ಇತ್ತೀಚೆಗೆ ನಗರಕ್ಕೆ ಬಂದಿದ್ದ ಕುಮಾರಸ್ವಾಮಿ ಅವರು, ‘ಜಿಲ್ಲೆಯ ವೈದ್ಯಕೀಯ ಕಾಲೇಜಿಗಿಂತಲೂ ಉತ್ತಮ ಆಸ್ಪತ್ರೆಗಳ ಅವಶ್ಯಕತೆ ಇದೆ’ ಎಂದು ಹೇಳಿದ್ದರು. ಬುಧವಾರ ಚುನಾವಣಾ ಪ್ರಚಾರ ಕಾರ್ಯದಲ್ಲಿ ಅದಕ್ಕೆ ತಿರುಗೇಟು ನೀಡಿದ ಸುಧಾಕರ್, ‘ಜಿಲ್ಲೆಗೆ ವೈದ್ಯಕೀಯ ಕಾಲೇಜು ಉಪಯೋಗವಿಲ್ಲವಂತೆ. ಹೊರರಾಜ್ಯದ ವಿದ್ಯಾರ್ಥಿಗಳಿಗೆ ಅನುಕೂಲವಂತೆ. ಮಾಜಿ ಮುಖ್ಯಮಂತ್ರಿಗೆ ಕೊಂಚವಾದರೂ ಲೌಕಿಕ ಜ್ಞಾನವಿದೆ ಎಂದುಕೊಂಡಿದ್ದೆ. ಆದರೆ, ಈ ರೀತಿಯ ಜ್ಞಾನವಿದೆ ಎಂದುಕೊಂಡಿರಲಿಲ್ಲ’ ಎಂದು ಟೀಕಿಸಿದರು.