<p>ಚಿಕ್ಕಬಳ್ಳಾಪುರ: ಹೈನುಗಾರರು ಒಕ್ಕೂಟದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಗುಂಪು ರಾಸು ವಿಮೆ, ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಸೌಲಭ್ಯಗಳಿವೆ. ಇವುಗಳನ್ನು ಬಳಸಿಕೊಂಡು ಅಭಿವೃದ್ಧಿ ಕಾಣಬೇಕು ಎಂದು ಕೋಚಿಮುಲ್ ನಿರ್ದೇಶಕ ಭರಣಿ ವೆಂಕಟೇಶ್ ತಿಳಿಸಿದರು.</p>.<p>ಇಲ್ಲಿನ ಶಿಬಿರ ಕಚೇರಿಯಲ್ಲಿ ಸೋಮವಾರ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಚೆಕ್ಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>ಮೂಕ ಪ್ರಾಣಿಗಳಿಗೆ ಆರೋಗ್ಯ ಸಮಸ್ಯೆ ಎದುರಾದರೆ ಅದನ್ನು ಅವುಗಳು ಹೇಳಿಕೊಳ್ಳಲು ಸಾಧ್ಯವಿಲ್ಲ. ಬಹಳಷ್ಟು ಬಡ ಕುಟುಂಬಗಳು ಒಂದು ಹಸುವನ್ನು ಸಾಕಿ ಜೀವನ ನಡೆಸುತ್ತಿವೆ. ಈ ಎಲ್ಲ ಕಾರಣದಿಂದ ರಾಸುಗಳಿಗೆ ವಿಮೆ ಮಾಡಿಸಬೇಕು ಎಂದು ಸಲಹೆ ನೀಡಿದರು. </p>.<p>ಹೈನುಗಾರರ ಅಭಿವೃದ್ಧಿಗೆ ಕೋಚಿಮುಲ್ ಬದ್ಧವಾಗಿದೆ. ರೈತರಿಗೆ ಅವರ ಕುಟುಂಬಕ್ಕೆ ಅನುಕೂಲವಾಗುವ ಹಲವು ಯೋಜನೆಗಳು ಜಾರಿಯಲ್ಲಿವೆ. ಅವುಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಪುನೀತ್ ರಾಜ್ಕುಮಾರ್ ರೈತರ ಬಗ್ಗೆ ಅಪಾರವಾದ ಗೌರವ ಹೊಂದಿದ್ದರು. ನಂದಿ ಹಾಲಿನ ಉತ್ಪನ್ನಗಳ ರಾಯಭಾರಿ ಆಗಿದ್ದರು. ಹಾಲಿನ ಉತ್ಪನ್ನಗಳ ಜಾಹೀರಾತಿನಲ್ಲಿ ನಟಿಸಲು ಯಾವುದೇ ಸಂಭಾವನೆ ಸಹ ಪಡೆಯುತ್ತಿರಲಿಲ್ಲ ಎಂದು ಹೇಳಿದರು.</p>.<p>ಶಿಬಿರ ಕಚೇರಿ ಉಪವ್ಯವಸ್ಥಾಪಕ ಡಿ.ಕೆ.ಶಿವಕುಮಾರ್ ಮಾತನಾಡಿ,ಪಶು ಆಹಾರವನ್ನು ಬಳಕೆ ಮಾಡಿಕೊಂಡು ಹಾಲು ಉತ್ಪಾದನೆ ಹೆಚ್ಚಿಸಬೇಕು. ರಾಸು ವಿಮೆ, ಗುಂಪು ವಿಮೆ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಕೋವಿಡ್ ಸಂದರ್ಭದಲ್ಲಿ ಹಾಲು ಮಾರಾಟ ಆಗುತ್ತಿರಲಿಲ್ಲ. ಇದರಿಂದ ನಷ್ಟ ಅನುಭವಿಸಿದೆವು. ಕೋವಿಡ್ ನಂತರ ಮಾರುಕಟ್ಟೆ ಚೇತರಿಸಿಕೊಳ್ಳುತ್ತಿದೆ. ರೈತರ ಕಲ್ಯಾಣಕ್ಕೆ ಒಕ್ಕೂಟ ಶ್ರಮಿಸುತ್ತಿದೆ ಎಂದರು.</p>.<p>30 ಫಲಾನುಭವಿಗಳಿಗೆಗುಂಪು ರಾಸು ವಿಮೆ, 23 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ 2020–21ನೇ ಸಾಲಿನ ಸಾಮಾನ್ಯಸಭೆಯಲ್ಲಿ ಬಹುಮಾನ ಪಡೆದ ಸಂಘಗಳಿಗೆ ಚೆಕ್ ವಿತರಿಸಲಾಯಿತು. ಶಿಬಿರ ಕಚೇರಿ ಸಿಬ್ಬಂದಿ, ಹೈನುಗಾರರು<br />ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಹೈನುಗಾರರು ಒಕ್ಕೂಟದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಗುಂಪು ರಾಸು ವಿಮೆ, ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಸೌಲಭ್ಯಗಳಿವೆ. ಇವುಗಳನ್ನು ಬಳಸಿಕೊಂಡು ಅಭಿವೃದ್ಧಿ ಕಾಣಬೇಕು ಎಂದು ಕೋಚಿಮುಲ್ ನಿರ್ದೇಶಕ ಭರಣಿ ವೆಂಕಟೇಶ್ ತಿಳಿಸಿದರು.</p>.<p>ಇಲ್ಲಿನ ಶಿಬಿರ ಕಚೇರಿಯಲ್ಲಿ ಸೋಮವಾರ ವಿವಿಧ ಯೋಜನೆಗಳಡಿ ಫಲಾನುಭವಿಗಳಿಗೆ ಚೆಕ್ಗಳನ್ನು ವಿತರಿಸಿ ಅವರು ಮಾತನಾಡಿದರು.</p>.<p>ಮೂಕ ಪ್ರಾಣಿಗಳಿಗೆ ಆರೋಗ್ಯ ಸಮಸ್ಯೆ ಎದುರಾದರೆ ಅದನ್ನು ಅವುಗಳು ಹೇಳಿಕೊಳ್ಳಲು ಸಾಧ್ಯವಿಲ್ಲ. ಬಹಳಷ್ಟು ಬಡ ಕುಟುಂಬಗಳು ಒಂದು ಹಸುವನ್ನು ಸಾಕಿ ಜೀವನ ನಡೆಸುತ್ತಿವೆ. ಈ ಎಲ್ಲ ಕಾರಣದಿಂದ ರಾಸುಗಳಿಗೆ ವಿಮೆ ಮಾಡಿಸಬೇಕು ಎಂದು ಸಲಹೆ ನೀಡಿದರು. </p>.<p>ಹೈನುಗಾರರ ಅಭಿವೃದ್ಧಿಗೆ ಕೋಚಿಮುಲ್ ಬದ್ಧವಾಗಿದೆ. ರೈತರಿಗೆ ಅವರ ಕುಟುಂಬಕ್ಕೆ ಅನುಕೂಲವಾಗುವ ಹಲವು ಯೋಜನೆಗಳು ಜಾರಿಯಲ್ಲಿವೆ. ಅವುಗಳನ್ನು ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಪುನೀತ್ ರಾಜ್ಕುಮಾರ್ ರೈತರ ಬಗ್ಗೆ ಅಪಾರವಾದ ಗೌರವ ಹೊಂದಿದ್ದರು. ನಂದಿ ಹಾಲಿನ ಉತ್ಪನ್ನಗಳ ರಾಯಭಾರಿ ಆಗಿದ್ದರು. ಹಾಲಿನ ಉತ್ಪನ್ನಗಳ ಜಾಹೀರಾತಿನಲ್ಲಿ ನಟಿಸಲು ಯಾವುದೇ ಸಂಭಾವನೆ ಸಹ ಪಡೆಯುತ್ತಿರಲಿಲ್ಲ ಎಂದು ಹೇಳಿದರು.</p>.<p>ಶಿಬಿರ ಕಚೇರಿ ಉಪವ್ಯವಸ್ಥಾಪಕ ಡಿ.ಕೆ.ಶಿವಕುಮಾರ್ ಮಾತನಾಡಿ,ಪಶು ಆಹಾರವನ್ನು ಬಳಕೆ ಮಾಡಿಕೊಂಡು ಹಾಲು ಉತ್ಪಾದನೆ ಹೆಚ್ಚಿಸಬೇಕು. ರಾಸು ವಿಮೆ, ಗುಂಪು ವಿಮೆ ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಕೋವಿಡ್ ಸಂದರ್ಭದಲ್ಲಿ ಹಾಲು ಮಾರಾಟ ಆಗುತ್ತಿರಲಿಲ್ಲ. ಇದರಿಂದ ನಷ್ಟ ಅನುಭವಿಸಿದೆವು. ಕೋವಿಡ್ ನಂತರ ಮಾರುಕಟ್ಟೆ ಚೇತರಿಸಿಕೊಳ್ಳುತ್ತಿದೆ. ರೈತರ ಕಲ್ಯಾಣಕ್ಕೆ ಒಕ್ಕೂಟ ಶ್ರಮಿಸುತ್ತಿದೆ ಎಂದರು.</p>.<p>30 ಫಲಾನುಭವಿಗಳಿಗೆಗುಂಪು ರಾಸು ವಿಮೆ, 23 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ 2020–21ನೇ ಸಾಲಿನ ಸಾಮಾನ್ಯಸಭೆಯಲ್ಲಿ ಬಹುಮಾನ ಪಡೆದ ಸಂಘಗಳಿಗೆ ಚೆಕ್ ವಿತರಿಸಲಾಯಿತು. ಶಿಬಿರ ಕಚೇರಿ ಸಿಬ್ಬಂದಿ, ಹೈನುಗಾರರು<br />ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>