<p><strong>ಶಿಡ್ಲಘಟ್ಟ</strong>: ಶಿಡ್ಲಘಟ್ಟದಿಂದ ಧರ್ಮಸ್ಥಳಕ್ಕೆ ಹೊರಟ ಧರ್ಮಯಾತ್ರೆಗೆ ಭಾನುವಾರ ನಗರದ ಅಶೋಕ ರಸ್ತೆಯ ದ್ವಿಮುಖ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು.</p>.<p>‘ನಮ್ಮ ಹಿಂದೂ ಧರ್ಮದ ಅಸ್ತಿತ್ವಕ್ಕೆ ಧಕ್ಕೆ ಬಂದಾಗ ಹಿಂದೂಗಳೆಲ್ಲಾ ಒಂದಾಗಿ ಧರ್ಮ ರಕ್ಷಣೆಗೆ ನಿಲ್ಲಬೇಕು’ ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದಗೌಡ ತಿಳಿಸಿದರು.</p>.<p>‘ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದೂ ಧರ್ಮ ಮತ್ತು ಧಾರ್ಮಿಕ ಕೇಂದ್ರಗಳನ್ನು ಗುರಿ ಮಾಡಿ ಚ್ಯುತಿಯಾಗುವಂತಹ ಕೆಲಸ ಮಾಡುತ್ತಿದೆ’ ಎಂದು ದೂರಿದರು.</p>.<p>‘ಇದೀಗ ಧರ್ಮಸ್ಥಳ ಮಂಜುನಾಥನ ಸನ್ನಿಧಿ ಬಗ್ಗೆ ಅಪಪ್ರಚಾರ ಮಾಡುವವರಿಗೆ ಪರೋಕ್ಷವಾಗಿ ಕುಮ್ಮಕ್ಕು ನೀಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು’.</p>.<p>‘ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಒತ್ತಾಯಿಸಿ ನೂರಾರು ಮಂದಿ ಶಿಡ್ಲಘಟ್ಟದಿಂದ ಧರ್ಮಸ್ಥಳಕ್ಕೆ ಧರ್ಮ ಯಾತ್ರೆ ಕೈಗೊಂಡಿದ್ದೇವೆ’ ಎಂದರು.</p>.<p>ಬಿಜೆಪಿ ನಗರ ಘಟಕದ ಅಧ್ಯಕ್ಷ ನರೇಶ್, ಕೊತ್ತನೂರು ಜಗದೀಶ್, ರಾಮಕೃಷ್ಣಪ್ಪ, ಬಾಲಕೃಷ್ಣ, ಚೆಲುವರಾಜು, ನಾರಾಯಣಸ್ವಾಮಿ, ಪ್ರಕಾಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ</strong>: ಶಿಡ್ಲಘಟ್ಟದಿಂದ ಧರ್ಮಸ್ಥಳಕ್ಕೆ ಹೊರಟ ಧರ್ಮಯಾತ್ರೆಗೆ ಭಾನುವಾರ ನಗರದ ಅಶೋಕ ರಸ್ತೆಯ ದ್ವಿಮುಖ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು.</p>.<p>‘ನಮ್ಮ ಹಿಂದೂ ಧರ್ಮದ ಅಸ್ತಿತ್ವಕ್ಕೆ ಧಕ್ಕೆ ಬಂದಾಗ ಹಿಂದೂಗಳೆಲ್ಲಾ ಒಂದಾಗಿ ಧರ್ಮ ರಕ್ಷಣೆಗೆ ನಿಲ್ಲಬೇಕು’ ಎಂದು ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದಗೌಡ ತಿಳಿಸಿದರು.</p>.<p>‘ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದಾಗಲೆಲ್ಲಾ ಹಿಂದೂ ಧರ್ಮ ಮತ್ತು ಧಾರ್ಮಿಕ ಕೇಂದ್ರಗಳನ್ನು ಗುರಿ ಮಾಡಿ ಚ್ಯುತಿಯಾಗುವಂತಹ ಕೆಲಸ ಮಾಡುತ್ತಿದೆ’ ಎಂದು ದೂರಿದರು.</p>.<p>‘ಇದೀಗ ಧರ್ಮಸ್ಥಳ ಮಂಜುನಾಥನ ಸನ್ನಿಧಿ ಬಗ್ಗೆ ಅಪಪ್ರಚಾರ ಮಾಡುವವರಿಗೆ ಪರೋಕ್ಷವಾಗಿ ಕುಮ್ಮಕ್ಕು ನೀಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು’.</p>.<p>‘ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಒತ್ತಾಯಿಸಿ ನೂರಾರು ಮಂದಿ ಶಿಡ್ಲಘಟ್ಟದಿಂದ ಧರ್ಮಸ್ಥಳಕ್ಕೆ ಧರ್ಮ ಯಾತ್ರೆ ಕೈಗೊಂಡಿದ್ದೇವೆ’ ಎಂದರು.</p>.<p>ಬಿಜೆಪಿ ನಗರ ಘಟಕದ ಅಧ್ಯಕ್ಷ ನರೇಶ್, ಕೊತ್ತನೂರು ಜಗದೀಶ್, ರಾಮಕೃಷ್ಣಪ್ಪ, ಬಾಲಕೃಷ್ಣ, ಚೆಲುವರಾಜು, ನಾರಾಯಣಸ್ವಾಮಿ, ಪ್ರಕಾಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>