ಈ ಭಾಗದ ರಸ್ತೆಗಳು ಡಾಂಬರು ದರ್ಶನ ಕಂಡು ಸುಮಾರು ವರ್ಷಗಳೇ ಉರುಳಿವೆ. ಆ ರಸ್ತೆಗಳ ಡಾಂಬರು ಕಿತ್ತು ಹೋಗಿದ್ದು, ಗುಂಡಿಗಳು ಅಪಾಯ ಆಹ್ವಾನಿಸುತ್ತಿವೆ. ಈ ರಸ್ತೆಯಲ್ಲಿ ಚಲಿಸುವ ವಾಹನಗಳು ಬೀಳುತ್ತವೆಯೇ ಎನ್ನುವ ಆತಂಕ ಪ್ರಯಾಣಿಕರದ್ದು.ಇತ್ತೀಚೆಗೆ ವೃದ್ಧಯೊಬ್ಬರು ದ್ವಿಚಕ್ರವಾಹನದಲ್ಲಿ ಬಿದ್ದು ಕೈಕಾಲು ಪೆಟ್ಟಾಗಿ ಆಸ್ಪತ್ರೆಗೆ ಸೇರಿದ ಘಟನೆ ನಡೆದಿದೆ. ಇಂತಹ ಅವಘಡಗಳು ಸರ್ವೇ ಸಾಮಾನ್ಯ.