<p><strong>ಚಿಕ್ಕಬಳ್ಳಾಪುರ</strong>: ಕೇಂದ್ರ ಸರ್ಕಾರದ 15ನೇ ಹಣಕಾಸು ಯೋಜನೆಯಡಿ ₹ 3.27 ಕೋಟಿ ಅನುದಾನ ನಗರಸಭೆಗೆ ಬಂದಿದೆ. ಹೀಗಿದ್ದರೂ ಇದಕ್ಕೆ ಸಂಬಂಧಿಸಿದಂತೆ ಕ್ರಿಯಾ ಯೋಜನೆ ತಯಾರಿಸಿಲ್ಲ ಎಂದು ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ ಅವರ ಬಳಿ ಚಿಕ್ಕಬಳ್ಳಾಪುರ ನಗರಸಭೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. </p>.<p>ಈ ಸಂಬಂಧ ಮನವಿ ಪತ್ರ ನೀಡಿರುವ ಸದಸ್ಯರು, ಈ ಅನುದಾನದ ಬಗ್ಗೆ ಸಾಮಾನ್ಯ ಸಭೆಯಲ್ಲಿ ಚರ್ಚೆ ಮಾಡಿ ನಗರದ 31 ವಾರ್ಡ್ನಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ನಿಮಗೆ ಆಸಕ್ತಿ ಇದ್ದಂತೆ ಇಲ್ಲ. ನಾಗರಿಕರಿಗೆ ಮೂಲಸೌಕರ್ಯಗಳನ್ನು ಕೊಡಲು ವಿಫಲರಾಗಿದ್ದೀರಿ ಎಂದಿದ್ದಾರೆ.</p>.<p>ಸಾಮಾನ್ಯ ಸಭೆ ನಡೆಸುವಂತೆ ಜು.9ರಂದು ಪತ್ರದ ಮೂಲಕ ತಮ್ಮ ಗಮನಕ್ಕೆ ತಂದಿದ್ದೇವೆ. ಇದಾದ ಎರಡು ದಿನಗಳಲ್ಲಿಯೇ ವಿಶೇಷ ಸಭೆ ಕರೆದಿದ್ದೀರಿ. ಆದರೆ ಆ ಸಭೆಯನ್ನೂ ಮುಂದೂಡಲಾಯಿತು.</p>.<p>2024ರ ನವೆಂಬರ್ನಲ್ಲಿ ಸಾಮಾನ್ಯ ಸಭೆ ನಡೆದಿತ್ತು. 8 ತಿಂಗಳಾದರೂ ಸಾಮಾನ್ಯ ಸಭೆ ನಡೆದಿಲ್ಲ. ನಿಮಗೆ ನಗರದ ಅಭಿವೃದ್ಧಿಗೆ ಕಾಳಜಿ ಇದ್ದಂತೆ ಕಾಣಿಸುತ್ತಿಲ್ಲ ಎಂದು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಈ ಕೂಡಲೇ ಸಾಮಾನ್ಯ ಸಭೆ ಕರೆಯಬೇಕು. ಕರ್ನಾಟಕ ಪೌರಸಭೆಗಳ ಕಾಯ್ದಯಡಿ ಸ್ಥಾಯಿ ಸಮಿತಿ ರಚನೆಗೆ ಈಗಾಗಲೇ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಆದೇಶಿಸಿದ್ದಾರೆ. ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿ ರಚನೆಯ ಆದೇಶವನ್ನೂ ತರಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ನಗರಸಭೆ ಸದಸ್ಯರಾದ ಡಿ.ಎಸ್.ಆನಂದರೆಡ್ಡಿ ಬಾಬು, ನರಸಿಂಹಮೂರ್ತಿ, ಸುಬ್ರಹ್ಮಣ್ಯಾಚಾರಿ, ಯತೀಶ್, ಸತೀಶ್, ಮುಖಂಡರಾದ ಮುನಿರಾಜು, ತೇಜೇಂದ್ರ ನಿಯೋಗದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಕೇಂದ್ರ ಸರ್ಕಾರದ 15ನೇ ಹಣಕಾಸು ಯೋಜನೆಯಡಿ ₹ 3.27 ಕೋಟಿ ಅನುದಾನ ನಗರಸಭೆಗೆ ಬಂದಿದೆ. ಹೀಗಿದ್ದರೂ ಇದಕ್ಕೆ ಸಂಬಂಧಿಸಿದಂತೆ ಕ್ರಿಯಾ ಯೋಜನೆ ತಯಾರಿಸಿಲ್ಲ ಎಂದು ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ ಅವರ ಬಳಿ ಚಿಕ್ಕಬಳ್ಳಾಪುರ ನಗರಸಭೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. </p>.<p>ಈ ಸಂಬಂಧ ಮನವಿ ಪತ್ರ ನೀಡಿರುವ ಸದಸ್ಯರು, ಈ ಅನುದಾನದ ಬಗ್ಗೆ ಸಾಮಾನ್ಯ ಸಭೆಯಲ್ಲಿ ಚರ್ಚೆ ಮಾಡಿ ನಗರದ 31 ವಾರ್ಡ್ನಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ನಿಮಗೆ ಆಸಕ್ತಿ ಇದ್ದಂತೆ ಇಲ್ಲ. ನಾಗರಿಕರಿಗೆ ಮೂಲಸೌಕರ್ಯಗಳನ್ನು ಕೊಡಲು ವಿಫಲರಾಗಿದ್ದೀರಿ ಎಂದಿದ್ದಾರೆ.</p>.<p>ಸಾಮಾನ್ಯ ಸಭೆ ನಡೆಸುವಂತೆ ಜು.9ರಂದು ಪತ್ರದ ಮೂಲಕ ತಮ್ಮ ಗಮನಕ್ಕೆ ತಂದಿದ್ದೇವೆ. ಇದಾದ ಎರಡು ದಿನಗಳಲ್ಲಿಯೇ ವಿಶೇಷ ಸಭೆ ಕರೆದಿದ್ದೀರಿ. ಆದರೆ ಆ ಸಭೆಯನ್ನೂ ಮುಂದೂಡಲಾಯಿತು.</p>.<p>2024ರ ನವೆಂಬರ್ನಲ್ಲಿ ಸಾಮಾನ್ಯ ಸಭೆ ನಡೆದಿತ್ತು. 8 ತಿಂಗಳಾದರೂ ಸಾಮಾನ್ಯ ಸಭೆ ನಡೆದಿಲ್ಲ. ನಿಮಗೆ ನಗರದ ಅಭಿವೃದ್ಧಿಗೆ ಕಾಳಜಿ ಇದ್ದಂತೆ ಕಾಣಿಸುತ್ತಿಲ್ಲ ಎಂದು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>.<p>ಈ ಕೂಡಲೇ ಸಾಮಾನ್ಯ ಸಭೆ ಕರೆಯಬೇಕು. ಕರ್ನಾಟಕ ಪೌರಸಭೆಗಳ ಕಾಯ್ದಯಡಿ ಸ್ಥಾಯಿ ಸಮಿತಿ ರಚನೆಗೆ ಈಗಾಗಲೇ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಆದೇಶಿಸಿದ್ದಾರೆ. ಸಾಮಾನ್ಯ ಸಭೆಯಲ್ಲಿ ಸ್ಥಾಯಿ ಸಮಿತಿ ರಚನೆಯ ಆದೇಶವನ್ನೂ ತರಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ನಗರಸಭೆ ಸದಸ್ಯರಾದ ಡಿ.ಎಸ್.ಆನಂದರೆಡ್ಡಿ ಬಾಬು, ನರಸಿಂಹಮೂರ್ತಿ, ಸುಬ್ರಹ್ಮಣ್ಯಾಚಾರಿ, ಯತೀಶ್, ಸತೀಶ್, ಮುಖಂಡರಾದ ಮುನಿರಾಜು, ತೇಜೇಂದ್ರ ನಿಯೋಗದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>