<p><strong>ಚಿಂತಾಮಣಿ: </strong>ಕಾಮಗಾರಿ ನಡೆಸದೆ ನಕಲಿ ಬಿಲ್ಲುಗಳನ್ನು ಮಾಡಿಕೊಂಡು ಹಣ ದುರುಪಯೋಗವಾಗಿದೆ ಎಂಬ ದೂರಿನ ಆರೋಪದ ಬಗ್ಗೆ ತನಿಖೆ ನಡೆಸಲು ಬುಧವಾರ ಬಂದಿದ್ದ ಲೋಕಾಯುಕ್ತ ಇಲಾಖೆಯ ತಾಂತ್ರಿಕ ಅಧಿಕಾರಿ ಕೆಲವರ ಪ್ರತಿಭಟನೆಯಿಂದ ತನಿಖೆ ನಡೆಸದೆ ವಾಪಸ್ ಹೋದ ಪ್ರಕರಣ ತಾಲ್ಲೂಕಿನದೊಡ್ಡ ಗಂಜೂರು ಗ್ರಾಮದಲ್ಲಿ ನಡೆದಿದೆ.</p>.<p>ತಾಲ್ಲೂಕು ಪಂಚಾಯಿತಿಯ 2017-18 ನೇ ಸಾಲಿನ ಮುದ್ರಾಂಕ ಶುಲ್ಕ ಯೋಜನೆಯಲ್ಲಿ ಗ್ರಾಮದ ಪರಿಶಿಷ್ಟ ಜಾತಿಯ ಕಾಲೋನಿಯಲ್ಲಿ ನೀರುಗಂಟಿಕೃಷ್ಣಪ್ಪ ಮನೆ ಹತ್ತಿರದಿಂದ ನೀರಿನ ಸಿಸ್ಟನ್ವರೆಗೂ ಪೈಪ್ ಲೈನ್ ಅಳವಡಿಕೆಗೆ ₹50 ಸಾವಿರ ಮತ್ತು ಗ್ರಾಮಪಂಚಾಯಿತಿ ಕಚೇರಿಯಿಂದ ಸಿಸ್ಟನ್ವರೆಗೂ ₹50 ಸಾವಿರ ಮಂಜೂರಾಗಿತ್ತು.</p>.<p>ಆದರೆ, ಕಾಮಗಾರಿ ನಡೆಸದೆ ಹಿಂದೆ ಇದ್ದ ಹಳೆಯ ಪೈಪ್ ಲೈನ್ಗೆ ಸಂಪರ್ಕ ಕಲ್ಪಿಸಿ ಹಣ ಲಪಟಾಯಿಸಲಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಜೆ.ನಾರಾಯಣಸ್ವಾಮಿ ಲೋಕಾಯುಕ್ತ ಮತ್ತು ಶಾಸಕರಿಗೆ ದೂರು ನೀಡಿದ್ದರು.</p>.<p>ಬೆಂಗಳೂರಿನ ಲೋಕಾಯುಕ್ತ ಕಚೇರಿಯ ಎಂಜನಿಯರ್ ಅಶೋಕ್ ತನಿಖೆಗೆಂದು ಗ್ರಾಮಕ್ಕೆ ಬಂದಿದ್ದರು. ಆದರೆ, ಕೆಲವರು ತನಿಖೆಗೆ ಪ್ರತಿಭಟನೆ ನಡೆಸಿದ್ದರಿಂದ ಅಧಿಕಾರಿ ಬಂದ ದಾರಿಗೆ ಸುಂಕವಿಲ್ಲ ಎಂದು ವಾಪಸ್ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ: </strong>ಕಾಮಗಾರಿ ನಡೆಸದೆ ನಕಲಿ ಬಿಲ್ಲುಗಳನ್ನು ಮಾಡಿಕೊಂಡು ಹಣ ದುರುಪಯೋಗವಾಗಿದೆ ಎಂಬ ದೂರಿನ ಆರೋಪದ ಬಗ್ಗೆ ತನಿಖೆ ನಡೆಸಲು ಬುಧವಾರ ಬಂದಿದ್ದ ಲೋಕಾಯುಕ್ತ ಇಲಾಖೆಯ ತಾಂತ್ರಿಕ ಅಧಿಕಾರಿ ಕೆಲವರ ಪ್ರತಿಭಟನೆಯಿಂದ ತನಿಖೆ ನಡೆಸದೆ ವಾಪಸ್ ಹೋದ ಪ್ರಕರಣ ತಾಲ್ಲೂಕಿನದೊಡ್ಡ ಗಂಜೂರು ಗ್ರಾಮದಲ್ಲಿ ನಡೆದಿದೆ.</p>.<p>ತಾಲ್ಲೂಕು ಪಂಚಾಯಿತಿಯ 2017-18 ನೇ ಸಾಲಿನ ಮುದ್ರಾಂಕ ಶುಲ್ಕ ಯೋಜನೆಯಲ್ಲಿ ಗ್ರಾಮದ ಪರಿಶಿಷ್ಟ ಜಾತಿಯ ಕಾಲೋನಿಯಲ್ಲಿ ನೀರುಗಂಟಿಕೃಷ್ಣಪ್ಪ ಮನೆ ಹತ್ತಿರದಿಂದ ನೀರಿನ ಸಿಸ್ಟನ್ವರೆಗೂ ಪೈಪ್ ಲೈನ್ ಅಳವಡಿಕೆಗೆ ₹50 ಸಾವಿರ ಮತ್ತು ಗ್ರಾಮಪಂಚಾಯಿತಿ ಕಚೇರಿಯಿಂದ ಸಿಸ್ಟನ್ವರೆಗೂ ₹50 ಸಾವಿರ ಮಂಜೂರಾಗಿತ್ತು.</p>.<p>ಆದರೆ, ಕಾಮಗಾರಿ ನಡೆಸದೆ ಹಿಂದೆ ಇದ್ದ ಹಳೆಯ ಪೈಪ್ ಲೈನ್ಗೆ ಸಂಪರ್ಕ ಕಲ್ಪಿಸಿ ಹಣ ಲಪಟಾಯಿಸಲಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯ ಜೆ.ನಾರಾಯಣಸ್ವಾಮಿ ಲೋಕಾಯುಕ್ತ ಮತ್ತು ಶಾಸಕರಿಗೆ ದೂರು ನೀಡಿದ್ದರು.</p>.<p>ಬೆಂಗಳೂರಿನ ಲೋಕಾಯುಕ್ತ ಕಚೇರಿಯ ಎಂಜನಿಯರ್ ಅಶೋಕ್ ತನಿಖೆಗೆಂದು ಗ್ರಾಮಕ್ಕೆ ಬಂದಿದ್ದರು. ಆದರೆ, ಕೆಲವರು ತನಿಖೆಗೆ ಪ್ರತಿಭಟನೆ ನಡೆಸಿದ್ದರಿಂದ ಅಧಿಕಾರಿ ಬಂದ ದಾರಿಗೆ ಸುಂಕವಿಲ್ಲ ಎಂದು ವಾಪಸ್ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>