<p>ಚೇಳೂರು: ತಾಲ್ಲೂಕಿನ ಹೊಸಹುಡ್ಯ ಗ್ರಾಮದ ಮುಖ್ಯರಸ್ತೆ ತಿರುವಿನಲ್ಲಿ ನೋಡಿದವರಿಗೆ ವಾಹನಗಳು ಸಂಚರಿಸುತ್ತಿವೆಯೋ ಅಥವಾ ನರ್ತಿಸುತ್ತಿವೆಯೋ ಎಂಬ ಅನುಮಾನ ಮೂಡುತ್ತದೆ. ಇಂತಹ ಅನುಮಾನಕ್ಕೆ ರಸ್ತೆಗಳು ಹದಗೆಟ್ಟಿರುವುದೇ ಮೂಲ ಕಾರಣವಾಗಿದೆ.</p>.<p>ಗ್ರಾಮೀಣ ಭಾಗದ ಬಹುತೇಕ ರಸ್ತೆಗಳಲ್ಲಿ ಗುಂಡಿಗಳು ಸೃಷ್ಟಿಯಾಗಿವೆ. ಈ ಗುಂಡಿಗಳ ನಡುವೆಯೇ ರಸ್ತೆ ಹುಡುಕುವ ಸ್ಥಿತಿ ಇದೆ ಎಂದರೆ ಅತಿಶಯೋಕ್ತಿಯಲ್ಲ. ಒಂದು ಗುಂಡಿ ತಪ್ಪಿಸುವುದರೊಳಗೆ ಮತ್ತೊಂದು ಗುಂಡಿ ಎದುರಾಗುತ್ತದೆ. ಇದರಿಂದ ಹೊಸಹುಡ್ಯ ಗ್ರಾಮದಲ್ಲಿ ವಾಹನ ಚಲಾಯಿಸುವುದು ಚಾಲಕರಿಗೆ ಸವಾಲಿನ ಕೆಲಸವಾಗಿದೆ.</p>.<p>ಈ ಭಾಗದ ರಸ್ತೆಗಳು ಡಾಂಬರು ದರ್ಶನ ಕಂಡು ಸುಮಾರು ವರ್ಷಗಳೇ ಉರುಳಿವೆ. ಆ ರಸ್ತೆಗಳ ಡಾಂಬರು ಕಿತ್ತು ಹೋಗಿದ್ದು, ಗುಂಡಿಗಳು ಅಪಾಯ ಆಹ್ವಾನಿಸುತ್ತಿವೆ. ಈ ರಸ್ತೆಯಲ್ಲಿ ಚಲಿಸುವ ವಾಹನಗಳು ಬೀಳುತ್ತವೆಯೇ ಎನ್ನುವ ಆತಂಕ ಪ್ರಯಾಣಿಕರದ್ದು.ಇತ್ತೀಚೆಗೆ ವೃದ್ಧಯೊಬ್ಬರು ದ್ವಿಚಕ್ರವಾಹನದಲ್ಲಿ ಬಿದ್ದು ಕೈಕಾಲು ಪೆಟ್ಟಾಗಿ ಆಸ್ಪತ್ರೆಗೆ ಸೇರಿದ ಘಟನೆ ನಡೆದಿದೆ. ಇಂತಹ ಅವಘಡಗಳು ಸರ್ವೇ ಸಾಮಾನ್ಯ.</p>.<p>ಈ ಭಾಗದ ಮಕ್ಕಳು ವಾಹನಗಳಲ್ಲಿ ಶಾಲೆಗೆ ಹೋಗಿ ಮರಳಿ ಮನೆಗೆ ಬರುವವರೆಗೆ ಪಾಲಕರು ಆತಂಕದಲ್ಲಿ ಇರುತ್ತಾರೆ. ರಸ್ತೆ ದುರಸ್ತಿಗೆ ಸಾಕಷ್ಟು ಹಣ ಬಂದರೂ ಕಾಮಗಾರಿ ನಡೆಸುವವರ ನಿರ್ಲಕ್ಷ್ಯದಿಂದ ಈ ಸಮಸ್ಯೆ ಹಾಗೆಯೇ ಉಳಿದಿದೆ ಎಂಬುದು ಜನರ ಆರೋಪ.</p>.<p>‘ಹದಗೆಟ್ಟ ರಸ್ತೆಯಿಂದ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿವೆ. ಸುಮಾರು ಎರಡು, ಮೂರು ಅಡಿಗಳಷ್ಟು ಗುಂಡಿಗಳು ಬಿದ್ದು ರಸ್ತೆ ಸಂಪೂರ್ಣ ಹದೆಗಟ್ಟಿದೆ. ಸುಮಾರು ವರ್ಷಗಳಿಂದ ಈ ರಸ್ತೆ ಸುಧಾರಣೆ ಕಂಡಿಲ್ಲ. ಯಾವೊಬ್ಬ ರಾಜಕಾರಣಿಯೂ ತಲೆಕೆಡಿಸಿಕೊಳ್ಳುತ್ತಿಲ್ಲ’ ಎಂದು ಹೊಸಹುಡ್ಯ ಗ್ರಾಮದ ಮುಖ್ಯ ರಸ್ತೆ ಬದಿಯ ನಿವಾಸಿ ಕೆ.ವಿ. ವೆಂಕಟರವಣಪ್ಪ ದೂರುತ್ತಾರೆ.</p>.<p>‘ಕೇವಲ ಚುನಾವಣೆ ಬಂದಾಗ ಎಲ್ಲಾ ರಾಜಕೀಯ ನಾಯಕರಿಗೆ ಎಲ್ಲಾ ಕುಗ್ರಾಮಗಳು ಸಹ ಕಾಣಿಸುತ್ತವೆ. ಹೊಸಹುಡ್ಯ ಕಾಣಿಸುವುದೇ ಇಲ್ಲ’ ಎಂದು ದೂರುತ್ತಾರೆ ರೈತ ಮುಖಂಡ ಪಿ.ವಿ. ಕೃಷ್ಣಪ್ಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೇಳೂರು: ತಾಲ್ಲೂಕಿನ ಹೊಸಹುಡ್ಯ ಗ್ರಾಮದ ಮುಖ್ಯರಸ್ತೆ ತಿರುವಿನಲ್ಲಿ ನೋಡಿದವರಿಗೆ ವಾಹನಗಳು ಸಂಚರಿಸುತ್ತಿವೆಯೋ ಅಥವಾ ನರ್ತಿಸುತ್ತಿವೆಯೋ ಎಂಬ ಅನುಮಾನ ಮೂಡುತ್ತದೆ. ಇಂತಹ ಅನುಮಾನಕ್ಕೆ ರಸ್ತೆಗಳು ಹದಗೆಟ್ಟಿರುವುದೇ ಮೂಲ ಕಾರಣವಾಗಿದೆ.</p>.<p>ಗ್ರಾಮೀಣ ಭಾಗದ ಬಹುತೇಕ ರಸ್ತೆಗಳಲ್ಲಿ ಗುಂಡಿಗಳು ಸೃಷ್ಟಿಯಾಗಿವೆ. ಈ ಗುಂಡಿಗಳ ನಡುವೆಯೇ ರಸ್ತೆ ಹುಡುಕುವ ಸ್ಥಿತಿ ಇದೆ ಎಂದರೆ ಅತಿಶಯೋಕ್ತಿಯಲ್ಲ. ಒಂದು ಗುಂಡಿ ತಪ್ಪಿಸುವುದರೊಳಗೆ ಮತ್ತೊಂದು ಗುಂಡಿ ಎದುರಾಗುತ್ತದೆ. ಇದರಿಂದ ಹೊಸಹುಡ್ಯ ಗ್ರಾಮದಲ್ಲಿ ವಾಹನ ಚಲಾಯಿಸುವುದು ಚಾಲಕರಿಗೆ ಸವಾಲಿನ ಕೆಲಸವಾಗಿದೆ.</p>.<p>ಈ ಭಾಗದ ರಸ್ತೆಗಳು ಡಾಂಬರು ದರ್ಶನ ಕಂಡು ಸುಮಾರು ವರ್ಷಗಳೇ ಉರುಳಿವೆ. ಆ ರಸ್ತೆಗಳ ಡಾಂಬರು ಕಿತ್ತು ಹೋಗಿದ್ದು, ಗುಂಡಿಗಳು ಅಪಾಯ ಆಹ್ವಾನಿಸುತ್ತಿವೆ. ಈ ರಸ್ತೆಯಲ್ಲಿ ಚಲಿಸುವ ವಾಹನಗಳು ಬೀಳುತ್ತವೆಯೇ ಎನ್ನುವ ಆತಂಕ ಪ್ರಯಾಣಿಕರದ್ದು.ಇತ್ತೀಚೆಗೆ ವೃದ್ಧಯೊಬ್ಬರು ದ್ವಿಚಕ್ರವಾಹನದಲ್ಲಿ ಬಿದ್ದು ಕೈಕಾಲು ಪೆಟ್ಟಾಗಿ ಆಸ್ಪತ್ರೆಗೆ ಸೇರಿದ ಘಟನೆ ನಡೆದಿದೆ. ಇಂತಹ ಅವಘಡಗಳು ಸರ್ವೇ ಸಾಮಾನ್ಯ.</p>.<p>ಈ ಭಾಗದ ಮಕ್ಕಳು ವಾಹನಗಳಲ್ಲಿ ಶಾಲೆಗೆ ಹೋಗಿ ಮರಳಿ ಮನೆಗೆ ಬರುವವರೆಗೆ ಪಾಲಕರು ಆತಂಕದಲ್ಲಿ ಇರುತ್ತಾರೆ. ರಸ್ತೆ ದುರಸ್ತಿಗೆ ಸಾಕಷ್ಟು ಹಣ ಬಂದರೂ ಕಾಮಗಾರಿ ನಡೆಸುವವರ ನಿರ್ಲಕ್ಷ್ಯದಿಂದ ಈ ಸಮಸ್ಯೆ ಹಾಗೆಯೇ ಉಳಿದಿದೆ ಎಂಬುದು ಜನರ ಆರೋಪ.</p>.<p>‘ಹದಗೆಟ್ಟ ರಸ್ತೆಯಿಂದ ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿವೆ. ಸುಮಾರು ಎರಡು, ಮೂರು ಅಡಿಗಳಷ್ಟು ಗುಂಡಿಗಳು ಬಿದ್ದು ರಸ್ತೆ ಸಂಪೂರ್ಣ ಹದೆಗಟ್ಟಿದೆ. ಸುಮಾರು ವರ್ಷಗಳಿಂದ ಈ ರಸ್ತೆ ಸುಧಾರಣೆ ಕಂಡಿಲ್ಲ. ಯಾವೊಬ್ಬ ರಾಜಕಾರಣಿಯೂ ತಲೆಕೆಡಿಸಿಕೊಳ್ಳುತ್ತಿಲ್ಲ’ ಎಂದು ಹೊಸಹುಡ್ಯ ಗ್ರಾಮದ ಮುಖ್ಯ ರಸ್ತೆ ಬದಿಯ ನಿವಾಸಿ ಕೆ.ವಿ. ವೆಂಕಟರವಣಪ್ಪ ದೂರುತ್ತಾರೆ.</p>.<p>‘ಕೇವಲ ಚುನಾವಣೆ ಬಂದಾಗ ಎಲ್ಲಾ ರಾಜಕೀಯ ನಾಯಕರಿಗೆ ಎಲ್ಲಾ ಕುಗ್ರಾಮಗಳು ಸಹ ಕಾಣಿಸುತ್ತವೆ. ಹೊಸಹುಡ್ಯ ಕಾಣಿಸುವುದೇ ಇಲ್ಲ’ ಎಂದು ದೂರುತ್ತಾರೆ ರೈತ ಮುಖಂಡ ಪಿ.ವಿ. ಕೃಷ್ಣಪ್ಪ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>