ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೇಳೂರು: ಕೆನೆಭರಿತ ಹಾಲಿನ ಪುಡಿ ವಿತರಣೆ

Last Updated 13 ಆಗಸ್ಟ್ 2021, 3:39 IST
ಅಕ್ಷರ ಗಾತ್ರ

ಚೇಳೂರು: ವಿದ್ಯಾರ್ಥಿಗಳಿಗೆ ಪೌಷ್ಟಿಕಾಂಶಯುಕ್ತ ಆಹಾರ ದೊರೆಯುವಂತೆ ಮಾಡಲು ಜೂನ್, ಜುಲೈ ತಿಂಗಳಿಗೆ ಕೆನೆಭರಿತ‌ ಹಾಲಿನ ಪುಡಿ ವಿತರಿಸಲು ಶಿಕ್ಷಣ‌ ಇಲಾಖೆಯು ಅನುದಾನ ಬಿಡುಗಡೆ ಮಾಡಿದ್ದು, ಎರಡು ತಿಂಗಳ ಹಾಲಿನ ಪುಡಿಯನ್ನು ಮಕ್ಕಳಿಗೆ ನೀಡಲಾಗಿದೆ ಎಂದು ಮರವಪಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ವಿ. ಮದ್ದಿರೆಡ್ಡಿ ತಿಳಿಸಿದರು.

ಹಾಲಿನ ಪುಡಿ ವಿತರಿಸಿದ ಬಳಿಕ ಮಾತನಾಡಿದ ಅವರು, ಪ್ರತಿ ತಿಂಗಳು ಒಂದು ಕೆ.ಜಿ ಕೆನೆಭರಿತ ಹಾಲಿನ ಪುಡಿಯನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗುತ್ತಿದೆ. ಆ ಮೂಲಕ ಕ್ಷೀರಭಾಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಇದರಿಂದ ಸಂಕಷ್ಟದಲ್ಲಿರುವ ರೈತರು ಮತ್ತು ಹಾಲು‌ ಉತ್ಪಾದಕರಿಗೆ ಸರ್ಕಾರದಿಂದ ಸಕಾಲಿಕ‌ ನೆರವು ಒದಗಿಸಲಾಗುತ್ತಿದೆ ಎಂದು ಹೇಳಿದರು.

ಸಹ ಶಿಕ್ಷಕ ಕೆ.ವಿ. ಜಯರಾಮರೆಡ್ಡಿ, ಪೋಷಕರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT