<p><strong>ಚಿಂತಾಮಣಿ:</strong> ‘ಹಸಿರು ಟವೆಲ್ ಹಾಕಿಕೊಂಡು ಅಧಿಕಾರ ಸ್ವೀಕರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊರೊನಾ ಸಂಕಷ್ಟದಲ್ಲಿ ಒಂದೇ ಬಾರಿಗೆ ಲೀಟರ್ ಹಾಲಿನ ಬೆಲೆ ₹4 ಕಡಿಮೆ ಮಾಡಿ ರೈತರ ಮೇಲೆ ಬರೆ ಎಳೆದಿದ್ದಾರೆ’ ಎಂದು ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜೆ.ರಘುನಾಥರೆಡ್ಡಿ ಆರೋಪಿಸಿದರು.</p>.<p>ಸಂಘದ ಕಾರ್ಯಕರ್ತರು, ಮುಖಂಡರು ಹಾಲಿನ ಬೆಲೆ ಏರಿಸುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬುಧವಾರ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.</p>.<p>ಒಂದು ಲೀಟರ್ ನೀರಿನ ಬೆಲೆ ₹20, ಹಾಲಿನ ₹24 ಮಾಡಿದ್ದಾರೆ. ಕೊರೊನಾ ಸೋಂಕು ಪರಿಣಾಮ ಎಲ್ಲ ವರ್ಗದ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೀವನ ನಡೆಸುವುದೇ ದುಸ್ತರವಾಗಿದೆ. ಪಶು ಆಹಾರದ ಬೆಲೆ, ಔಷಧಿಗಳ ಬೆಲೆ ಏರಿಕೆಯಾಗಿದ್ದು, ಉತ್ಪಾದನಾ ವೆಚ್ಚವೂ ಏರಿಕೆಯಾಗಿದೆ. ಲೀಟರ್ಗೆ ₹40 ಏರಿಕೆ ಮಾಡಬೇಕು ಎಂದು ರೈತರು ಹೋರಾಟ ಮಾಡುತ್ತಿದ್ದರೆ, ಹಾಲು ಒಕ್ಕೂಟಗಳು ಒಂದೇ ಬಾರಿಗೆ ₹4 ಕಡಿಮೆ ಮಾಡಿರುವುದು ಖಂಡನೀಯ. ಕೂಡಲೇ ಕಡಿಮೆ ಮಾಡಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.</p>.<p>‘ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಭೂಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ಕಾಯ್ದೆ- 2020 ಸೇರಿದಂತೆ ಎಲ್ಲ ತೀರ್ಮಾನಗಳು ರೈತರಿಗೆ ಮಾರಕವಾಗಿವೆ. ರೈತರಿಗೆ ಅನುಕೂಲ ಮಾಡದಿದ್ದರೂ ಪರವಾಗಿಲ್ಲ. ತೊಂದರೆ ಕೊಡಬೇಡಿ. ರೈತರ ಶಾಲು ಹೊದ್ದುಕೊಂಡು ರೈತರಿಗೆ ಅವಮಾನ ಮಾಡಬೇಡಿ’ ಎಂದು ಮನವಿ ಮಾಡಿದರು.</p>.<p>ಪ್ರಧಾನ ಕಾರ್ಯದರ್ಶಿ ಕೆ.ವೆಂಕಟರಾಮಯ್ಯ ಮಾತನಾಡಿ, ಜಿಲ್ಲೆಯಲ್ಲಿ ಚಿಂತಾಮಣಿ ತಾಲ್ಲೂಕು ಜನಸಂಖ್ಯೆ, ವಿಸ್ತಾರಲ್ಲಿ ಅತ್ಯಂತ ದೊಡ್ಡ ತಾಲ್ಲೂಕಾಗಿದೆ. ಕೋಲಾರದ ಕಡೆಯಿಂದ ಕೆ.ಸಿ.ವ್ಯಾಲಿ, ಚಿಕ್ಕಬಳ್ಳಾಪುರದ ಕಡೆಯಿಂದ ಎಚ್.ಎನ್.ವ್ಯಾಲಿ ನೀರಿನ ಯೋಜನೆಗಳು ಅನುಷ್ಠಾನಗೊಳ್ಳುತ್ತಿವೆ. ಈ ಎರಡೂ ಯೋಜನೆಗಳಿಂದ ತಾಲ್ಲೂಕು ವಂಚಿತವಾಗಿದೆ. ನಾಮಕಾವಾಸ್ತೆಗಾಗಿ ಕೇವಲ ತಾಲ್ಲೂಕಿನ 2 ಕೆರೆಗಳಿಗೆ ಮಾತ್ರ ನೀರು ಹರಿಸಲಾಗಿದೆ ಎಂದು ದೂರಿದರು.</p>.<p>ಗ್ರೇಡ್-2 ತಹಶೀಲ್ದಾರ್ ಶೋಭಾ ಮನವಿ ಸ್ವೀಕರಿಸಿ ಹಿರಿಯ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.</p>.<p>ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನಾಕಾರರು ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಪ್ರಮುಖ ರಸ್ತೆಗಳ ಮೂಲಕ ತಾಲ್ಲೂಕು ಕಚೇರಿಗೆ ತಲುಪಿದರು.</p>.<p>ಮುಖಂಡರಾದ ಬಿ.ಎಂ.ಮುನಿ ವೆಂಕಟಪ್ಪ, ಮಿಲ್ ನಾರಾಯಣಸ್ವಾಮಿ, ಎಸ್.ವಿ.ಗಂಗುಲಪ್ಪ, ಶ್ರೀರಾಮಪ್ಪ, ನರಸಿಂಹಮೂರ್ತಿ, ವೆಂಕಟೇಶ್, ಕೆ.ಬಿ.ಶ್ರೀರಾಮರೆಡ್ಡಿ, ರಾಮಪ್ಪ, ಕೃಷ್ಣಾರೆಡ್ಡಿ, ನಾರಾಯಣಸ್ವಾಮಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ:</strong> ‘ಹಸಿರು ಟವೆಲ್ ಹಾಕಿಕೊಂಡು ಅಧಿಕಾರ ಸ್ವೀಕರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೊರೊನಾ ಸಂಕಷ್ಟದಲ್ಲಿ ಒಂದೇ ಬಾರಿಗೆ ಲೀಟರ್ ಹಾಲಿನ ಬೆಲೆ ₹4 ಕಡಿಮೆ ಮಾಡಿ ರೈತರ ಮೇಲೆ ಬರೆ ಎಳೆದಿದ್ದಾರೆ’ ಎಂದು ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಜೆ.ರಘುನಾಥರೆಡ್ಡಿ ಆರೋಪಿಸಿದರು.</p>.<p>ಸಂಘದ ಕಾರ್ಯಕರ್ತರು, ಮುಖಂಡರು ಹಾಲಿನ ಬೆಲೆ ಏರಿಸುವುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬುಧವಾರ ನಡೆಸಿದ ಪ್ರತಿಭಟನೆಯಲ್ಲಿ ಮಾತನಾಡಿದರು.</p>.<p>ಒಂದು ಲೀಟರ್ ನೀರಿನ ಬೆಲೆ ₹20, ಹಾಲಿನ ₹24 ಮಾಡಿದ್ದಾರೆ. ಕೊರೊನಾ ಸೋಂಕು ಪರಿಣಾಮ ಎಲ್ಲ ವರ್ಗದ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜೀವನ ನಡೆಸುವುದೇ ದುಸ್ತರವಾಗಿದೆ. ಪಶು ಆಹಾರದ ಬೆಲೆ, ಔಷಧಿಗಳ ಬೆಲೆ ಏರಿಕೆಯಾಗಿದ್ದು, ಉತ್ಪಾದನಾ ವೆಚ್ಚವೂ ಏರಿಕೆಯಾಗಿದೆ. ಲೀಟರ್ಗೆ ₹40 ಏರಿಕೆ ಮಾಡಬೇಕು ಎಂದು ರೈತರು ಹೋರಾಟ ಮಾಡುತ್ತಿದ್ದರೆ, ಹಾಲು ಒಕ್ಕೂಟಗಳು ಒಂದೇ ಬಾರಿಗೆ ₹4 ಕಡಿಮೆ ಮಾಡಿರುವುದು ಖಂಡನೀಯ. ಕೂಡಲೇ ಕಡಿಮೆ ಮಾಡಿರುವ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.</p>.<p>‘ರಾಜ್ಯ ಸರ್ಕಾರ ಕೈಗೊಳ್ಳುತ್ತಿರುವ ಭೂಸುಧಾರಣೆ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ವಿದ್ಯುತ್ ಕಾಯ್ದೆ- 2020 ಸೇರಿದಂತೆ ಎಲ್ಲ ತೀರ್ಮಾನಗಳು ರೈತರಿಗೆ ಮಾರಕವಾಗಿವೆ. ರೈತರಿಗೆ ಅನುಕೂಲ ಮಾಡದಿದ್ದರೂ ಪರವಾಗಿಲ್ಲ. ತೊಂದರೆ ಕೊಡಬೇಡಿ. ರೈತರ ಶಾಲು ಹೊದ್ದುಕೊಂಡು ರೈತರಿಗೆ ಅವಮಾನ ಮಾಡಬೇಡಿ’ ಎಂದು ಮನವಿ ಮಾಡಿದರು.</p>.<p>ಪ್ರಧಾನ ಕಾರ್ಯದರ್ಶಿ ಕೆ.ವೆಂಕಟರಾಮಯ್ಯ ಮಾತನಾಡಿ, ಜಿಲ್ಲೆಯಲ್ಲಿ ಚಿಂತಾಮಣಿ ತಾಲ್ಲೂಕು ಜನಸಂಖ್ಯೆ, ವಿಸ್ತಾರಲ್ಲಿ ಅತ್ಯಂತ ದೊಡ್ಡ ತಾಲ್ಲೂಕಾಗಿದೆ. ಕೋಲಾರದ ಕಡೆಯಿಂದ ಕೆ.ಸಿ.ವ್ಯಾಲಿ, ಚಿಕ್ಕಬಳ್ಳಾಪುರದ ಕಡೆಯಿಂದ ಎಚ್.ಎನ್.ವ್ಯಾಲಿ ನೀರಿನ ಯೋಜನೆಗಳು ಅನುಷ್ಠಾನಗೊಳ್ಳುತ್ತಿವೆ. ಈ ಎರಡೂ ಯೋಜನೆಗಳಿಂದ ತಾಲ್ಲೂಕು ವಂಚಿತವಾಗಿದೆ. ನಾಮಕಾವಾಸ್ತೆಗಾಗಿ ಕೇವಲ ತಾಲ್ಲೂಕಿನ 2 ಕೆರೆಗಳಿಗೆ ಮಾತ್ರ ನೀರು ಹರಿಸಲಾಗಿದೆ ಎಂದು ದೂರಿದರು.</p>.<p>ಗ್ರೇಡ್-2 ತಹಶೀಲ್ದಾರ್ ಶೋಭಾ ಮನವಿ ಸ್ವೀಕರಿಸಿ ಹಿರಿಯ ಅಧಿಕಾರಿಗಳ ಮೂಲಕ ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಎಂದು ಭರವಸೆ ನೀಡಿದರು.</p>.<p>ನಗರದ ಪ್ರವಾಸಿ ಮಂದಿರದಿಂದ ಪ್ರತಿಭಟನಾಕಾರರು ಪ್ರತಿಭಟನಾ ಮೆರವಣಿಗೆ ನಡೆಸಿದರು. ನಗರದ ಪ್ರಮುಖ ರಸ್ತೆಗಳ ಮೂಲಕ ತಾಲ್ಲೂಕು ಕಚೇರಿಗೆ ತಲುಪಿದರು.</p>.<p>ಮುಖಂಡರಾದ ಬಿ.ಎಂ.ಮುನಿ ವೆಂಕಟಪ್ಪ, ಮಿಲ್ ನಾರಾಯಣಸ್ವಾಮಿ, ಎಸ್.ವಿ.ಗಂಗುಲಪ್ಪ, ಶ್ರೀರಾಮಪ್ಪ, ನರಸಿಂಹಮೂರ್ತಿ, ವೆಂಕಟೇಶ್, ಕೆ.ಬಿ.ಶ್ರೀರಾಮರೆಡ್ಡಿ, ರಾಮಪ್ಪ, ಕೃಷ್ಣಾರೆಡ್ಡಿ, ನಾರಾಯಣಸ್ವಾಮಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>