ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲ್ಲೂಕು ಕಚೇರಿಗೆ ಡಿ.ಸಿ ಭೇಟಿ

Last Updated 18 ಜನವರಿ 2023, 4:33 IST
ಅಕ್ಷರ ಗಾತ್ರ

ಶಿಡ್ಲಘಟ್ಟ: ನಗರದ ತಾಲ್ಲೂಕು ಕಚೇರಿಗೆ ಮಂಗಳವಾರ ಜಿಲ್ಲಾಧಿಕಾರಿ ಎನ್.ಎಂ ನಾಗರಾಜ್ ಭೇಟಿ ನೀಡಿ ತಾಲ್ಲೂಕು ಆಡಳಿತದ ಕಚೇರಿಯ ಸಮಸ್ಯೆ, ಆಡಳಿತ ಕಾರ್ಯಗಳ ಪ್ರಗತಿ ಪರಿಶೀಲಿಸಿ, ಸಾರ್ವಜನಿಕರ ಕುಂದುಕೊರತೆ ಆಲಿಸಿದರು.

ರಾಜ್ಯ ಸರ್ಕಾರದ ಆದೇಶದನ್ವಯ ಪ್ರತಿ ಮಂಗಳವಾರ ಜಿಲ್ಲೆಯ ತಹಶೀಲ್ದಾರ್ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ತಹಶೀಲ್ದಾರ್ ಕಚೇರಿಗೆ ಜಿಲ್ಲಾಧಿಕಾರಿ ಮಂಗಳವಾರ ಭೇಟಿ ನೀಡಿ ಪರಿಶೀಲನೆ
ನಡೆಸಿದರು.

ತಾಲ್ಲೂಕಿನ ವಿವಿಧ ಗ್ರಾಮಗಳ ಜನರು ತಮ್ಮ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು. ಆಧಾರ್ ನೋಂದಣಿ, ಪಹಣಿ, ಜಾತಿ, ಆದಾಯ ಪ್ರಮಾಣ ಪತ್ರ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿ, ಮೂಲಸೌಕರ್ಯಗಳ ಕುರಿತು ಮಾಹಿತಿ ಪಡೆದರು.

ಮತಗಟ್ಟೆ ಸಂಖ್ಯೆ 142ರಲ್ಲಿ ಪರಿಶೀಲನೆ: ವಿನಾಕಾರಣ ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸದೇ ತ್ವರಿತ ಸೇವೆ ನೀಡಿ ಸಮಸ್ಯೆಗಳನ್ನು ತಕ್ಷಣವೇ ವಿಲೇವಾರಿ ಮಾಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ತಾಲ್ಲೂಕು ಆಡಳಿತದಲ್ಲಿನ ಸಿಬ್ಬಂದಿ ಕೊರತೆ, ಸಾರ್ವಜನಿಕರಿಗೆ ಒದಗಿಸುವ ಸೇವೆ, ಜನರ ಕುಂದು ಕೊರತೆ, ಆಡಳಿತದ ಕಾರ್ಯವೈಖರಿ ಪರಿಶೀಲನೆ ನಡೆಸಿ ಅದರ ಸುಧಾರಣೆಗೆ ಅಗತ್ಯ ಸೌಲಭ್ಯ ಒದಗಿಸಲು ಅಧಿಕಾರಿಗಳಿಗೆ ಸಲಹೆ, ಸೂಚನೆಗಳನ್ನು ನೀಡಿದರು. ನಂತರ ಶಿಡ್ಲಘಟ್ಟ ನಗರದ ಮತಗಟ್ಟೆ ಸಂಖ್ಯೆ 142ಕ್ಕೆ ಭೇಟಿ ನೀಡಿ ಮತಗಟ್ಟೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿವರ ಪರಿಶೀಲನೆ ಮಾಡಿದರು.

ತಹಶೀಲ್ದಾರ್ ರಾಜೀವ್, ಪೌರಾಯುಕ್ತ ಶ್ರೀಕಾಂತ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT