<p>ಚಿಕ್ಕಬಳ್ಳಾಪುರ: ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಗಳ ಮೇಲಿನ ಆಡಳಿತಾತ್ಮಕ ನಿಯಂತ್ರಣವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ವಹಿಸುವ ಕುರಿತ ಪ್ರಸ್ತಾವವನ್ನು ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದಿಂದ ನಗರದ ಜಿಲ್ಲಾಡಳಿತ ಭವನದ ಎದುರು ಗುರುವಾರ ಪ್ರತಿಭಟನೆ ನಡೆಯಿತು. </p>.<p>ಸರ್ಕಾರ ನಿರ್ಧಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಉಪನ್ಯಾಸಕರು ಈ ನಿರ್ಧಾರ ಕೈಬಿಡಬೇಕು ಎಂದು ಆಗ್ರಹಿಸಿದರು. ನಂತರ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಅವರ ಮೂಲಕ ಮನವಿ ಸಲ್ಲಿಸಿದರು.</p>.<p>ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿದ್ದ ಪರೀಕ್ಷಾ ವಿಭಾಗವನ್ನು ಈ ಹಿಂದೆ ಇದ್ದಂತೆಯೇ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶನಾಲಯಕ್ಕೆ ಮರಳಿ ವರ್ಗಾಯಿಸಬೇಕು ಎಂದರು.</p>.<p>ಸರ್ಕಾರ ನಮ್ಮ ಈ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕು. ಇಲ್ಲಿದ್ದರೆ 2026ರ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ–1ರ ಉತ್ತರ ಪತ್ರಿಕೆಗಳ ಮೌಲ್ಯಮಾನವನ್ನು ರಾಜ್ಯದ ಎಲ್ಲ ಮೌಲ್ಯಮಾಪನ ಕೇಂದ್ರಗಳಲ್ಲಿ ಬಹಿಷ್ಕರಿಸುತ್ತೇವೆ. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತೇವೆ ಎಂದು ಪ್ರತಿಭಟನಕಾರರು ಎಚ್ಚರಿಸಿದರು. </p>.<p>ಸಂಘದ ಜಿಲ್ಲಾ ಅಧ್ಯಕ್ಷ ಮುನಿರೆಡ್ಡಿ, ಕಾರ್ಯಾಧ್ಯಕ್ಷ ಎಂ.ಜಿ ರವೀಂದ್ರ, ಪ್ರಧಾನ ಕಾರ್ಯದರ್ಶಿ ಬಸವರಾಜು ಎಚ್.ಚಿಕ್ಕಣಜಿ, ಕೋಶಾಧ್ಯಕ್ಷ ನಂಜರೆಡ್ಡಿ, ಪ್ರಾಂಶುಪಾಲರ ಸಂಘದ ಜಿಲ್ಲಾ ಅಧ್ಯಕ್ಷ ಸತ್ಯೇಂದ್ರ, ಕಾರ್ಯದರ್ಶಿ ರವೀಂದ್ರ, ಖಜಾಂಚಿ ಗೋವಿಂದಪ್ಪ, ವಿವಿಧ ತಾಲ್ಲೂಕು ಸಂಘದ ಪದಾಧಿಕಾರಿಗಳು, ಉಪನ್ಯಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿಗಳ ಮೇಲಿನ ಆಡಳಿತಾತ್ಮಕ ನಿಯಂತ್ರಣವನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ವಹಿಸುವ ಕುರಿತ ಪ್ರಸ್ತಾವವನ್ನು ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದಿಂದ ನಗರದ ಜಿಲ್ಲಾಡಳಿತ ಭವನದ ಎದುರು ಗುರುವಾರ ಪ್ರತಿಭಟನೆ ನಡೆಯಿತು. </p>.<p>ಸರ್ಕಾರ ನಿರ್ಧಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಉಪನ್ಯಾಸಕರು ಈ ನಿರ್ಧಾರ ಕೈಬಿಡಬೇಕು ಎಂದು ಆಗ್ರಹಿಸಿದರು. ನಂತರ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಅವರ ಮೂಲಕ ಮನವಿ ಸಲ್ಲಿಸಿದರು.</p>.<p>ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿದ್ದ ಪರೀಕ್ಷಾ ವಿಭಾಗವನ್ನು ಈ ಹಿಂದೆ ಇದ್ದಂತೆಯೇ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶನಾಲಯಕ್ಕೆ ಮರಳಿ ವರ್ಗಾಯಿಸಬೇಕು ಎಂದರು.</p>.<p>ಸರ್ಕಾರ ನಮ್ಮ ಈ ಬೇಡಿಕೆಗಳನ್ನು ತಕ್ಷಣವೇ ಈಡೇರಿಸಬೇಕು. ಇಲ್ಲಿದ್ದರೆ 2026ರ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ–1ರ ಉತ್ತರ ಪತ್ರಿಕೆಗಳ ಮೌಲ್ಯಮಾನವನ್ನು ರಾಜ್ಯದ ಎಲ್ಲ ಮೌಲ್ಯಮಾಪನ ಕೇಂದ್ರಗಳಲ್ಲಿ ಬಹಿಷ್ಕರಿಸುತ್ತೇವೆ. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಬೋಧಕೇತರ ಸಿಬ್ಬಂದಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತೇವೆ ಎಂದು ಪ್ರತಿಭಟನಕಾರರು ಎಚ್ಚರಿಸಿದರು. </p>.<p>ಸಂಘದ ಜಿಲ್ಲಾ ಅಧ್ಯಕ್ಷ ಮುನಿರೆಡ್ಡಿ, ಕಾರ್ಯಾಧ್ಯಕ್ಷ ಎಂ.ಜಿ ರವೀಂದ್ರ, ಪ್ರಧಾನ ಕಾರ್ಯದರ್ಶಿ ಬಸವರಾಜು ಎಚ್.ಚಿಕ್ಕಣಜಿ, ಕೋಶಾಧ್ಯಕ್ಷ ನಂಜರೆಡ್ಡಿ, ಪ್ರಾಂಶುಪಾಲರ ಸಂಘದ ಜಿಲ್ಲಾ ಅಧ್ಯಕ್ಷ ಸತ್ಯೇಂದ್ರ, ಕಾರ್ಯದರ್ಶಿ ರವೀಂದ್ರ, ಖಜಾಂಚಿ ಗೋವಿಂದಪ್ಪ, ವಿವಿಧ ತಾಲ್ಲೂಕು ಸಂಘದ ಪದಾಧಿಕಾರಿಗಳು, ಉಪನ್ಯಾಸಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>