ಈ ವೇಳೆ ಮಾತನಾಡಿದ ಎಬಿವಿಪಿ ವಿಭಾಗೀಯ ಸಂಚಾಲಕ ಮಂಜುನಾಥ್ ರೆಡ್ಡಿ, ‘ಶಿಕ್ಷಣಕ್ಕಾಗಿ ನಿತ್ಯ ಗ್ರಾಮೀಣ ಪ್ರದೇಶದಿಂದ ಸಾವಿರಾರು ವಿದ್ಯಾರ್ಥಿಗಳು ನಗರಕ್ಕೆ ಬರುತ್ತಾರೆ. ಕೋಲಾರ, ಬೆಂಗಳೂರು, ಗೌರಿಬಿದನೂರು, ಬಾಗೇಪಲ್ಲಿ, ಚಿಂತಾಮಣಿ, ದೊಡ್ಡಬಳ್ಳಾಪುರ ಮುಂತಾದ ಕಡೆಗಳಿಂದ ನಗರಕ್ಕೆ ಬರುವ ಬಹುತೇಕ ವಿದ್ಯಾರ್ಥಿಗಳು ಕೆಎಸ್ಆರ್ಟಿಸಿ ಬಸ್ ಸೌಲಭ್ಯ ಅವಲಂಬಿಸಿದ್ದಾರೆ’ ಎಂದು ಹೇಳಿದರು.