<p><strong>ಶಿಡ್ಲಘಟ್ಟ:</strong> ಬೆನ್ನುಹುರಿ ಅಪಘಾತಕ್ಕೆ ಒಳಗಾದವರನ್ನು ರಾಜ್ಯ ಸರ್ಕಾರದ 2016ರ ಕಾಯ್ದೆ ಅನ್ವಯ ಗುರುತಿಸಲಾದ 21 ಅಂಗವಿಕಲತೆಯ ಪಟ್ಟಿಯ ಜೊತೆಗೆ 22ನೇ ಅಂಗವಿಕಲತೆಯಾಗಿ ಸೇರಿಸಬೇಕು. ಅಂಗವಿಕಲರಿಗೆ ಮಾಸಿಕ ಪಿಂಚಣಿಯನ್ನು ₹5 ಸಾವಿರಕ್ಕೆ ಏರಿಸಬೇಕು ಎಂದು ಎಸ್ಸಿಐ ನವಜೀವನ ಸೇವಾ ಸಂಘದ ಅಧ್ಯಕ್ಷ ಮುನಿರಾಜು ಒತ್ತಾಯಿಸಿದರು.</p>.<p>ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಎಸ್ಸಿಐ ನವಜೀವನ ಸೇವಾ ಸಂಘ, ಎಪಿಡಿ ಸಂಸ್ಥೆ ಬೆಂಗಳೂರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬೆನ್ನುಹುರಿ ಅಪಘಾತಕ್ಕೊಳಗಾದವರ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ಬೆನ್ನುಹುರಿ ಅಪಘಾತಕ್ಕೆ ಒಳಗಾದವರಿಗೆ ಸರ್ಕಾರದಿಂದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಉಚಿತ ಮೆಡಿಕಲ್ ಕಿಟ್ ನೀಡುವ ವ್ಯವಸ್ಥೆ ಜೊತೆಗೆ ಪುನರ್ವಸತಿ ಕೇಂದ್ರಗಳ ಸ್ಥಾಪನೆ ಮಾಡಬೇಕು ಎಂದರು.</p>.<p>ಎಪಿಡಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಶ್ರೀಕಾಂತ್ ಮಾತನಾಡಿ, ರಸ್ತೆ ಅಪಘಾತ, ಎತ್ತರದ ಪ್ರದೇಶ ಹತ್ತುವುದು, ಅತಿಯಾದ ಭಾರ ಹೊರುವುದು ಬೆನ್ನುಹುರಿ ಅಪಘಾತಕ್ಕೆ ಕಾರಣವಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ಕ್ರಮ ಅನುಸರಿಸಿ ಜಾಗೃತೆಯಿಂದಿರಬೇಕು ಎಂದರು.</p>.<p>ಪ್ರಾಂಶುಪಾಲ ಮುರಳಿಆನಂದ್ ಮಾತನಾಡಿದರು. ಬೆನ್ನುಹುರಿ ಅಪಘಾತಕ್ಕೊಳಗಾದ 5 ಜನರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಔಷಧಿ ಕಿಟ್ ವಿತರಣೆ ಸೇರಿದಂತೆ ವಿದ್ಯಾರ್ಥಿ ವೇತನ ನೀಡಲಾಯಿತು.</p>.<p>ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜ್ಯೋತಿಲಕ್ಷ್ಮಿ, ವಕೀಲ ಜಗದೀಶ್, ಎಂ.ಆರ್.ಡಬ್ಲ್ಯೂ ರಾಮಚಂದ್ರ, ಎಸ್ಸಿಐ ನವಜೀವನ ಸೇವಾ ಸಂಘದ ಕಾರ್ಯದರ್ಶಿ ರವಿ, ಉಪಾಧ್ಯಕ್ಷ ಮಂಜುನಾಥ್, ಸಮರ್ಥನಂ ಸಂಸ್ಥೆಯ ಪವಿತ್ರ, ಎಪಿಡಿ ಸಂಸ್ಥೆಯ ಸುಧಾ, ಗಿರಿಜಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ಬೆನ್ನುಹುರಿ ಅಪಘಾತಕ್ಕೆ ಒಳಗಾದವರನ್ನು ರಾಜ್ಯ ಸರ್ಕಾರದ 2016ರ ಕಾಯ್ದೆ ಅನ್ವಯ ಗುರುತಿಸಲಾದ 21 ಅಂಗವಿಕಲತೆಯ ಪಟ್ಟಿಯ ಜೊತೆಗೆ 22ನೇ ಅಂಗವಿಕಲತೆಯಾಗಿ ಸೇರಿಸಬೇಕು. ಅಂಗವಿಕಲರಿಗೆ ಮಾಸಿಕ ಪಿಂಚಣಿಯನ್ನು ₹5 ಸಾವಿರಕ್ಕೆ ಏರಿಸಬೇಕು ಎಂದು ಎಸ್ಸಿಐ ನವಜೀವನ ಸೇವಾ ಸಂಘದ ಅಧ್ಯಕ್ಷ ಮುನಿರಾಜು ಒತ್ತಾಯಿಸಿದರು.</p>.<p>ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಎಸ್ಸಿಐ ನವಜೀವನ ಸೇವಾ ಸಂಘ, ಎಪಿಡಿ ಸಂಸ್ಥೆ ಬೆಂಗಳೂರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬೆನ್ನುಹುರಿ ಅಪಘಾತಕ್ಕೊಳಗಾದವರ ದಿನಾಚರಣೆಯಲ್ಲಿ ಮಾತನಾಡಿದರು.</p>.<p>ಬೆನ್ನುಹುರಿ ಅಪಘಾತಕ್ಕೆ ಒಳಗಾದವರಿಗೆ ಸರ್ಕಾರದಿಂದ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಉಚಿತ ಮೆಡಿಕಲ್ ಕಿಟ್ ನೀಡುವ ವ್ಯವಸ್ಥೆ ಜೊತೆಗೆ ಪುನರ್ವಸತಿ ಕೇಂದ್ರಗಳ ಸ್ಥಾಪನೆ ಮಾಡಬೇಕು ಎಂದರು.</p>.<p>ಎಪಿಡಿ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಶ್ರೀಕಾಂತ್ ಮಾತನಾಡಿ, ರಸ್ತೆ ಅಪಘಾತ, ಎತ್ತರದ ಪ್ರದೇಶ ಹತ್ತುವುದು, ಅತಿಯಾದ ಭಾರ ಹೊರುವುದು ಬೆನ್ನುಹುರಿ ಅಪಘಾತಕ್ಕೆ ಕಾರಣವಾಗುತ್ತದೆ ಹಾಗಾಗಿ ಪ್ರತಿಯೊಬ್ಬರೂ ಮುನ್ನೆಚ್ಚರಿಕೆ ಕ್ರಮ ಅನುಸರಿಸಿ ಜಾಗೃತೆಯಿಂದಿರಬೇಕು ಎಂದರು.</p>.<p>ಪ್ರಾಂಶುಪಾಲ ಮುರಳಿಆನಂದ್ ಮಾತನಾಡಿದರು. ಬೆನ್ನುಹುರಿ ಅಪಘಾತಕ್ಕೊಳಗಾದ 5 ಜನರ ಸಾಧನೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಔಷಧಿ ಕಿಟ್ ವಿತರಣೆ ಸೇರಿದಂತೆ ವಿದ್ಯಾರ್ಥಿ ವೇತನ ನೀಡಲಾಯಿತು.</p>.<p>ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಜ್ಯೋತಿಲಕ್ಷ್ಮಿ, ವಕೀಲ ಜಗದೀಶ್, ಎಂ.ಆರ್.ಡಬ್ಲ್ಯೂ ರಾಮಚಂದ್ರ, ಎಸ್ಸಿಐ ನವಜೀವನ ಸೇವಾ ಸಂಘದ ಕಾರ್ಯದರ್ಶಿ ರವಿ, ಉಪಾಧ್ಯಕ್ಷ ಮಂಜುನಾಥ್, ಸಮರ್ಥನಂ ಸಂಸ್ಥೆಯ ಪವಿತ್ರ, ಎಪಿಡಿ ಸಂಸ್ಥೆಯ ಸುಧಾ, ಗಿರಿಜಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>