<p>ಗುಡಿಬಂಡೆ: ತಾಲ್ಲೂಕಿನ ಬೀಚಗಾನಹಳ್ಳಿ ಕ್ರಾಸ್- ಪೆಮ್ಮನಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆ ಪೆಮ್ಮನಹಳ್ಳಿ ಕ್ರಾಸ್ನಲ್ಲಿ ಶನಿವಾರ ಮಧ್ಯಾಹ್ನ ಟ್ರ್ಯಾಕ್ಟರ್ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.</p>.<p>ಮೃತ ಮಹಿಳೆಯನ್ನು ಪೆಮ್ಮನಹಳ್ಳಿ ಗ್ರಾಮದ ತಿಪ್ಪಕ್ಕ (50) ಎಂದು ಗುರುತಿಸಲಾಗಿದೆ.</p>.<p>ಗುಡಿಬಂಡೆ ತಾಲ್ಲೂಕಿನ ಜಂಬಿಗೇಮರದಹಳ್ಳಿಯಿಂದ ಯರ್ರಲಕ್ಕೇನಹಳ್ಳಿ ಕ್ರಾಸ್ನ ಆಯಿಲ್ ಪ್ಯಾಕ್ಟರಿಗೆ ನೀರು ಸರಬರಾಜು ಮಾಡುವ ಟ್ರ್ಯಾಕ್ಟರ್ನಲ್ಲಿ ಬೀಚಗಾನಹಳ್ಳಿ ಕ್ರಾಸ್ಗೆ ಹೋಗಲು ಪೆಮ್ಮನಹಳ್ಳಿ ಗ್ರಾಮದಲ್ಲಿ ಟ್ರ್ಯಾಕ್ಟರ್ ಹತ್ತಿದ್ದರು.</p>.<p>ಪೆಮ್ಮನಹಳ್ಳಿ ಕ್ರಾಸ್ನ ಹಂಪ್ಸ್ನಲ್ಲಿ ಟ್ರ್ಯಾಕ್ಟರ್ ಮೇಲಕ್ಕೆ ಎಗರಿದಾಗ ತಿಪ್ಪಕ್ಕ ಕೆಳಗೆ ಬಿದ್ದು ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.</p>.<p>ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸ್ ಭೇಟಿ ಪರಿಶೀಲನೆ ನಡೆಸಿದರು. ತಿಪ್ಪಕ್ಕ ಅವರ ಮಗ ಗೌತಮ್ ಗುಡಿಬಂಡೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಡಿಬಂಡೆ: ತಾಲ್ಲೂಕಿನ ಬೀಚಗಾನಹಳ್ಳಿ ಕ್ರಾಸ್- ಪೆಮ್ಮನಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆಯ ರಾಷ್ಟ್ರೀಯ ಹೆದ್ದಾರಿ ಸರ್ವಿಸ್ ರಸ್ತೆ ಪೆಮ್ಮನಹಳ್ಳಿ ಕ್ರಾಸ್ನಲ್ಲಿ ಶನಿವಾರ ಮಧ್ಯಾಹ್ನ ಟ್ರ್ಯಾಕ್ಟರ್ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.</p>.<p>ಮೃತ ಮಹಿಳೆಯನ್ನು ಪೆಮ್ಮನಹಳ್ಳಿ ಗ್ರಾಮದ ತಿಪ್ಪಕ್ಕ (50) ಎಂದು ಗುರುತಿಸಲಾಗಿದೆ.</p>.<p>ಗುಡಿಬಂಡೆ ತಾಲ್ಲೂಕಿನ ಜಂಬಿಗೇಮರದಹಳ್ಳಿಯಿಂದ ಯರ್ರಲಕ್ಕೇನಹಳ್ಳಿ ಕ್ರಾಸ್ನ ಆಯಿಲ್ ಪ್ಯಾಕ್ಟರಿಗೆ ನೀರು ಸರಬರಾಜು ಮಾಡುವ ಟ್ರ್ಯಾಕ್ಟರ್ನಲ್ಲಿ ಬೀಚಗಾನಹಳ್ಳಿ ಕ್ರಾಸ್ಗೆ ಹೋಗಲು ಪೆಮ್ಮನಹಳ್ಳಿ ಗ್ರಾಮದಲ್ಲಿ ಟ್ರ್ಯಾಕ್ಟರ್ ಹತ್ತಿದ್ದರು.</p>.<p>ಪೆಮ್ಮನಹಳ್ಳಿ ಕ್ರಾಸ್ನ ಹಂಪ್ಸ್ನಲ್ಲಿ ಟ್ರ್ಯಾಕ್ಟರ್ ಮೇಲಕ್ಕೆ ಎಗರಿದಾಗ ತಿಪ್ಪಕ್ಕ ಕೆಳಗೆ ಬಿದ್ದು ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.</p>.<p>ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಗುಡಿಬಂಡೆ ಪೊಲೀಸ್ ಭೇಟಿ ಪರಿಶೀಲನೆ ನಡೆಸಿದರು. ತಿಪ್ಪಕ್ಕ ಅವರ ಮಗ ಗೌತಮ್ ಗುಡಿಬಂಡೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>