<p><strong>ಚಿಕ್ಕಬಳ್ಳಾಪುರ</strong>: ನಗರದ ಸ್ವಚ್ಛತೆ ಅರಿಯುವ ನಿಟ್ಟಿನಲ್ಲಿ ನಗರ ಪ್ರದಕ್ಷಿಣೆ ಆರಂಭಿಸಿದ ಜಿಲ್ಲಾಧಿಕಾರಿ ಆರ್.ಲತಾ ಅವರು ಬುಧವಾರ 19ನೇ ವಾರ್ಡ್ ಹಾಗೂ ಬಜಾರ್ ರಸ್ತೆಗೆ ಭೇಟಿ ನೀಡಿ ಸ್ವಚ್ಛತಾ ಕಾರ್ಯವನ್ನು ಪರಿಶೀಲಿಸಿದರು.</p>.<p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಾರ್ಡ್ ನಂಬರ್ 19ರ ಎಲ್ಲಾ ರಸ್ತೆಗಳು, ಚರಂಡಿಗಳು, ಮನೆ-ಮನೆ ಕಸ ಸಂಗ್ರಹಣೆ, ಹಸಿ ಮತ್ತು ಒಣ ಕಸ ವಿಂಗಡನೆ, ಹೋಟೆಲ್ಗಳ ಶುಚಿತ್ವ, ಎಲ್ಲಾ ಅಂಗಡಿಗಳ ಮುಂದೆ ಕೊರೊನಾ ಅರಿವು ಮೂಡಿಸುವ ಬ್ಯಾನರ್ ಅಳವಡಿಸಿರುವ ಬಗ್ಗೆ ಪರಿಶೀಲನೆ ನಡೆಸಲಾಯಿತು’ ಎಂದು ಹೇಳಿದರು.</p>.<p>‘ಪ್ರತಿಯೊಂದು ವಾರ್ಡ್ನಲ್ಲೂ ಕೋವಿಡ್-19 ತಡೆಯಲು ಕಾರ್ಯಪಡೆ ನೇಮಿಸಿದಂತೆ, ಸ್ವಚ್ಚತೆಯನ್ನು ಕಾಪಾಡಲು ಕ್ಯಾಪ್ಟನ್ಗಳನ್ನು ನೇಮಿಸುವ ಮೂಲಕ ನಗರದಲ್ಲಿ ಕಸ ಸುರಿಯುವುದನ್ನು ಸಂಪೂರ್ಣವಾಗಿ ತಡೆಯಲು ಉದ್ದೇಶಿಸಲಾಗಿದೆ‘ ಎಂದು ತಿಳಿಸಿದರು.</p>.<p>‘ನಗರದ ಸಾರ್ವಜನಿಕರಿಗೆ ಕಸ ವಿಲೇವಾರಿಯ ಬಗ್ಗೆ ಅರಿವು ಮೂಡಿಸಿ, ಮನೆಗಳಿಂದಲೇ ಒಣ ಮತ್ತು ಹಸಿ ಕಸವನ್ನು ವಿಂಗಡಿಸಿ ಪಡೆದು ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಚರಂಡಿ ಮತ್ತು ರಸ್ತೆಗಳು ಸ್ವಚ್ಛವಾಗಿಟ್ಟುಕೊಳ್ಳಬೇಕು. ಪ್ಲಾಸ್ಟಿಕ್ ಬಳಕೆಯು ಕಡಿಮೆ ಮಾಡಲು ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.</p>.<p>‘ಪ್ರತಿದಿನ ವಾರ್ಡ್ಗಳ ಭೇಟಿ ಮಾಡಿ ಪರಿಶೀಲನೆ ಮಾಡಲಾಗುತ್ತದೆ. ಇದರಿಂದ ನಗರವನ್ನು ಸ್ವಚ್ಚವಾಗಿಡಲು ಹಾಗೂ ಕೊರೊನಾದಂತಹ ಮಹಾಮಾರಿ ಹರಡುವುದು ತಡೆಯಲು ಸಹಕಾರಿಯಾಗುತ್ತದೆ. ಕೊರೊನಾ ಸೋಂಕಿತರ ಮನೆಗಳಿಗೆ ಭೇಟಿ ನೀಡಿ, ಅವರ ಕುಂದುಕೊರತೆಗಳನ್ನು ಆಲಿಸಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ’ ಎಂದು ಹೇಳಿದರು.</p>.<p>‘ಜಿಲ್ಲೆಯಾದ್ಯಂತ ಗೌರಿ ಮತ್ತು ಗಣೇಶ ಚತುರ್ಥಿಯ ಆಚರಣೆಗೆ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಲಾಗುತ್ತದೆ. ಜಿಲ್ಲೆಯಲ್ಲಿ ಪಿಒಪಿಯಿಂದ ಮಾಡಿರುವ ವಿಗ್ರಹಗಳನ್ನು ನಿಷೇಧಿಸಲಾಗಿದೆ. ಮಣ್ಣು ಅಥವಾ ಅರಿಶಿಣದಿಂದ ತಯಾರಿಸಿದ ಗಣಪತಿ ಮೂರ್ತಿಗಳನ್ನು ಪೂಜಿಸುವ ಮೂಲಕ ಸಾರ್ವಜನಿಕರ ಪರಿಸರ ಮಾಲಿನ್ಯ ತಡೆಗಟ್ಟಲು ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು’ ಎಂದರು.</p>.<p>ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ, ಚಿಕ್ಕಬಳ್ಳಾಪುರ ನಗರಸಭೆ ಆಯುಕ್ತ ಲೋಹಿತ್, ವಾರ್ಡ್ ಸದಸ್ಯರು, ಕಿರಿಯ ಅಭಿಯಂತರರು, ಆರೋಗ್ಯ ನಿರೀಕ್ಷಕರು, ನೋಡಲ್ ಅಧಿಕಾರಿಗಳು, ಸ್ವಚ್ಛತಾ ಕ್ಯಾಪ್ಟನ್ಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ನಗರದ ಸ್ವಚ್ಛತೆ ಅರಿಯುವ ನಿಟ್ಟಿನಲ್ಲಿ ನಗರ ಪ್ರದಕ್ಷಿಣೆ ಆರಂಭಿಸಿದ ಜಿಲ್ಲಾಧಿಕಾರಿ ಆರ್.ಲತಾ ಅವರು ಬುಧವಾರ 19ನೇ ವಾರ್ಡ್ ಹಾಗೂ ಬಜಾರ್ ರಸ್ತೆಗೆ ಭೇಟಿ ನೀಡಿ ಸ್ವಚ್ಛತಾ ಕಾರ್ಯವನ್ನು ಪರಿಶೀಲಿಸಿದರು.</p>.<p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಾರ್ಡ್ ನಂಬರ್ 19ರ ಎಲ್ಲಾ ರಸ್ತೆಗಳು, ಚರಂಡಿಗಳು, ಮನೆ-ಮನೆ ಕಸ ಸಂಗ್ರಹಣೆ, ಹಸಿ ಮತ್ತು ಒಣ ಕಸ ವಿಂಗಡನೆ, ಹೋಟೆಲ್ಗಳ ಶುಚಿತ್ವ, ಎಲ್ಲಾ ಅಂಗಡಿಗಳ ಮುಂದೆ ಕೊರೊನಾ ಅರಿವು ಮೂಡಿಸುವ ಬ್ಯಾನರ್ ಅಳವಡಿಸಿರುವ ಬಗ್ಗೆ ಪರಿಶೀಲನೆ ನಡೆಸಲಾಯಿತು’ ಎಂದು ಹೇಳಿದರು.</p>.<p>‘ಪ್ರತಿಯೊಂದು ವಾರ್ಡ್ನಲ್ಲೂ ಕೋವಿಡ್-19 ತಡೆಯಲು ಕಾರ್ಯಪಡೆ ನೇಮಿಸಿದಂತೆ, ಸ್ವಚ್ಚತೆಯನ್ನು ಕಾಪಾಡಲು ಕ್ಯಾಪ್ಟನ್ಗಳನ್ನು ನೇಮಿಸುವ ಮೂಲಕ ನಗರದಲ್ಲಿ ಕಸ ಸುರಿಯುವುದನ್ನು ಸಂಪೂರ್ಣವಾಗಿ ತಡೆಯಲು ಉದ್ದೇಶಿಸಲಾಗಿದೆ‘ ಎಂದು ತಿಳಿಸಿದರು.</p>.<p>‘ನಗರದ ಸಾರ್ವಜನಿಕರಿಗೆ ಕಸ ವಿಲೇವಾರಿಯ ಬಗ್ಗೆ ಅರಿವು ಮೂಡಿಸಿ, ಮನೆಗಳಿಂದಲೇ ಒಣ ಮತ್ತು ಹಸಿ ಕಸವನ್ನು ವಿಂಗಡಿಸಿ ಪಡೆದು ಸಮರ್ಪಕವಾಗಿ ವಿಲೇವಾರಿ ಮಾಡಬೇಕು. ಚರಂಡಿ ಮತ್ತು ರಸ್ತೆಗಳು ಸ್ವಚ್ಛವಾಗಿಟ್ಟುಕೊಳ್ಳಬೇಕು. ಪ್ಲಾಸ್ಟಿಕ್ ಬಳಕೆಯು ಕಡಿಮೆ ಮಾಡಲು ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದರು.</p>.<p>‘ಪ್ರತಿದಿನ ವಾರ್ಡ್ಗಳ ಭೇಟಿ ಮಾಡಿ ಪರಿಶೀಲನೆ ಮಾಡಲಾಗುತ್ತದೆ. ಇದರಿಂದ ನಗರವನ್ನು ಸ್ವಚ್ಚವಾಗಿಡಲು ಹಾಗೂ ಕೊರೊನಾದಂತಹ ಮಹಾಮಾರಿ ಹರಡುವುದು ತಡೆಯಲು ಸಹಕಾರಿಯಾಗುತ್ತದೆ. ಕೊರೊನಾ ಸೋಂಕಿತರ ಮನೆಗಳಿಗೆ ಭೇಟಿ ನೀಡಿ, ಅವರ ಕುಂದುಕೊರತೆಗಳನ್ನು ಆಲಿಸಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ’ ಎಂದು ಹೇಳಿದರು.</p>.<p>‘ಜಿಲ್ಲೆಯಾದ್ಯಂತ ಗೌರಿ ಮತ್ತು ಗಣೇಶ ಚತುರ್ಥಿಯ ಆಚರಣೆಗೆ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸಲಾಗುತ್ತದೆ. ಜಿಲ್ಲೆಯಲ್ಲಿ ಪಿಒಪಿಯಿಂದ ಮಾಡಿರುವ ವಿಗ್ರಹಗಳನ್ನು ನಿಷೇಧಿಸಲಾಗಿದೆ. ಮಣ್ಣು ಅಥವಾ ಅರಿಶಿಣದಿಂದ ತಯಾರಿಸಿದ ಗಣಪತಿ ಮೂರ್ತಿಗಳನ್ನು ಪೂಜಿಸುವ ಮೂಲಕ ಸಾರ್ವಜನಿಕರ ಪರಿಸರ ಮಾಲಿನ್ಯ ತಡೆಗಟ್ಟಲು ಜಿಲ್ಲಾಡಳಿತದೊಂದಿಗೆ ಕೈಜೋಡಿಸಬೇಕು’ ಎಂದರು.</p>.<p>ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಣುಕಾ, ಚಿಕ್ಕಬಳ್ಳಾಪುರ ನಗರಸಭೆ ಆಯುಕ್ತ ಲೋಹಿತ್, ವಾರ್ಡ್ ಸದಸ್ಯರು, ಕಿರಿಯ ಅಭಿಯಂತರರು, ಆರೋಗ್ಯ ನಿರೀಕ್ಷಕರು, ನೋಡಲ್ ಅಧಿಕಾರಿಗಳು, ಸ್ವಚ್ಛತಾ ಕ್ಯಾಪ್ಟನ್ಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>