<p><strong>ಶಿಡ್ಲಘಟ್ಟ:</strong> ಕುಂದಲಗುರ್ಕಿ ಗ್ರಾಮ ಪಂಚಾಯಿತಿಯು ಒಂದೇ ನಿವೇಶನವನ್ನು ಇಬ್ಬರಿಗೆ ನೀಡುವ ಮೂಲಕ ಇಬ್ಬರ ಮಧ್ಯೆ ಜಗಳ ತಂದಿಟ್ಟಿದೆ. ಅಲ್ಲದೆ, ಈ ನಿವೇಶನವು ಇದೀಗ ಇಬ್ಬರಿಗೂ ಇಲ್ಲದಂತೆ ಮಾಡಲಾಗಿದೆ ಎಂದು ಆರೋಪಿಸಿ ಅಂಗವಿಕಲ ಸಂತೋಷ್ ಕುಮಾರ್ ಅವರು ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಗುರುವಾರದಿಂದ ಅನಿರ್ದಿಷ್ಠಾವಧಿ ಧರಣಿ ಆರಂಭಿಸಿದರು. </p>.<p>ತಾಲ್ಲೂಕಿನ ಕುಂದಲಗುರ್ಕಿ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಮಹಾತ್ಮಗಾಂಧಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟುಕೊಂಡು ಒಬ್ಬಂಟಿಯಾಗಿ ಧರಣಿ ಆರಂಭಿಸಿದ್ದಾರೆ ಸಂತೋಷ್.</p>.<p>2013ರಲ್ಲಿ ಗ್ರಾಮ ಪಂಚಾಯಿತಿಯಿಂದ ಸಂತೋಷ್ ಕುಮಾರ್ ಅವರ ತಾಯಿ ಆಂಜಿನಮ್ಮ ಹೆಸರಿಗೆ ನಿವೇಶನ ಮಂಜೂರಾಗಿತ್ತು. ಇಂದಿರಾ ಆವಾಸ್ ವಸತಿ ಯೋಜನೆಯಡಿ ಮನೆ ಕೂಡ ಮಂಜೂರಾಗಿತ್ತು. ಆಂಜಿನಮ್ಮ ಅವರು ನಿವೇಶನದಲ್ಲಿ ಮನೆ ನಿರ್ಮಿಸಲು ಅಡಿಪಾಯ ಹಾಕಿ ಮೊದಲ ಬಿಲ್ ₹29,800 ಬಿಲ್ ಹಣ ಕೂಡ ಪಡೆದುಕೊಂಡಿದ್ದಾರೆ. ಆದರೆ, ಅದೇ ನಿವೇಶನ ತಮಗೆ ಮಂಜೂರು ಆಗಿದೆ ಎಂದು ಗ್ರಾಮದ ಪ್ರಭಾವಿ ವ್ಯಕ್ತಿಯೊಬ್ಬರು ಪಂಚಾಯಿತಿಗೆ ದಾಖಲೆ ಸಲ್ಲಿಸಿದ್ದಾರೆ. ಇದರಿಂದ ಇಬ್ಬರ ನಡುವೆ ವಾದ–ವಿವಾದ ನಡೆದಿದೆ ಎಂದರು. </p>.<p>ಅಂತಿಮವಾಗಿ ಸಂತೋಷ್ ಕುಮಾರ್ ನಿರ್ಮಿಸಿದ್ದ ಅಡಿಪಾಯ ಕಿತ್ತು ಹಾಕಲಾಗಿದೆ. ಮನೆ ಕಟ್ಟಲು ಬಿಡುತ್ತಿಲ್ಲ. ಅಂದಿನಿಂದ ಇಂದಿನವರೆಗೆ ನಿವೇಶನಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆಯುತ್ತಿದೆ. ಸಮಸ್ಯೆ ಬಗೆಹರಿಸಬೇಕಿದ್ದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸುಮ್ಮನಿದ್ದಾರೆ ಎಂದು ದೂರಿದರು.</p>.<p>ನನ್ನ ಕುಟುಂಬಕ್ಕೆ ನಿವೇಶನವನ್ನು ಪಕ್ಕಾ ಮಾಡಿಸಬೇಕು. ಇಲ್ಲವೇ ಬೇರೆ ನಿವೇಶನ ನೀಡಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯಿತಿ ಎದುರು ಧರಣಿ ಆರಂಭಿಸಿದ್ದಾಗಿ ಅಂಗವಿಕಲ ಸಂತೋಷ್ ಕುಮಾರ್ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ಕುಂದಲಗುರ್ಕಿ ಗ್ರಾಮ ಪಂಚಾಯಿತಿಯು ಒಂದೇ ನಿವೇಶನವನ್ನು ಇಬ್ಬರಿಗೆ ನೀಡುವ ಮೂಲಕ ಇಬ್ಬರ ಮಧ್ಯೆ ಜಗಳ ತಂದಿಟ್ಟಿದೆ. ಅಲ್ಲದೆ, ಈ ನಿವೇಶನವು ಇದೀಗ ಇಬ್ಬರಿಗೂ ಇಲ್ಲದಂತೆ ಮಾಡಲಾಗಿದೆ ಎಂದು ಆರೋಪಿಸಿ ಅಂಗವಿಕಲ ಸಂತೋಷ್ ಕುಮಾರ್ ಅವರು ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಗುರುವಾರದಿಂದ ಅನಿರ್ದಿಷ್ಠಾವಧಿ ಧರಣಿ ಆರಂಭಿಸಿದರು. </p>.<p>ತಾಲ್ಲೂಕಿನ ಕುಂದಲಗುರ್ಕಿ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ಮಹಾತ್ಮಗಾಂಧಿ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಇಟ್ಟುಕೊಂಡು ಒಬ್ಬಂಟಿಯಾಗಿ ಧರಣಿ ಆರಂಭಿಸಿದ್ದಾರೆ ಸಂತೋಷ್.</p>.<p>2013ರಲ್ಲಿ ಗ್ರಾಮ ಪಂಚಾಯಿತಿಯಿಂದ ಸಂತೋಷ್ ಕುಮಾರ್ ಅವರ ತಾಯಿ ಆಂಜಿನಮ್ಮ ಹೆಸರಿಗೆ ನಿವೇಶನ ಮಂಜೂರಾಗಿತ್ತು. ಇಂದಿರಾ ಆವಾಸ್ ವಸತಿ ಯೋಜನೆಯಡಿ ಮನೆ ಕೂಡ ಮಂಜೂರಾಗಿತ್ತು. ಆಂಜಿನಮ್ಮ ಅವರು ನಿವೇಶನದಲ್ಲಿ ಮನೆ ನಿರ್ಮಿಸಲು ಅಡಿಪಾಯ ಹಾಕಿ ಮೊದಲ ಬಿಲ್ ₹29,800 ಬಿಲ್ ಹಣ ಕೂಡ ಪಡೆದುಕೊಂಡಿದ್ದಾರೆ. ಆದರೆ, ಅದೇ ನಿವೇಶನ ತಮಗೆ ಮಂಜೂರು ಆಗಿದೆ ಎಂದು ಗ್ರಾಮದ ಪ್ರಭಾವಿ ವ್ಯಕ್ತಿಯೊಬ್ಬರು ಪಂಚಾಯಿತಿಗೆ ದಾಖಲೆ ಸಲ್ಲಿಸಿದ್ದಾರೆ. ಇದರಿಂದ ಇಬ್ಬರ ನಡುವೆ ವಾದ–ವಿವಾದ ನಡೆದಿದೆ ಎಂದರು. </p>.<p>ಅಂತಿಮವಾಗಿ ಸಂತೋಷ್ ಕುಮಾರ್ ನಿರ್ಮಿಸಿದ್ದ ಅಡಿಪಾಯ ಕಿತ್ತು ಹಾಕಲಾಗಿದೆ. ಮನೆ ಕಟ್ಟಲು ಬಿಡುತ್ತಿಲ್ಲ. ಅಂದಿನಿಂದ ಇಂದಿನವರೆಗೆ ನಿವೇಶನಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆಯುತ್ತಿದೆ. ಸಮಸ್ಯೆ ಬಗೆಹರಿಸಬೇಕಿದ್ದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಸುಮ್ಮನಿದ್ದಾರೆ ಎಂದು ದೂರಿದರು.</p>.<p>ನನ್ನ ಕುಟುಂಬಕ್ಕೆ ನಿವೇಶನವನ್ನು ಪಕ್ಕಾ ಮಾಡಿಸಬೇಕು. ಇಲ್ಲವೇ ಬೇರೆ ನಿವೇಶನ ನೀಡಬೇಕು ಎಂದು ಆಗ್ರಹಿಸಿ ಗ್ರಾಮ ಪಂಚಾಯಿತಿ ಎದುರು ಧರಣಿ ಆರಂಭಿಸಿದ್ದಾಗಿ ಅಂಗವಿಕಲ ಸಂತೋಷ್ ಕುಮಾರ್ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>