<p><strong>ಗೌರಿಬಿದನೂರು:</strong> ದೀಪಾವಳಿ ಹಬ್ಬದ ಅಂಗವಾಗಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಜಿ.ಪಂ. ಸದಸ್ಯ ಕೆ. ಕೆಂಪರಾಜು ಭೇಟಿ ನೀಡಿ ಜನತೆಗೆ ಹಬ್ಬದ ಉಡುಗೊರೆ ಹಾಗೂ ಸಿಹಿ ವಿತರಿಸಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.</p>.<p>ಬಳಿಕ ಮಾತನಾಡಿದ ಅವರು, ಈ ಬಾರಿಯ ದೀಪಾವಳಿ ಹಬ್ಬದ ಆಚರಣೆಗೆ ಕೊರೊನಾ ಕಪ್ಪುಚುಕ್ಕೆಯಂತಿದೆ. ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮೂರು ಹಂತದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿ ಆರ್ಥಿಕ ನೆರವು ನೀಡಲಾಗಿದೆ. ಮುಂದಿನ ದಿನಗಳಲ್ಲಿ ನೆರವಿನ ಅಗತ್ಯವಿರುವ ಪ್ರತಿ ಮನೆಗೆ ಭೇಟಿ ಮಾಡಿ ಸ್ಪಂದಿಸಲಾಗುವುದು ಎಂದು ತಿಳಿಸಿದರು.</p>.<p>ಗ್ರಾಮೀಣ ಭಾಗದಲ್ಲಿ ಆಯೋಜಿಸುವ ಧಾರ್ಮಿಕ ಮತ್ತು ಶೈಕ್ಷಣಿಕ ಕಾರ್ಯಗಳು ಸ್ಥಳೀಯ ಜನರ ನಡುವೆ ನಂಬಿಕೆ ಮತ್ತು ವಿಶ್ವಾಸವನ್ನು ಬೆಳೆಸುತ್ತವೆ. ಜತೆಗೆ ಪ್ರತಿಯೊಬ್ಬರಲ್ಲಿ ಸೋದರತ್ವ ಭಾವನೆ ಮೂಡಿಸಿ ಶಾಂತಿ, ಸೌಹಾರ್ದ ಹಾಗೂ ಸಾಮರಸ್ಯ ಮೂಡಿಸುತ್ತವೆ ಎಂದು<br />ಹೇಳಿದರು.</p>.<p>ಜನತೆ ಸಂಕಷ್ಟದ ನಡುವೆಯೂ ಸರಳವಾಗಿ ಸಂಸ್ಕೃತಿಗೆ ಪೂರಕವಾಗಿ ಹಬ್ಬ ಆಚರಣೆ ಮಾಡುತ್ತಿರುವುದು ವಿಶೇಷವಾಗಿದೆ. ಇದರಿಂದ ದೇಶದ ಪಾವಿತ್ರ್ಯ ಉಳಿಯಲು ಸಾಧ್ಯವಾಗುತ್ತದೆ ಎಂದರು.</p>.<p>ಮುಖಂಡರಾದ ವೇದಲವೇಣಿ ರಾಮು, ಮುದುಗೆರೆ ರಾಜಶೇಖರ್, ಸತೀಶ್, ಗಂಗಾಧರಪ್ಪ, ಎಚ್.ಎಲ್. ವೆಂಕಟೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ದೀಪಾವಳಿ ಹಬ್ಬದ ಅಂಗವಾಗಿ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ಜಿ.ಪಂ. ಸದಸ್ಯ ಕೆ. ಕೆಂಪರಾಜು ಭೇಟಿ ನೀಡಿ ಜನತೆಗೆ ಹಬ್ಬದ ಉಡುಗೊರೆ ಹಾಗೂ ಸಿಹಿ ವಿತರಿಸಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.</p>.<p>ಬಳಿಕ ಮಾತನಾಡಿದ ಅವರು, ಈ ಬಾರಿಯ ದೀಪಾವಳಿ ಹಬ್ಬದ ಆಚರಣೆಗೆ ಕೊರೊನಾ ಕಪ್ಪುಚುಕ್ಕೆಯಂತಿದೆ. ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮೂರು ಹಂತದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿ ಆರ್ಥಿಕ ನೆರವು ನೀಡಲಾಗಿದೆ. ಮುಂದಿನ ದಿನಗಳಲ್ಲಿ ನೆರವಿನ ಅಗತ್ಯವಿರುವ ಪ್ರತಿ ಮನೆಗೆ ಭೇಟಿ ಮಾಡಿ ಸ್ಪಂದಿಸಲಾಗುವುದು ಎಂದು ತಿಳಿಸಿದರು.</p>.<p>ಗ್ರಾಮೀಣ ಭಾಗದಲ್ಲಿ ಆಯೋಜಿಸುವ ಧಾರ್ಮಿಕ ಮತ್ತು ಶೈಕ್ಷಣಿಕ ಕಾರ್ಯಗಳು ಸ್ಥಳೀಯ ಜನರ ನಡುವೆ ನಂಬಿಕೆ ಮತ್ತು ವಿಶ್ವಾಸವನ್ನು ಬೆಳೆಸುತ್ತವೆ. ಜತೆಗೆ ಪ್ರತಿಯೊಬ್ಬರಲ್ಲಿ ಸೋದರತ್ವ ಭಾವನೆ ಮೂಡಿಸಿ ಶಾಂತಿ, ಸೌಹಾರ್ದ ಹಾಗೂ ಸಾಮರಸ್ಯ ಮೂಡಿಸುತ್ತವೆ ಎಂದು<br />ಹೇಳಿದರು.</p>.<p>ಜನತೆ ಸಂಕಷ್ಟದ ನಡುವೆಯೂ ಸರಳವಾಗಿ ಸಂಸ್ಕೃತಿಗೆ ಪೂರಕವಾಗಿ ಹಬ್ಬ ಆಚರಣೆ ಮಾಡುತ್ತಿರುವುದು ವಿಶೇಷವಾಗಿದೆ. ಇದರಿಂದ ದೇಶದ ಪಾವಿತ್ರ್ಯ ಉಳಿಯಲು ಸಾಧ್ಯವಾಗುತ್ತದೆ ಎಂದರು.</p>.<p>ಮುಖಂಡರಾದ ವೇದಲವೇಣಿ ರಾಮು, ಮುದುಗೆರೆ ರಾಜಶೇಖರ್, ಸತೀಶ್, ಗಂಗಾಧರಪ್ಪ, ಎಚ್.ಎಲ್. ವೆಂಕಟೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>