ಆರ್ಥಿಕವಾಗಿ ಸದೃಢವಾಗಿರುವ ಕುಟುಂಬಗಳು ಸೇರಿದಂತೆ ಸಾರಿಗೆ, ಶಿಕ್ಷಣ, ವಿದ್ಯುತ್, ರೈಲ್ವೆ, ಪೊಲೀಸ್ ಹಾಗೂ ಅಂಚೆ ಇಲಾಖೆ ಸೇರಿದಂತೆ ಸರ್ಕಾರಿ ಹಾಗೂ ಅನುದಾನಿತ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರರ ಹೆಸರನ್ನು ಹೊರತುಪಡಿಸಿ ಕುಟುಂಬದ ಇತರ ಸದಸ್ಯರ ಹೆಸರಿನಲ್ಲಿ ಬಿಪಿಎಲ್ ಹಾಗೂ ಎಎವೈ ಪಡಿತರ ಚೀಟಿ ಪಡೆದಿರುತ್ತಾರೆ. ಇಂತಹವರು ಕೂಡಲೇ ತಮ್ಮ ಪಡಿತರ ಚೀಟಿಗಳನ್ನು ಹಿಂದಿರುಗಿಸಬೇಕು. ಇಲ್ಲವಾದಲ್ಲಿ ಅಂತಹ ಕುಟುಂಬಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.