<p><strong>ಚಿಕ್ಕಬಳ್ಳಾಪುರ:</strong> ಡೀಮ್ಡ್ ಅರಣ್ಯ ವಿಸ್ತೀರ್ಣ ಪುನರ್ ಪರಿಶೀಲನೆಗೆ ನಡೆಸುತ್ತಿರುವ ಜಂಟಿ ಸಮೀಕ್ಷೆ ಶೇ70ರಷ್ಟು ಪೂರ್ಣಗೊಂಡಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಶನಿವಾರ ತಿಳಿಸಿದರು. </p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಡೀಮ್ಡ್ ಅರಣ್ಯ ಪ್ರದೇಶ ವಿಸ್ತೀರ್ಣಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ಗೆ 2022ರಲ್ಲಿ ಸರ್ಕಾರ ಮಾಹಿತಿ ನೀಡಿತ್ತು. ಆ ಪ್ರಮಾಣ ಪತ್ರದಲ್ಲಿ ಲೋಪದೋಷ ಗಳಿದ್ದವು. ಅದನ್ನು ಸರಿಪಡಿಸಲು ನಡೆಸುತ್ತಿರುವ ಜಂಟಿ ಸಮೀಕ್ಷೆ ಶೇ 70ರಷ್ಟು ಪೂರ್ಣಗೊಂಡಿದೆ ಎಂದರು.</p><p>ಸರ್ಕಾರಿ ಕಟ್ಟಡ, ಪಟ್ಟಾ ಭೂಮಿಯೂ ಡೀಮ್ಡ್ ಅರಣ್ಯದ ಪಟ್ಟಿಯಲ್ಲಿವೆ. ಜಂಟಿ ಸರ್ವೆಯನ್ನು ಬೇಗ ಪೂರ್ಣಗೊಳಿಸಿ ವರದಿ ಸಲ್ಲಿಸಲು ಅರಣ್ಯ, ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.</p><p>2015ರ ನಂತರ ಆಗಿರುವ ಅರಣ್ಯ ಒತ್ತುವರಿ ಮತ್ತು 2015ರ ಪೂರ್ವದಲ್ಲಿ ಪಟ್ಟಾ ಜಮೀನು ಸೇರಿ 3 ಎಕರೆ<br>ಗಿಂತ ಹೆಚ್ಚಿನ ಅರಣ್ಯ ಭೂಮಿ ಒತ್ತುವರಿ ಆಗಿದ್ದಲ್ಲಿ ಅದ್ಯತೆ ಮೇಲೆ ತೆರವಿಗೆ ಸೂಚಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಡೀಮ್ಡ್ ಅರಣ್ಯ ವಿಸ್ತೀರ್ಣ ಪುನರ್ ಪರಿಶೀಲನೆಗೆ ನಡೆಸುತ್ತಿರುವ ಜಂಟಿ ಸಮೀಕ್ಷೆ ಶೇ70ರಷ್ಟು ಪೂರ್ಣಗೊಂಡಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಶನಿವಾರ ತಿಳಿಸಿದರು. </p><p>ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಡೀಮ್ಡ್ ಅರಣ್ಯ ಪ್ರದೇಶ ವಿಸ್ತೀರ್ಣಕ್ಕೆ ಸಂಬಂಧಿಸಿ ಸುಪ್ರೀಂ ಕೋರ್ಟ್ಗೆ 2022ರಲ್ಲಿ ಸರ್ಕಾರ ಮಾಹಿತಿ ನೀಡಿತ್ತು. ಆ ಪ್ರಮಾಣ ಪತ್ರದಲ್ಲಿ ಲೋಪದೋಷ ಗಳಿದ್ದವು. ಅದನ್ನು ಸರಿಪಡಿಸಲು ನಡೆಸುತ್ತಿರುವ ಜಂಟಿ ಸಮೀಕ್ಷೆ ಶೇ 70ರಷ್ಟು ಪೂರ್ಣಗೊಂಡಿದೆ ಎಂದರು.</p><p>ಸರ್ಕಾರಿ ಕಟ್ಟಡ, ಪಟ್ಟಾ ಭೂಮಿಯೂ ಡೀಮ್ಡ್ ಅರಣ್ಯದ ಪಟ್ಟಿಯಲ್ಲಿವೆ. ಜಂಟಿ ಸರ್ವೆಯನ್ನು ಬೇಗ ಪೂರ್ಣಗೊಳಿಸಿ ವರದಿ ಸಲ್ಲಿಸಲು ಅರಣ್ಯ, ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.</p><p>2015ರ ನಂತರ ಆಗಿರುವ ಅರಣ್ಯ ಒತ್ತುವರಿ ಮತ್ತು 2015ರ ಪೂರ್ವದಲ್ಲಿ ಪಟ್ಟಾ ಜಮೀನು ಸೇರಿ 3 ಎಕರೆ<br>ಗಿಂತ ಹೆಚ್ಚಿನ ಅರಣ್ಯ ಭೂಮಿ ಒತ್ತುವರಿ ಆಗಿದ್ದಲ್ಲಿ ಅದ್ಯತೆ ಮೇಲೆ ತೆರವಿಗೆ ಸೂಚಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>