<p><strong>ಚಿಕ್ಕಬಳ್ಳಾಪುರ:</strong> ‘ಎಚ್.ಎನ್ ವ್ಯಾಲಿ ಯೋಜನೆಯಿಂದ ನೀರು ತುಂಬಿರುವ ಕಂದವಾರ ಕೆರೆ ಪರಿಸರದಲ್ಲಿ ನೈಸರ್ಗಿಕ ಸೌಂದರ್ಯ ವೃದ್ಧಿಸಿದ್ದು, ಅಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳ ಮೂಲಕ ಕೆರೆಯನ್ನು ಪ್ರವಾಸಿ ತಾಣವನ್ನಾಗಿಸುವ ಉದ್ದೇಶ ಹೊಂದಲಾಗಿದೆ‘ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.</p>.<p>ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಕೆರೆ ಅಭಿವೃದ್ಧಿ ಕುರಿತಂತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಕಂದವಾರ ಕೆರೆಯನ್ನು ಅಭಿವೃದ್ಧಿಪಡಿಸಿ ಹಿರಿಯ ನಾಗರಿಕರಿಗೆ ವಾಯು ವಿಹಾರ ಪಥ, ಮಕ್ಕಳಿಗೆ ಆಟದ ಮೈದಾನ, ಸಂಗೀತ ಕಾರಂಜಿ, ದೋಣಿ ವಿಹಾರ ನಿರ್ಮಾಣ, ಊಟದ ಕ್ಯಾಂಟೀನ್, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಕಾಮಗಾರಿಗಳನ್ನು ಕೈಗೊಳಲು ಅಧಿಕಾರಿಗಳು ಯೋಜನೆ ರೂಪಿಸಬೇಕು’ ಎಂದು ತಿಳಿಸಿದರು.</p>.<p>ಜಿಲ್ಲಾ ಯೋಜನಾ ನಿರ್ದೇಶಕಿ ರೇಣುಕಾ, ನಗರಸಭೆ ಆಯುಕ್ತ ಲೋಹಿತ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ‘ಎಚ್.ಎನ್ ವ್ಯಾಲಿ ಯೋಜನೆಯಿಂದ ನೀರು ತುಂಬಿರುವ ಕಂದವಾರ ಕೆರೆ ಪರಿಸರದಲ್ಲಿ ನೈಸರ್ಗಿಕ ಸೌಂದರ್ಯ ವೃದ್ಧಿಸಿದ್ದು, ಅಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳ ಮೂಲಕ ಕೆರೆಯನ್ನು ಪ್ರವಾಸಿ ತಾಣವನ್ನಾಗಿಸುವ ಉದ್ದೇಶ ಹೊಂದಲಾಗಿದೆ‘ ಎಂದು ಜಿಲ್ಲಾಧಿಕಾರಿ ಆರ್.ಲತಾ ಹೇಳಿದರು.</p>.<p>ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ನ್ಯಾಯಾಲಯ ಸಭಾಂಗಣದಲ್ಲಿ ಕೆರೆ ಅಭಿವೃದ್ಧಿ ಕುರಿತಂತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಕಂದವಾರ ಕೆರೆಯನ್ನು ಅಭಿವೃದ್ಧಿಪಡಿಸಿ ಹಿರಿಯ ನಾಗರಿಕರಿಗೆ ವಾಯು ವಿಹಾರ ಪಥ, ಮಕ್ಕಳಿಗೆ ಆಟದ ಮೈದಾನ, ಸಂಗೀತ ಕಾರಂಜಿ, ದೋಣಿ ವಿಹಾರ ನಿರ್ಮಾಣ, ಊಟದ ಕ್ಯಾಂಟೀನ್, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳ ಕಾಮಗಾರಿಗಳನ್ನು ಕೈಗೊಳಲು ಅಧಿಕಾರಿಗಳು ಯೋಜನೆ ರೂಪಿಸಬೇಕು’ ಎಂದು ತಿಳಿಸಿದರು.</p>.<p>ಜಿಲ್ಲಾ ಯೋಜನಾ ನಿರ್ದೇಶಕಿ ರೇಣುಕಾ, ನಗರಸಭೆ ಆಯುಕ್ತ ಲೋಹಿತ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>