<p><strong>ಚಿಂತಾಮಣಿ:</strong> ತಾಲ್ಲೂಕಿನ ಮುರುಗಮಲೆಯಲ್ಲಿ ಲೋಕೋಪಯೋಗಿ ಇಲಾಖೆ ಅನುದಾನದಿಂದ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ವಿಳಂಬವಾಗಿದ್ದು ಭಕ್ತರಿಗೆ ತೊಂದರೆಯಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಜಿ ಅನ್ಸರ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ರಸ್ತೆ ಅಗಲೀಕರಣ ಕಾಮಗಾರಿಗೆ ಸಚಿವ ಡಾ.ಎಂ.ಸಿ.ಸುಧಾಕರ್ ಚಾಲನೆ ನೀಡಿ 4-5 ತಿಂಗಳಾಗಿದೆ. ಮುರುಗಮಲೆ ಯಾತ್ರಾಸ್ಥಳವಾಗಿದ್ದು ಪ್ರತಿನಿತ್ಯ ನೂರಾರು ಜನರು ಬರುತ್ತಾರೆ. ರಸ್ತೆ ಕಾಮಗಾರಿಗೆ ಅಗತ್ಯವಾದ ಜಲ್ಲಿ ಮತ್ತಿತರ ವಸ್ತುಗಳನ್ನು ಗುಡ್ಡೆ ಹಾಕಿದ್ದಾರೆ. ಕಸಕಡ್ಡಿ ಮಳೆ ನೀರು ನಿಂತಿದೆ. ಖಾಸಗಿ ನಿವೇಶನಗಳ ಮುಂದೆ ನರೇಗಾ ಮೂಲಕ ಮಾಡಿದ್ದ ಚರಂಡಿಗಳನ್ನು ಕಿತ್ತು ಹಾಕಿದ್ದಾರೆ. ಆ ನೀರು ರಸ್ತೆಗೆ ಹರಿಯುತ್ತಿದೆ. ಕೊಚ್ಚೆ ನೀರಿನಿಂದ ಸೊಳ್ಳೆಗಳ ಆವಾಸಸ್ಥಾನವಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ ಎಂದು ತಿಳಿಸಿದರು.</p>.<p>ಲೋಕೋಪಯೋಗಿ ಇಲಾಖೆ ಎಂಜಿನಿಯರ್ಗೆ ಪರಿಸ್ಥಿತಿ ವಿವರಿಸಿ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಕಾಮಗಾರಿ ತಡವಾಗುತ್ತಿರುವುದರಿಂದ ಭಕ್ತರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಬೇಕು ಎಂದು ಆಗ್ರಹಪಡಿಸಿದರು.</p>.<p>ದರ್ಗಾ ಆವರಣದಲ್ಲಿ ಇತ್ತೀಚೆಗೆ ಅನಧಿಕೃತ ಅಂಗಡಿಗಳು ತಲೆ ಎತ್ತುತ್ತಿವೆ. ದರ್ಗಾ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ರಾಜ್ಯ ಹಾಗೂ ಜಿಲ್ಲಾ ಮಟ್ಟದ ವಕ್ಫ್ ಬೋರ್ಡ್ ಅಧಿಕಾರಿಗಳು ಗಮನಹರಿಸಿ ಸೂಕ್ತ ರೀತಿಯಲ್ಲಿ ಕ್ರಮಕೈಗೊಳ್ಳಬೆಕು. ಇಲ್ಲದಿದ್ದರೆ ಕಾನೂನು ಹೋರಾಟ ಮಾಡುವುದಾಗಿ ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ತಾಲ್ಲೂಕಿನ ಮುರುಗಮಲೆಯಲ್ಲಿ ಲೋಕೋಪಯೋಗಿ ಇಲಾಖೆ ಅನುದಾನದಿಂದ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ವಿಳಂಬವಾಗಿದ್ದು ಭಕ್ತರಿಗೆ ತೊಂದರೆಯಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಹಾಜಿ ಅನ್ಸರ್ ಖಾನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ರಸ್ತೆ ಅಗಲೀಕರಣ ಕಾಮಗಾರಿಗೆ ಸಚಿವ ಡಾ.ಎಂ.ಸಿ.ಸುಧಾಕರ್ ಚಾಲನೆ ನೀಡಿ 4-5 ತಿಂಗಳಾಗಿದೆ. ಮುರುಗಮಲೆ ಯಾತ್ರಾಸ್ಥಳವಾಗಿದ್ದು ಪ್ರತಿನಿತ್ಯ ನೂರಾರು ಜನರು ಬರುತ್ತಾರೆ. ರಸ್ತೆ ಕಾಮಗಾರಿಗೆ ಅಗತ್ಯವಾದ ಜಲ್ಲಿ ಮತ್ತಿತರ ವಸ್ತುಗಳನ್ನು ಗುಡ್ಡೆ ಹಾಕಿದ್ದಾರೆ. ಕಸಕಡ್ಡಿ ಮಳೆ ನೀರು ನಿಂತಿದೆ. ಖಾಸಗಿ ನಿವೇಶನಗಳ ಮುಂದೆ ನರೇಗಾ ಮೂಲಕ ಮಾಡಿದ್ದ ಚರಂಡಿಗಳನ್ನು ಕಿತ್ತು ಹಾಕಿದ್ದಾರೆ. ಆ ನೀರು ರಸ್ತೆಗೆ ಹರಿಯುತ್ತಿದೆ. ಕೊಚ್ಚೆ ನೀರಿನಿಂದ ಸೊಳ್ಳೆಗಳ ಆವಾಸಸ್ಥಾನವಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ ಎಂದು ತಿಳಿಸಿದರು.</p>.<p>ಲೋಕೋಪಯೋಗಿ ಇಲಾಖೆ ಎಂಜಿನಿಯರ್ಗೆ ಪರಿಸ್ಥಿತಿ ವಿವರಿಸಿ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಕಾಮಗಾರಿ ತಡವಾಗುತ್ತಿರುವುದರಿಂದ ಭಕ್ತರಿಗೆ ಮತ್ತು ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಬೇಕು ಎಂದು ಆಗ್ರಹಪಡಿಸಿದರು.</p>.<p>ದರ್ಗಾ ಆವರಣದಲ್ಲಿ ಇತ್ತೀಚೆಗೆ ಅನಧಿಕೃತ ಅಂಗಡಿಗಳು ತಲೆ ಎತ್ತುತ್ತಿವೆ. ದರ್ಗಾ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ರಾಜ್ಯ ಹಾಗೂ ಜಿಲ್ಲಾ ಮಟ್ಟದ ವಕ್ಫ್ ಬೋರ್ಡ್ ಅಧಿಕಾರಿಗಳು ಗಮನಹರಿಸಿ ಸೂಕ್ತ ರೀತಿಯಲ್ಲಿ ಕ್ರಮಕೈಗೊಳ್ಳಬೆಕು. ಇಲ್ಲದಿದ್ದರೆ ಕಾನೂನು ಹೋರಾಟ ಮಾಡುವುದಾಗಿ ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>