<p><strong>ಶಿಡ್ಲಘಟ್ಟ</strong>: ‘ದೇವೇಗೌಡರು ಯಾಕೆ ಇಷ್ಟು ಕೀಳುಮಟ್ಟಕ್ಕೆ, ಕೆಳಮಟ್ಟಕ್ಕೆ ಇಳಿದುಬಿಟ್ಟಿದ್ದಾರೆ? ದೇವೇಗೌಡರೇ ನಿಮ್ಮ ಜಾತ್ಯತೀತತೆ ಏನಾಯಿತು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. </p><p>ನಗರದಲ್ಲಿ ಭಾನುವಾರ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಪರ ರೋಡ್ ಷೋ ನಡೆಸಿ ಮಾತನಾಡಿದರು. </p><p> ಚಿಕ್ಕಬಳ್ಳಾಪುರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ದೇವೇಗೌಡರು ಪೈಪೋಟಿಗೆ ಬಿದ್ದು ಸುಳ್ಳುಗಳನ್ನು ಹೇಳಿದ್ದಾರೆ. ಕರ್ನಾಟಕಕ್ಕೆ ಖಾಲಿ ಚೊಂಬು ನೀಡಿರುವ ಕೇಂದ್ರ ಸರ್ಕಾರ ಅಕ್ಷಯಪಾತ್ರೆ ನೀಡಿದೆ ಎಂದು ಸುಳ್ಳು ಹೇಳಿದ್ದಾರೆ ಎಂದು ಕಿಡಿಕಾರಿದರು.</p><p>ಕೇವಲ ಕುಟುಂಬದ ಸ್ವಾರ್ಥಕ್ಕಾಗಿ ಕೋಮುವಾದಿಗಳೊಂದಿಗೆ ಕೈಜೋಡಿಸಿಬಿಟ್ಟಿರಾ? ನಿಮಗೆ ನಾಚಿಕೆ ಆಗಬೇಕು. ಜೆಡಿಎಸ್ನವರಿಗೆ ಕಾಂಗ್ರೆಸ್ ಬಗ್ಗೆ ಹೆದರಿಕೆ ಹುಟ್ಟಿದೆ. ಅದಕ್ಕಾಗಿ ಬಿಜೆಪಿ ಜೊತೆ ಸಖ್ಯ ಬೆಳೆಸಿದ್ದಾರೆ ಎಂದು ಟೀಕಿಸಿದರು.</p><p>ದೇವೇಗೌಡರು ಮಗ, ಅಳಿಯ, ಮೊಮ್ಮಗನಿಗೆ ಟಿಕೆಟ್ ಕೊಡಿಸಿ ಕುಟುಂಬಕ್ಕಾಗಿ ರಾಜಕಾರಣ ಮಾಡುತ್ತಿದ್ದಾರೆ. ಇನ್ನೊಂದು ಅವಕಾಶ ಇದಿದ್ದರೆ ಇನ್ನೊಬ್ಬ ಮೊಮ್ಮಗನಿಗೂ ಸ್ಥಾನ ಕೊಡಿಸುತ್ತಿದ್ದರೇನೋ ಎಂದು ವ್ಯಂಗ್ಯವಾಡಿದರು.</p><p>ಪ್ರಧಾನಿಯಾಗಲು ನರೇಂದ್ರ ಮೋದಿ ನಾಲಾಯಕ್ಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ‘ದೇವೇಗೌಡರು ಯಾಕೆ ಇಷ್ಟು ಕೀಳುಮಟ್ಟಕ್ಕೆ, ಕೆಳಮಟ್ಟಕ್ಕೆ ಇಳಿದುಬಿಟ್ಟಿದ್ದಾರೆ? ದೇವೇಗೌಡರೇ ನಿಮ್ಮ ಜಾತ್ಯತೀತತೆ ಏನಾಯಿತು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. </p><p>ನಗರದಲ್ಲಿ ಭಾನುವಾರ ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ಪರ ರೋಡ್ ಷೋ ನಡೆಸಿ ಮಾತನಾಡಿದರು. </p><p> ಚಿಕ್ಕಬಳ್ಳಾಪುರದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ದೇವೇಗೌಡರು ಪೈಪೋಟಿಗೆ ಬಿದ್ದು ಸುಳ್ಳುಗಳನ್ನು ಹೇಳಿದ್ದಾರೆ. ಕರ್ನಾಟಕಕ್ಕೆ ಖಾಲಿ ಚೊಂಬು ನೀಡಿರುವ ಕೇಂದ್ರ ಸರ್ಕಾರ ಅಕ್ಷಯಪಾತ್ರೆ ನೀಡಿದೆ ಎಂದು ಸುಳ್ಳು ಹೇಳಿದ್ದಾರೆ ಎಂದು ಕಿಡಿಕಾರಿದರು.</p><p>ಕೇವಲ ಕುಟುಂಬದ ಸ್ವಾರ್ಥಕ್ಕಾಗಿ ಕೋಮುವಾದಿಗಳೊಂದಿಗೆ ಕೈಜೋಡಿಸಿಬಿಟ್ಟಿರಾ? ನಿಮಗೆ ನಾಚಿಕೆ ಆಗಬೇಕು. ಜೆಡಿಎಸ್ನವರಿಗೆ ಕಾಂಗ್ರೆಸ್ ಬಗ್ಗೆ ಹೆದರಿಕೆ ಹುಟ್ಟಿದೆ. ಅದಕ್ಕಾಗಿ ಬಿಜೆಪಿ ಜೊತೆ ಸಖ್ಯ ಬೆಳೆಸಿದ್ದಾರೆ ಎಂದು ಟೀಕಿಸಿದರು.</p><p>ದೇವೇಗೌಡರು ಮಗ, ಅಳಿಯ, ಮೊಮ್ಮಗನಿಗೆ ಟಿಕೆಟ್ ಕೊಡಿಸಿ ಕುಟುಂಬಕ್ಕಾಗಿ ರಾಜಕಾರಣ ಮಾಡುತ್ತಿದ್ದಾರೆ. ಇನ್ನೊಂದು ಅವಕಾಶ ಇದಿದ್ದರೆ ಇನ್ನೊಬ್ಬ ಮೊಮ್ಮಗನಿಗೂ ಸ್ಥಾನ ಕೊಡಿಸುತ್ತಿದ್ದರೇನೋ ಎಂದು ವ್ಯಂಗ್ಯವಾಡಿದರು.</p><p>ಪ್ರಧಾನಿಯಾಗಲು ನರೇಂದ್ರ ಮೋದಿ ನಾಲಾಯಕ್ಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>