<p><strong>ಗುಡಿಬಂಡೆ: </strong>ಜನಸಂದಣಿ ಹಾಗೂ ನೂರಾರು ವಿದ್ಯಾರ್ಥಿಗಳು ಕಾಲೇಜಿಗೆ ತೆರಳುವ ಪಟ್ಟಣದಲ್ಲಿನ ರಾಮಪಟ್ಟಣ ರಸ್ತೆ ಸಂಪೂರ್ಣ ಹಾಳಾಗಿದ್ದು, ಸಂಚಾರಕ್ಕೆ ತೊಂದರೆಯಾಗಿದೆ.</p>.<p>ಪ್ರತಿದಿನ ಈ ರಸ್ತೆಯಲ್ಲಿ ಓಡಾಡುವ ಜನರು ಹಾಗೂ ವಾಹನಗಳಿಗೆ ನರಕ ದರ್ಶನವಾಗುತ್ತಿದೆ. ಈ ನಡುವೆಯೇ ಗುರುವಾರ ಸಂಜೆ ಸುರಿದ ಮಳೆಯಿಂದ ರಸ್ತೆಯಲ್ಲಿ ನೀರು ಶೇಖರಣೆಯಾಗಿದ್ದು, ಕೆರೆಯಂತಾಗಿದೆ. ಇದರಿಂದ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ.</p>.<p>ಮುಖ್ಯರಸ್ತೆಯಿಂದ ರಾಮಪಟ್ಟಣ ರಸ್ತೆವರೆಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜು, ಪದವಿ ಕಾಲೇಜು, ಗುಡಿಬಂಡೆ ಗ್ರಾಮೀಣ ಭಾಗಕ್ಕೆ ಇಂಡೇನ್ ಗ್ಯಾಸ್ ಸರಬರಾಜು ಮಾಡುವ ಕಚೇರಿ, ಉಲ್ಲೋಡು ಗ್ರಾಮ ಪಂಚಾಯಿತಿ ಕಚೇರಿ ಇದೆ. ಹತ್ತಾರು ಹಳ್ಳಿಗಳಿಂದ ಕೆಲಸ ಕಾರ್ಯಗಳಿಗೆ ಜನರು ಈ ಮಾರ್ಗ ಅವಲಂಬಿಸಿದ್ದಾರೆ. ಹಲವಾರು ಬಾರಿ ರಸ್ತೆ ದುರಸ್ತಿ ಮಾಡುವಂತೆ ಪಟ್ಟಣ ಪಂಚಾಯಿತಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾರೊಬ್ಬರು ಕ್ರಮವಹಿಸಿಲ್ಲ.</p>.<p>‘ಪಟ್ಟಣ ಪಂಚಾಯಿತಿ ಅಧಿಕಾರಿಗಳನ್ನು ವಿಚಾರಣೆ ಮಾಡಿದರೆ ಈ ರಸ್ತೆ ನಮ್ಮ ವ್ಯಾಪ್ತಿಗೆ ಸೇರಿಲ್ಲ. ಲೋಕೋಪಯೋಗಿ ಇಲಾಖೆಯ ರಸ್ತೆಯಾಗಿದೆ ಎನ್ನುತ್ತಾರೆ. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು’ ಎಂದು ವಿದ್ಯಾರ್ಥಿಗಳಾದ ಮಂಜು, ನಂದಕುಮಾರ್ ತಿಳಿಸಿದರು.</p>.<p>ಪಟ್ಟಣದ 11 ವಾರ್ಡ್ಗಳಲ್ಲಿ ನಡೆದಿರುವ ರಸ್ತೆ, ಚರಂಡಿ ಕಾಮಗಾರಿ ಕಳಪೆಯಿಂದ ಕೂಡಿದೆ. ರಸ್ತೆಗಳು ಒಂದೇ ವರ್ಷದಲ್ಲಿ ಹಾಳಾಗುತ್ತವೆ. ಈ ಬಗ್ಗೆ ಶಾಸಕರು ಮತ್ತು ಅಧಿಕಾರಿಗಳಿಗೆ ತಿಳಿಸಿದರೂ ಗಮನಹರಿಸಿಲ್ಲ ಎಂಬುದು ಜನರ ದೂರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ: </strong>ಜನಸಂದಣಿ ಹಾಗೂ ನೂರಾರು ವಿದ್ಯಾರ್ಥಿಗಳು ಕಾಲೇಜಿಗೆ ತೆರಳುವ ಪಟ್ಟಣದಲ್ಲಿನ ರಾಮಪಟ್ಟಣ ರಸ್ತೆ ಸಂಪೂರ್ಣ ಹಾಳಾಗಿದ್ದು, ಸಂಚಾರಕ್ಕೆ ತೊಂದರೆಯಾಗಿದೆ.</p>.<p>ಪ್ರತಿದಿನ ಈ ರಸ್ತೆಯಲ್ಲಿ ಓಡಾಡುವ ಜನರು ಹಾಗೂ ವಾಹನಗಳಿಗೆ ನರಕ ದರ್ಶನವಾಗುತ್ತಿದೆ. ಈ ನಡುವೆಯೇ ಗುರುವಾರ ಸಂಜೆ ಸುರಿದ ಮಳೆಯಿಂದ ರಸ್ತೆಯಲ್ಲಿ ನೀರು ಶೇಖರಣೆಯಾಗಿದ್ದು, ಕೆರೆಯಂತಾಗಿದೆ. ಇದರಿಂದ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆಯಾಗಿದೆ.</p>.<p>ಮುಖ್ಯರಸ್ತೆಯಿಂದ ರಾಮಪಟ್ಟಣ ರಸ್ತೆವರೆಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜು, ಪದವಿ ಕಾಲೇಜು, ಗುಡಿಬಂಡೆ ಗ್ರಾಮೀಣ ಭಾಗಕ್ಕೆ ಇಂಡೇನ್ ಗ್ಯಾಸ್ ಸರಬರಾಜು ಮಾಡುವ ಕಚೇರಿ, ಉಲ್ಲೋಡು ಗ್ರಾಮ ಪಂಚಾಯಿತಿ ಕಚೇರಿ ಇದೆ. ಹತ್ತಾರು ಹಳ್ಳಿಗಳಿಂದ ಕೆಲಸ ಕಾರ್ಯಗಳಿಗೆ ಜನರು ಈ ಮಾರ್ಗ ಅವಲಂಬಿಸಿದ್ದಾರೆ. ಹಲವಾರು ಬಾರಿ ರಸ್ತೆ ದುರಸ್ತಿ ಮಾಡುವಂತೆ ಪಟ್ಟಣ ಪಂಚಾಯಿತಿ, ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾರೊಬ್ಬರು ಕ್ರಮವಹಿಸಿಲ್ಲ.</p>.<p>‘ಪಟ್ಟಣ ಪಂಚಾಯಿತಿ ಅಧಿಕಾರಿಗಳನ್ನು ವಿಚಾರಣೆ ಮಾಡಿದರೆ ಈ ರಸ್ತೆ ನಮ್ಮ ವ್ಯಾಪ್ತಿಗೆ ಸೇರಿಲ್ಲ. ಲೋಕೋಪಯೋಗಿ ಇಲಾಖೆಯ ರಸ್ತೆಯಾಗಿದೆ ಎನ್ನುತ್ತಾರೆ. ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು’ ಎಂದು ವಿದ್ಯಾರ್ಥಿಗಳಾದ ಮಂಜು, ನಂದಕುಮಾರ್ ತಿಳಿಸಿದರು.</p>.<p>ಪಟ್ಟಣದ 11 ವಾರ್ಡ್ಗಳಲ್ಲಿ ನಡೆದಿರುವ ರಸ್ತೆ, ಚರಂಡಿ ಕಾಮಗಾರಿ ಕಳಪೆಯಿಂದ ಕೂಡಿದೆ. ರಸ್ತೆಗಳು ಒಂದೇ ವರ್ಷದಲ್ಲಿ ಹಾಳಾಗುತ್ತವೆ. ಈ ಬಗ್ಗೆ ಶಾಸಕರು ಮತ್ತು ಅಧಿಕಾರಿಗಳಿಗೆ ತಿಳಿಸಿದರೂ ಗಮನಹರಿಸಿಲ್ಲ ಎಂಬುದು ಜನರ ದೂರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>