<p><strong>ಚಿಕ್ಕಬಳ್ಳಾಪುರ:</strong> ಹನುಮ ಜಯಂತಿಯ ಪ್ರಯುಕ್ತ ಸೋಮವಾರ ಜಿಲ್ಲೆಯಾದ್ಯಂತ ಆಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ ಶ್ರದ್ಧಾಭಕ್ತಿ ಮತ್ತು ಸಡಗರದಿಂದ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು.</p>.<p>ದೇವಾಲಯಗಳಲ್ಲಿ ಆಂಜನೇಯಸ್ವಾಮಿಗೆ ಪಂಚಾಮೃತ ಅಭಿಷೇಕ, ಮಹಾಗಣಪತಿ ಪೂಜೆ, ಅಭಿಷೇಕ, ವಿಶೇಷ ಅಲಂಕಾರ, ಗಣಹೋಮ, ರಾಮತಾರಕ ಹೋಮ, ಪ್ರಧಾನ ಹೋಮ ಹಾಗೂ ವಿವಿಧ ಹೋಮ ಮತ್ತು ಪೂರ್ಣಾಹುತಿ ಆಚರಣೆಗಳನ್ನು ನೆರವೇರಿಸಲಾಯಿತು. ಭಕ್ತಗಣ ಭಜನೆಗಳನ್ನು ಮಾಡಿ, ವಾಯುಪುತ್ರನನ್ನು ಸ್ಮರಿಸಿತು. ಸಿಹಿಯನ್ನು ಪ್ರಸಾದವಾಗಿ ಹಂಚಲಾಯಿತು.</p>.<p class="Subhead">ಆದಿಚುಂಚನಗಿರಿ ಸ್ವಾಮೀಜಿ ಅವರಿಂದ ಅಭಿಷೇಕ:ನಗರದ ಹೊರವಲಯದ ಆದಿಚುಂಚನಗಿರಿ ಶಾಖಾ ಮಠದ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಅದ್ಧೂರಿಯಾಗಿ ಹನುಮ ಜಯಂತಿ ಆಚರಿಸಲಾಯಿತು. ದೇವಾಲಯವನ್ನು ವಿಶೇಷ ಅಲಂಕಾರ ಮಾಡಲಾಗಿತ್ತು.</p>.<p>ನಿರ್ಮಲಾನಂದನಾಥ ಸ್ವಾಮೀಜಿ ಅವರು ಆಂಜನೇಯ ಮೂರ್ತಿಗೆ ಅಭಿಷೇಕ, ಪೂಜೆ ನೆರವೇರಿಸಿದರು. ಹೋಮವನ್ನು ನಡೆಸಿದರು. ಬೆಳಿಗ್ಗೆಯಿಂದ ರಾತ್ರಿಯವರೆಗೂ ದರ್ಶನಕ್ಕೆ ಜನರು ಸಾಲುಗಟ್ಟಿದ್ದರು. ಇಡೀ ದೇಗುಲವನ್ನು ಹೂಗಳಿಂದ ಅಲಂಕರಿಸಲಾಗಿತ್ತು. ದೇಗುಲದ ಹೊರಭಾಗ ಮತ್ತು ಒಳಭಾಗದಲ್ಲಿ ಮಾಡಿದ್ದ ಅಲಂಕಾರ ಗಮನ<br />ಸೆಳೆಯಿತು. ಮಂಗಳಾನಂದನಾಥ ಸ್ವಾಮೀಜಿ ಹಾಗೂ ಗಣ್ಯರು ಈ ವೇಳೆ ಹಾಜರಿದ್ದರು.</p>.<p>ನಗರದಲ್ಲಿ ಎಚ್.ಎಸ್. ಗಾರ್ಡನ್ನಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಸಂಭ್ರಮದಿಂದ ನಡೆಯಿತು. ದೇವರ ಮೂರ್ತಿಯನ್ನು ವಿವಿಧ ಕಲಾತಂಡಗಳೊಂದಿಗೆ ಎಚ್.ಎಸ್. ಗಾರ್ಡನ್ನಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಗಂಗಮ್ಮನ ಗುಡಿ ಬೀದಿಯಲ್ಲಿರುವ ಪೇಟೆ ಆಂಜನೇಯಸ್ವಾಮಿ ದೇವಾಲಯ, ಹಳೇ ಪೊಲೀಸ್ ಠಾಣೆ ರಸ್ತೆಯ ಜೀವಾಂಜನೇಯಸ್ವಾಮಿ, ಇಂದಿರಾ ನಗರದ ಅಭಯ ಆಂಜನೇಯಸ್ವಾಮಿ, ಹಳೇ ಜಿಲ್ಲಾಸ್ಪತ್ರೆಯ ಪಂಚಮುಖಿ ಆಂಜನೇಯಸ್ವಾಮಿ ದೇವಾಲಯ ಸೇರಿದಂತೆ ಅನೇಕ ಕಡೆಗಳಲ್ಲಿ ರಾಮದೂತನ ಆರಾಧನೆ ಸಡಗರ ಮತ್ತು ಶ್ರದ್ಧೆಯಿಂದ ಜರುಗಿತು.</p>.<p>ಭಕ್ತರು ಬೆಳಿಗ್ಗೆಯಿಂದಲೇ ನಗರದಲ್ಲಿರುವ ಆಂಜನೇಯ ಸ್ವಾಮಿ ದೇವಾಲಯಗಳಿಗೆ ಹೋಗಿ ವಿಶೇಷ ಪೂಜೆ ಸಲ್ಲಿಸುತ್ತಿದ್ದ ದೃಶ್ಯಗಳು ಕಂಡುಬಂದವು. ಅನೇಕ ದೇವಾಲಯಗಳಲ್ಲಿ ಭಕ್ತಿಗೀತೆಗಳ ಗಾಯನ ಏರ್ಪಡಿಸಲಾಗಿತ್ತು. ತೀರ್ಥ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಹನುಮ ಜಯಂತಿಯ ಪ್ರಯುಕ್ತ ಸೋಮವಾರ ಜಿಲ್ಲೆಯಾದ್ಯಂತ ಆಂಜನೇಯ ಸ್ವಾಮಿ ದೇವಸ್ಥಾನಗಳಲ್ಲಿ ಶ್ರದ್ಧಾಭಕ್ತಿ ಮತ್ತು ಸಡಗರದಿಂದ ವಿವಿಧ ಧಾರ್ಮಿಕ ಕಾರ್ಯಗಳು ನಡೆದವು.</p>.<p>ದೇವಾಲಯಗಳಲ್ಲಿ ಆಂಜನೇಯಸ್ವಾಮಿಗೆ ಪಂಚಾಮೃತ ಅಭಿಷೇಕ, ಮಹಾಗಣಪತಿ ಪೂಜೆ, ಅಭಿಷೇಕ, ವಿಶೇಷ ಅಲಂಕಾರ, ಗಣಹೋಮ, ರಾಮತಾರಕ ಹೋಮ, ಪ್ರಧಾನ ಹೋಮ ಹಾಗೂ ವಿವಿಧ ಹೋಮ ಮತ್ತು ಪೂರ್ಣಾಹುತಿ ಆಚರಣೆಗಳನ್ನು ನೆರವೇರಿಸಲಾಯಿತು. ಭಕ್ತಗಣ ಭಜನೆಗಳನ್ನು ಮಾಡಿ, ವಾಯುಪುತ್ರನನ್ನು ಸ್ಮರಿಸಿತು. ಸಿಹಿಯನ್ನು ಪ್ರಸಾದವಾಗಿ ಹಂಚಲಾಯಿತು.</p>.<p class="Subhead">ಆದಿಚುಂಚನಗಿರಿ ಸ್ವಾಮೀಜಿ ಅವರಿಂದ ಅಭಿಷೇಕ:ನಗರದ ಹೊರವಲಯದ ಆದಿಚುಂಚನಗಿರಿ ಶಾಖಾ ಮಠದ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಅವರ ನೇತೃತ್ವದಲ್ಲಿ ಅದ್ಧೂರಿಯಾಗಿ ಹನುಮ ಜಯಂತಿ ಆಚರಿಸಲಾಯಿತು. ದೇವಾಲಯವನ್ನು ವಿಶೇಷ ಅಲಂಕಾರ ಮಾಡಲಾಗಿತ್ತು.</p>.<p>ನಿರ್ಮಲಾನಂದನಾಥ ಸ್ವಾಮೀಜಿ ಅವರು ಆಂಜನೇಯ ಮೂರ್ತಿಗೆ ಅಭಿಷೇಕ, ಪೂಜೆ ನೆರವೇರಿಸಿದರು. ಹೋಮವನ್ನು ನಡೆಸಿದರು. ಬೆಳಿಗ್ಗೆಯಿಂದ ರಾತ್ರಿಯವರೆಗೂ ದರ್ಶನಕ್ಕೆ ಜನರು ಸಾಲುಗಟ್ಟಿದ್ದರು. ಇಡೀ ದೇಗುಲವನ್ನು ಹೂಗಳಿಂದ ಅಲಂಕರಿಸಲಾಗಿತ್ತು. ದೇಗುಲದ ಹೊರಭಾಗ ಮತ್ತು ಒಳಭಾಗದಲ್ಲಿ ಮಾಡಿದ್ದ ಅಲಂಕಾರ ಗಮನ<br />ಸೆಳೆಯಿತು. ಮಂಗಳಾನಂದನಾಥ ಸ್ವಾಮೀಜಿ ಹಾಗೂ ಗಣ್ಯರು ಈ ವೇಳೆ ಹಾಜರಿದ್ದರು.</p>.<p>ನಗರದಲ್ಲಿ ಎಚ್.ಎಸ್. ಗಾರ್ಡನ್ನಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಸಂಭ್ರಮದಿಂದ ನಡೆಯಿತು. ದೇವರ ಮೂರ್ತಿಯನ್ನು ವಿವಿಧ ಕಲಾತಂಡಗಳೊಂದಿಗೆ ಎಚ್.ಎಸ್. ಗಾರ್ಡನ್ನಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಗಂಗಮ್ಮನ ಗುಡಿ ಬೀದಿಯಲ್ಲಿರುವ ಪೇಟೆ ಆಂಜನೇಯಸ್ವಾಮಿ ದೇವಾಲಯ, ಹಳೇ ಪೊಲೀಸ್ ಠಾಣೆ ರಸ್ತೆಯ ಜೀವಾಂಜನೇಯಸ್ವಾಮಿ, ಇಂದಿರಾ ನಗರದ ಅಭಯ ಆಂಜನೇಯಸ್ವಾಮಿ, ಹಳೇ ಜಿಲ್ಲಾಸ್ಪತ್ರೆಯ ಪಂಚಮುಖಿ ಆಂಜನೇಯಸ್ವಾಮಿ ದೇವಾಲಯ ಸೇರಿದಂತೆ ಅನೇಕ ಕಡೆಗಳಲ್ಲಿ ರಾಮದೂತನ ಆರಾಧನೆ ಸಡಗರ ಮತ್ತು ಶ್ರದ್ಧೆಯಿಂದ ಜರುಗಿತು.</p>.<p>ಭಕ್ತರು ಬೆಳಿಗ್ಗೆಯಿಂದಲೇ ನಗರದಲ್ಲಿರುವ ಆಂಜನೇಯ ಸ್ವಾಮಿ ದೇವಾಲಯಗಳಿಗೆ ಹೋಗಿ ವಿಶೇಷ ಪೂಜೆ ಸಲ್ಲಿಸುತ್ತಿದ್ದ ದೃಶ್ಯಗಳು ಕಂಡುಬಂದವು. ಅನೇಕ ದೇವಾಲಯಗಳಲ್ಲಿ ಭಕ್ತಿಗೀತೆಗಳ ಗಾಯನ ಏರ್ಪಡಿಸಲಾಗಿತ್ತು. ತೀರ್ಥ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>