<p><strong>ಗೌರಿಬಿದನೂರು:</strong> ‘ಗ್ರಾಮೀಣ ಭಾಗದ ಪ್ರತಿ ಹಳ್ಳಿಯಲ್ಲಿನ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯ ಕಲ್ಪಿಸುವ ಮೂಲಕ ಅವರ ಬದುಕಿಗೆ ಡಿಸಿಸಿ ಬ್ಯಾಂಕ್ ಆಸರೆಯಾಗಿದೆ. ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಜವಾಬ್ದಾರಿ ನಿಮ್ಮೆಲ್ಲರದ್ದಾಗಿದೆ’ ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.</p>.<p>ತಾಲ್ಲೂಕಿನ ಚಂದನದೂರಿನಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಆಯೋಜಿಸಿದ್ದ ಸಾಲದ ಚೆಕ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕೋವಿಡ್ ಸಂಕಷ್ಟದಲ್ಲಿ ಪ್ರತಿ ಮನೆಯಲ್ಲಿನ ಆದಾಯದ ಮೂಲಗಳು ಸ್ಥಗಿತಗೊಂಡ ಕಾರಣವಾಗಿ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಈ ನಿಟ್ಟಿನಲ್ಲಿಸ್ವಾವಲಂಬಿ ಬದುಕು ಸಾಗಿಸುವ ಮಹಿಳೆಯರ ಕೈಯನ್ನು ಬಲಪಡಿಸುವ ಉದ್ದೇಶದಿಂದ ಡಿಸಿಸಿ ಬ್ಯಾಂಕ್ ಬಡ್ಡಿ ರಹಿತವಾಗಿ ಸ್ತ್ರೀ ಶಕ್ತಿ ಸಂಘಗಳ ಮೂಲಕ ಸಾಲವನ್ನು ನೀಡುತ್ತಿದ್ದು, ಮಹಿಳೆಯರು ಅದರ ಸದುಪಯೋಗವನ್ನು ಪಡೆದುಕೊಂಡು ಕುಟುಂಬ ನಿರ್ವಹಣೆಯ ಜತೆಗೆ ಆರ್ಥಿಕವಾಗಿ ಸಬಲರಾಗಲು ಸಹಕಾರಿಯಾಗಲಿದೆ’ ಎಂದು ಹೇಳಿದರು.</p>.<p>ಡಿಸಿಸಿ ಬ್ಯಾಂಕ್ ನಿರ್ದೇಶಕ ಮರಳೂರು ಹನುಮಂತರೆಡ್ಡಿ ಮಾತನಾಡಿ, ‘ಅವಿಭಜಿತ ಜಿಲ್ಲೆಗಳಲ್ಲಿ ಗ್ರಾಮೀಣ ಭಾಗದ ಮಹಿಳೆಯರ ಬದುಕಿಗೆ ಡಿಸಿಸಿ ಬ್ಯಾಂಕ್ ಆಸರೆಯಾಗಿದೆ. ಸಕಾಲದಲ್ಲಿ ಅವರ ಸಂಕಷ್ಟಕ್ಕೆಸ್ಪಂದಿಸುವ ಮೂಲಕ ಸಾಕಷ್ಟು ಕುಟುಂಬಗಳಿಗೆ ಬೆನ್ನೆಲುಬಾಗಿದೆ. ಮಹಿಳೆಯರು ತಮ್ಮ ಗ್ರಾಮಗಳಲ್ಲಿಯೇ ಹೈನುಗಾರಿಕೆ, ಕೋಳಿ ಸಾಕಾಣಿಕೆ, ಆಹಾರ ಪದಾರ್ಥಗಳ ಸಿದ್ಧ<br />ಪಡಿಸುವಿಕೆ ಸೇರಿದಂತೆ ಇನ್ನಿತರ ಸ್ವಉದ್ಯೋಗಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.</p>.<p>ಚಂದನದೂರು ವ್ಯವಸಾಯ ಸೇವಾ ಸಂಘಗಳ ಅಡಿಯಲ್ಲಿನ ಒಟ್ಟು 16 ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳಿಗೆ ₹80 ಲಕ್ಷ ಸಾಲದ ಚೆಕ್ ಅನ್ನು ವಿತರಿಸಲಾಗಿದೆ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಮಹಮದ್ ಅಸ್ಲಾಂ ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಚಂದನದೂರು ವಿ.ಎಸ್.ಎಸ್.ಎನ್ ಅಧ್ಯಕ್ಷರಾದ ಸಿ.ಆರ್.ನರಸಿಂಹಮೂರ್ತಿ, ಉಪಾಧ್ಯಕ್ಷರಾದ ನಂಜುಂಡಪ್ಪ, ಮುಖಂಡರಾದ ತಿಮ್ಮಾರೆಡ್ಡಿ, ಎಚ್.ಎನ್.ಪ್ರಕಾಶರೆಡ್ಡಿ, ವರಲಕ್ಷ್ಮಿ, ವಿಎಸ್ ಎಸ್ ಎನ್ ನಿರ್ದೇಶಕರಾದ ಹನುಮಂತಪ್ಪ, ಶ್ರೀರಾಮಪ್ಪ, ಕಾರ್ಯದರ್ಶಿ ರಾಮಲಿಂಗ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ‘ಗ್ರಾಮೀಣ ಭಾಗದ ಪ್ರತಿ ಹಳ್ಳಿಯಲ್ಲಿನ ಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಸಾಲ ಸೌಲಭ್ಯ ಕಲ್ಪಿಸುವ ಮೂಲಕ ಅವರ ಬದುಕಿಗೆ ಡಿಸಿಸಿ ಬ್ಯಾಂಕ್ ಆಸರೆಯಾಗಿದೆ. ಪಡೆದ ಸಾಲವನ್ನು ಸಕಾಲದಲ್ಲಿ ಮರುಪಾವತಿ ಮಾಡುವ ಜವಾಬ್ದಾರಿ ನಿಮ್ಮೆಲ್ಲರದ್ದಾಗಿದೆ’ ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ತಿಳಿಸಿದರು.</p>.<p>ತಾಲ್ಲೂಕಿನ ಚಂದನದೂರಿನಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಆಯೋಜಿಸಿದ್ದ ಸಾಲದ ಚೆಕ್ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕೋವಿಡ್ ಸಂಕಷ್ಟದಲ್ಲಿ ಪ್ರತಿ ಮನೆಯಲ್ಲಿನ ಆದಾಯದ ಮೂಲಗಳು ಸ್ಥಗಿತಗೊಂಡ ಕಾರಣವಾಗಿ ಕುಟುಂಬ ನಿರ್ವಹಣೆ ಕಷ್ಟವಾಗಿದೆ. ಈ ನಿಟ್ಟಿನಲ್ಲಿಸ್ವಾವಲಂಬಿ ಬದುಕು ಸಾಗಿಸುವ ಮಹಿಳೆಯರ ಕೈಯನ್ನು ಬಲಪಡಿಸುವ ಉದ್ದೇಶದಿಂದ ಡಿಸಿಸಿ ಬ್ಯಾಂಕ್ ಬಡ್ಡಿ ರಹಿತವಾಗಿ ಸ್ತ್ರೀ ಶಕ್ತಿ ಸಂಘಗಳ ಮೂಲಕ ಸಾಲವನ್ನು ನೀಡುತ್ತಿದ್ದು, ಮಹಿಳೆಯರು ಅದರ ಸದುಪಯೋಗವನ್ನು ಪಡೆದುಕೊಂಡು ಕುಟುಂಬ ನಿರ್ವಹಣೆಯ ಜತೆಗೆ ಆರ್ಥಿಕವಾಗಿ ಸಬಲರಾಗಲು ಸಹಕಾರಿಯಾಗಲಿದೆ’ ಎಂದು ಹೇಳಿದರು.</p>.<p>ಡಿಸಿಸಿ ಬ್ಯಾಂಕ್ ನಿರ್ದೇಶಕ ಮರಳೂರು ಹನುಮಂತರೆಡ್ಡಿ ಮಾತನಾಡಿ, ‘ಅವಿಭಜಿತ ಜಿಲ್ಲೆಗಳಲ್ಲಿ ಗ್ರಾಮೀಣ ಭಾಗದ ಮಹಿಳೆಯರ ಬದುಕಿಗೆ ಡಿಸಿಸಿ ಬ್ಯಾಂಕ್ ಆಸರೆಯಾಗಿದೆ. ಸಕಾಲದಲ್ಲಿ ಅವರ ಸಂಕಷ್ಟಕ್ಕೆಸ್ಪಂದಿಸುವ ಮೂಲಕ ಸಾಕಷ್ಟು ಕುಟುಂಬಗಳಿಗೆ ಬೆನ್ನೆಲುಬಾಗಿದೆ. ಮಹಿಳೆಯರು ತಮ್ಮ ಗ್ರಾಮಗಳಲ್ಲಿಯೇ ಹೈನುಗಾರಿಕೆ, ಕೋಳಿ ಸಾಕಾಣಿಕೆ, ಆಹಾರ ಪದಾರ್ಥಗಳ ಸಿದ್ಧ<br />ಪಡಿಸುವಿಕೆ ಸೇರಿದಂತೆ ಇನ್ನಿತರ ಸ್ವಉದ್ಯೋಗಗಳನ್ನು ಕೈಗೊಳ್ಳಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.</p>.<p>ಚಂದನದೂರು ವ್ಯವಸಾಯ ಸೇವಾ ಸಂಘಗಳ ಅಡಿಯಲ್ಲಿನ ಒಟ್ಟು 16 ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳಿಗೆ ₹80 ಲಕ್ಷ ಸಾಲದ ಚೆಕ್ ಅನ್ನು ವಿತರಿಸಲಾಗಿದೆ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಮಹಮದ್ ಅಸ್ಲಾಂ ತಿಳಿಸಿದರು.</p>.<p>ಕಾರ್ಯಕ್ರಮದಲ್ಲಿ ಚಂದನದೂರು ವಿ.ಎಸ್.ಎಸ್.ಎನ್ ಅಧ್ಯಕ್ಷರಾದ ಸಿ.ಆರ್.ನರಸಿಂಹಮೂರ್ತಿ, ಉಪಾಧ್ಯಕ್ಷರಾದ ನಂಜುಂಡಪ್ಪ, ಮುಖಂಡರಾದ ತಿಮ್ಮಾರೆಡ್ಡಿ, ಎಚ್.ಎನ್.ಪ್ರಕಾಶರೆಡ್ಡಿ, ವರಲಕ್ಷ್ಮಿ, ವಿಎಸ್ ಎಸ್ ಎನ್ ನಿರ್ದೇಶಕರಾದ ಹನುಮಂತಪ್ಪ, ಶ್ರೀರಾಮಪ್ಪ, ಕಾರ್ಯದರ್ಶಿ ರಾಮಲಿಂಗ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>