡಳಿತದ ಆದೇಶಕ್ಕೆ ನಾಗರಿಕರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಇದು ಪ್ರತಿಭಟನೆಯ ಹಕ್ಕು ಕಸಿಯುವ ಯತ್ನ ಎಂದು ಖಂಡಿಸಿವೆ. </p>.<p>‘ಆಡಳಿತಶಾಹಿಗಳಿಂದ ಹೋರಾಟಗಾರರಿಗೆ ಅಂಕುಶ ಹಾಕುವ ಕೆಲಸ. ಇದನ್ನು ಖಂಡಿಸಲೇಬೇಕು’ ಎಂದು ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>