<p><strong>ಚಿಂತಾಮಣಿ</strong>: ಜಾರ್ಖಂಡ್ನಲ್ಲಿ ನಡೆದ ಜಿಲ್ಲಾ ನ್ಯಾಯಾಧೀಶರ ಕೊಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ನಗರದ ಜೆಎಂಎಫ್ಸಿ ನ್ಯಾಯಾಲಯದ ವಕೀಲರು ಶನಿವಾರ ಕಾರ್ಯಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.</p>.<p>ಸಂಘದ ಅಧ್ಯಕ್ಷ ಎಸ್.ರಾಜಾರಾಂ ಮಾತನಾಡಿ, ಬೆಳಗ್ಗೆ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿರುವಾಗ ನ್ಯಾಯಾಧೀಶರಿಗೆ ವಾಹನ ಡಿಕ್ಕಿಹೊಡೆಸಿ ಕೊಲೆ ಮಾಡಿದ್ದಾರೆ. ಇದು ಆಕಸ್ಮಿಕವಲ್ಲ, ಉದ್ದೇಶಪೂರ್ವಕ ಹಾಗೂ ಪೂರ್ವಯೋಜಿತ ಕೃತ್ಯವಾಗಿದೆ ಎಂದು ಆರೋಪಿಸಿದರು.</p>.<p>ನ್ಯಾಯಾಧೀಶರನ್ನು ಕೊಲೆ ಮಾಡಿರುವುದು ಖಂಡನೀಯ. ಸಮಾಜ ಯಾವ ದಿಕ್ಕಿಗೆ ಸಾಗುತ್ತಿದೆ ಎಂಬ ಚಿಂತನೆಯನ್ನು ಮಾಡಬೇಕು. ನ್ಯಾಯಾಧೀಶರಿಗೆ ರಕ್ಷಣೆ ಇಲ್ಲ ಎಂದರೆ ಸಾಮಾನ್ಯ ಜನರ ಪಾಡೇನು?. ನ್ಯಾಯಾಧೀಶರಿಗೆ ರಕ್ಷಣೆ ನೀಡಲು ಸಮರ್ಪಕ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದರು.</p>.<p>ನ್ಯಾಯ ಸಿಗದವರು, ತೊಂದರೆಯಾದವರು ನ್ಯಾಯವನ್ನು ಕೋರಿ ನ್ಯಾಯಾಲಯಕ್ಕೆ ಬರುತ್ತಾರೆ. ಅಂತಹವರಿಗೆ ವಕೀಲರು, ನ್ಯಾಯಾಧೀಶರು ನ್ಯಾಯ ಒದಗಿಸುತ್ತಾರೆ. ನ್ಯಾಯದಾನ ಮಾಡುವ ನ್ಯಾಯಾಧೀಶರನ್ನು ಬಹಿರಂಗವಾಗಿ ಕೊಲೆ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.</p>.<p>ಸಂಘದ ಉಪಾಧ್ಯಕ್ಷ ಶಿವಾನಂದ್, ಕಾರ್ಯದರ್ಶಿ ಶ್ರೀನಾಥ್, ಮಾಜಿ ಅಧ್ಯಕ್ಷ ಮಂಜುನಾಥರೆಡ್ಡಿ, ವಕೀಲರಾದ ವೆಂಕಟಾಚಲಪತಿ, ಶಿವಕುಮಾರ್, ಶಿವಾರೆಡ್ಡಿ, ಗೋಪಿನಾಥ್, ಈಶ್ವರ್ಗೌಡ, ಅನ್ವರ್ಖಾನ್, ವಜೀರ್, ಶ್ರೀದೇವಿ, ಎ.ವಿ.ಬೈರಾರೆಡ್ಡಿ, ದೇವರಾಜ್, ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ಜಾರ್ಖಂಡ್ನಲ್ಲಿ ನಡೆದ ಜಿಲ್ಲಾ ನ್ಯಾಯಾಧೀಶರ ಕೊಲೆಯನ್ನು ಖಂಡಿಸಿ ಹಾಗೂ ಆರೋಪಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ನಗರದ ಜೆಎಂಎಫ್ಸಿ ನ್ಯಾಯಾಲಯದ ವಕೀಲರು ಶನಿವಾರ ಕಾರ್ಯಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.</p>.<p>ಸಂಘದ ಅಧ್ಯಕ್ಷ ಎಸ್.ರಾಜಾರಾಂ ಮಾತನಾಡಿ, ಬೆಳಗ್ಗೆ ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿರುವಾಗ ನ್ಯಾಯಾಧೀಶರಿಗೆ ವಾಹನ ಡಿಕ್ಕಿಹೊಡೆಸಿ ಕೊಲೆ ಮಾಡಿದ್ದಾರೆ. ಇದು ಆಕಸ್ಮಿಕವಲ್ಲ, ಉದ್ದೇಶಪೂರ್ವಕ ಹಾಗೂ ಪೂರ್ವಯೋಜಿತ ಕೃತ್ಯವಾಗಿದೆ ಎಂದು ಆರೋಪಿಸಿದರು.</p>.<p>ನ್ಯಾಯಾಧೀಶರನ್ನು ಕೊಲೆ ಮಾಡಿರುವುದು ಖಂಡನೀಯ. ಸಮಾಜ ಯಾವ ದಿಕ್ಕಿಗೆ ಸಾಗುತ್ತಿದೆ ಎಂಬ ಚಿಂತನೆಯನ್ನು ಮಾಡಬೇಕು. ನ್ಯಾಯಾಧೀಶರಿಗೆ ರಕ್ಷಣೆ ಇಲ್ಲ ಎಂದರೆ ಸಾಮಾನ್ಯ ಜನರ ಪಾಡೇನು?. ನ್ಯಾಯಾಧೀಶರಿಗೆ ರಕ್ಷಣೆ ನೀಡಲು ಸಮರ್ಪಕ ಕಾನೂನು ರೂಪಿಸಬೇಕು ಎಂದು ಒತ್ತಾಯಿಸಿದರು.</p>.<p>ನ್ಯಾಯ ಸಿಗದವರು, ತೊಂದರೆಯಾದವರು ನ್ಯಾಯವನ್ನು ಕೋರಿ ನ್ಯಾಯಾಲಯಕ್ಕೆ ಬರುತ್ತಾರೆ. ಅಂತಹವರಿಗೆ ವಕೀಲರು, ನ್ಯಾಯಾಧೀಶರು ನ್ಯಾಯ ಒದಗಿಸುತ್ತಾರೆ. ನ್ಯಾಯದಾನ ಮಾಡುವ ನ್ಯಾಯಾಧೀಶರನ್ನು ಬಹಿರಂಗವಾಗಿ ಕೊಲೆ ಮಾಡಿರುವುದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದರು.</p>.<p>ಸಂಘದ ಉಪಾಧ್ಯಕ್ಷ ಶಿವಾನಂದ್, ಕಾರ್ಯದರ್ಶಿ ಶ್ರೀನಾಥ್, ಮಾಜಿ ಅಧ್ಯಕ್ಷ ಮಂಜುನಾಥರೆಡ್ಡಿ, ವಕೀಲರಾದ ವೆಂಕಟಾಚಲಪತಿ, ಶಿವಕುಮಾರ್, ಶಿವಾರೆಡ್ಡಿ, ಗೋಪಿನಾಥ್, ಈಶ್ವರ್ಗೌಡ, ಅನ್ವರ್ಖಾನ್, ವಜೀರ್, ಶ್ರೀದೇವಿ, ಎ.ವಿ.ಬೈರಾರೆಡ್ಡಿ, ದೇವರಾಜ್, ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>