<p><strong>ಚಿಕ್ಕಬಳ್ಳಾಪುರ: </strong>ಕೊರೊನಾ, ಲಾಕ್ಡೌನ್ ಕಾರಣಕ್ಕೆ ಸಂಕಷ್ಟದಲ್ಲಿರುವ ರೈತರಿಗೆ ಚೈತನ್ಯ ತುಂಬುವ ದಿಸೆಯಲ್ಲಿ ಸಂಸದ ಡಿ.ಕೆ.ಸುರೇಶ್ ಅವರು ಶುಕ್ರವಾರ ತಾಲ್ಲೂಕಿನ ರೈತರೊಬ್ಬರ ಮೂರು ಎಕರೆ ತೋಟದಲ್ಲಿದ್ದ ದ್ರಾಕ್ಷಿ ಫಸಲು ಖರೀದಿಸಿದರು.</p>.<p>ಮಂಡಿಕಲ್ಲು ಹೋಬಳಿ ಹರಿಸ್ಥಳದ ರೈತ ಚೌಡರೆಡ್ಡಿ ಅವರ ತೋಟಕ್ಕೆ ಭೇಟಿ ನೀಡಿದ ಡಿ.ಕೆ.ಸುರೇಶ್ ಅವರು, ಒಂದು ಕೆ.ಜಿ ದ್ರಾಕ್ಷಿಗೆ ₹18 ಬೆಲೆಯಲ್ಲಿ ಸುಮಾರು 50 ಟನ್ ದ್ರಾಕ್ಷಿ ಖರೀದಿಸಿದರು.</p>.<p>ಕಟಾವು ಮಾಡಿದ ದ್ರಾಕ್ಷಿಯನ್ನು ಆರು ಲಾರಿಗಳ ಮೂಲಕ ಕನಕಪುರ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಡ ಜನರಿಗೆ ಉಚಿತವಾಗಿ ವಿತರಿಸಲು ಕಳುಹಿಸಿಕೊಟ್ಟರು.</p>.<p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್, ’ಇಂತಹ ಸಂಕಷ್ಟದ ಸಮಯದಲ್ಲಿ ಪ್ರತಿಯೊಬ್ಬರಿಗೂ ಒಂದಿಲ್ಲೊಂದು ರೀತಿಯಲ್ಲಿ ಪರಿಹಾರ ದೊರೆಯುತ್ತದೆ. ಆದರೆ ರೈತರಿಗೆ ಸಿಗುವುದಿಲ್ಲ. ಹೀಗಾಗಿ, ರೈತರಿಗೆ ಸಹಾಯ ಹಸ್ತ ಚಾಚುತ್ತಿರುವೆ‘ ಎಂದರು.</p>.<p>’ರೈತರು ವರ್ಷದಲ್ಲಿ ಒಂದು ಉತ್ತಮ ಸೀಸನ್ಗಾಗಿ ಕಾಯ್ದುಕೊಂಡಿರುತ್ತಾರೆ. ಏಕಾಏಕಿ ಕಾಣಿಸಿಕೊಂಡ ಕೊರೊನಾ ಸೋಂಕಿನ ಭೀತಿ ಅನ್ನದಾತರನ್ನು ಕಂಗೇಡಿಸಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ, ರಾಜ್ಯ ಸರ್ಕಾರ ಸೂಕ್ತ ಮಾರ್ಗದರ್ಶನ ಕೊಡಬೇಕಿತ್ತು. ಇಲ್ಲವೇ ಸಹಾಯ ಹಸ್ತ ಚಾಚುವ ಕೆಲಸ ಮಾಡಬೇಕಿತ್ತು‘ ಎಂದು ಹೇಳಿದರು.</p>.<p>’ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಪರಿಸ್ಥಿತಿ ನಿರ್ವಹಣೆಯಲ್ಲಿ ಅಧಿಕಾರಿಗಳು, ಸಚಿವರಲ್ಲೇ ಗೊಂದಲವಿದೆ. ಈವರೆಗೆ ಜನರಿಗೆ ಅಕ್ಕಿ ಕೊಟ್ಟಿದ್ದು ಬಿಟ್ಟು ಬೇರೇನೂ ಸಹಾಯ ಮಾಡಿಲ್ಲ‘ ಎಂದು ಆರೋಪಿಸಿದರು.</p>.<p>’ರಾಜ್ಯ ಸರ್ಕಾರಕ್ಕೆ ಜನರ ಆರೋಗ್ಯಕ್ಕಿಂತಲೂ ತುರ್ತಾಗಿ ಖಜಾನೆಗೆ ದುಡ್ಡು ಬರುವುದು ಮುಖ್ಯವಾಗಿದೆ. ಹೀಗಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವಂತೆ ಎರಡು ಬಾರಿ ಪ್ರಧಾನಮಂತ್ರಿ ಅವರಿಗೆ ಮನವಿ ಸಲ್ಲಿಸಿ ಛೀಮಾರಿ ಹಾಕಿಸಿಕೊಂಡಿದೆ‘ ಎಂದು ಹೇಳಿದರು.</p>.<p>’ಜನರಿಗೆ ಸರ್ಕಾರ ಉಚಿತವಾಗಿ ಮಾಸ್ಕ್, ಸ್ಯಾನಿಟೈಸರ್ ವಿತರಿಸಿಲ್ಲ. ಬದಲು ಮಾಸ್ಕ್ ಇಲ್ಲದೆ ಹೊರ ಬಂದರೆ ದಂಡ ಹಾಕುವುದಾಗಿ ಅಧಿಕಾರಿಗಳು ಬೆದರಿಸುತ್ತಾರೆ. ದಂಡ ಕಟ್ಟಲು ಜನರು ಎಲ್ಲಿಂದ ಹಣ ತರಬೇಕು‘ ಎಂದು ಪ್ರಶ್ನಿಸಿದರು.</p>.<p>’ಈವರೆಗೆ ಸರ್ಕಾರ ರೈತರು, ಜನಸಾಮಾನ್ಯರ ಹಿತ ಕಾಯುವ ಕೆಲಸ ಮಾಡಿಲ್ಲ. ಲಾಕ್ಡೌನ್ ಸಂದರ್ಭದಲ್ಲಿ ರೈತರು ಹಾಗೂ ಕಾರ್ಮಿಕರ ಹಿತ ರಕ್ಷಿಸುವ ಉದ್ದೇಶದಿಂದ ರೈತರಿಂದ ನೇರವಾಗಿ ಹತ್ತು ಟನ್ ತರಕಾರಿಯನ್ನು ಖರೀದಿಸಿ ಜನತೆಗೆ ವಿತರಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ‘ ಎಂದು ತಿಳಿಸಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಮುಖಂಡರಾದ ನಂದಿ ಆಂಜನಪ್ಪ, ಕೆ.ವಿ.ನವೀನ್ ಕಿರಣ್, ಪುರದಗಡ್ಡೆ ಮುನೇಗೌಡ, ಅಡಗಲ್ ಶ್ರೀಧರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ಕೊರೊನಾ, ಲಾಕ್ಡೌನ್ ಕಾರಣಕ್ಕೆ ಸಂಕಷ್ಟದಲ್ಲಿರುವ ರೈತರಿಗೆ ಚೈತನ್ಯ ತುಂಬುವ ದಿಸೆಯಲ್ಲಿ ಸಂಸದ ಡಿ.ಕೆ.ಸುರೇಶ್ ಅವರು ಶುಕ್ರವಾರ ತಾಲ್ಲೂಕಿನ ರೈತರೊಬ್ಬರ ಮೂರು ಎಕರೆ ತೋಟದಲ್ಲಿದ್ದ ದ್ರಾಕ್ಷಿ ಫಸಲು ಖರೀದಿಸಿದರು.</p>.<p>ಮಂಡಿಕಲ್ಲು ಹೋಬಳಿ ಹರಿಸ್ಥಳದ ರೈತ ಚೌಡರೆಡ್ಡಿ ಅವರ ತೋಟಕ್ಕೆ ಭೇಟಿ ನೀಡಿದ ಡಿ.ಕೆ.ಸುರೇಶ್ ಅವರು, ಒಂದು ಕೆ.ಜಿ ದ್ರಾಕ್ಷಿಗೆ ₹18 ಬೆಲೆಯಲ್ಲಿ ಸುಮಾರು 50 ಟನ್ ದ್ರಾಕ್ಷಿ ಖರೀದಿಸಿದರು.</p>.<p>ಕಟಾವು ಮಾಡಿದ ದ್ರಾಕ್ಷಿಯನ್ನು ಆರು ಲಾರಿಗಳ ಮೂಲಕ ಕನಕಪುರ ಮತ್ತು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಡ ಜನರಿಗೆ ಉಚಿತವಾಗಿ ವಿತರಿಸಲು ಕಳುಹಿಸಿಕೊಟ್ಟರು.</p>.<p>ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್, ’ಇಂತಹ ಸಂಕಷ್ಟದ ಸಮಯದಲ್ಲಿ ಪ್ರತಿಯೊಬ್ಬರಿಗೂ ಒಂದಿಲ್ಲೊಂದು ರೀತಿಯಲ್ಲಿ ಪರಿಹಾರ ದೊರೆಯುತ್ತದೆ. ಆದರೆ ರೈತರಿಗೆ ಸಿಗುವುದಿಲ್ಲ. ಹೀಗಾಗಿ, ರೈತರಿಗೆ ಸಹಾಯ ಹಸ್ತ ಚಾಚುತ್ತಿರುವೆ‘ ಎಂದರು.</p>.<p>’ರೈತರು ವರ್ಷದಲ್ಲಿ ಒಂದು ಉತ್ತಮ ಸೀಸನ್ಗಾಗಿ ಕಾಯ್ದುಕೊಂಡಿರುತ್ತಾರೆ. ಏಕಾಏಕಿ ಕಾಣಿಸಿಕೊಂಡ ಕೊರೊನಾ ಸೋಂಕಿನ ಭೀತಿ ಅನ್ನದಾತರನ್ನು ಕಂಗೇಡಿಸಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ, ರಾಜ್ಯ ಸರ್ಕಾರ ಸೂಕ್ತ ಮಾರ್ಗದರ್ಶನ ಕೊಡಬೇಕಿತ್ತು. ಇಲ್ಲವೇ ಸಹಾಯ ಹಸ್ತ ಚಾಚುವ ಕೆಲಸ ಮಾಡಬೇಕಿತ್ತು‘ ಎಂದು ಹೇಳಿದರು.</p>.<p>’ಕೋವಿಡ್ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಪರಿಸ್ಥಿತಿ ನಿರ್ವಹಣೆಯಲ್ಲಿ ಅಧಿಕಾರಿಗಳು, ಸಚಿವರಲ್ಲೇ ಗೊಂದಲವಿದೆ. ಈವರೆಗೆ ಜನರಿಗೆ ಅಕ್ಕಿ ಕೊಟ್ಟಿದ್ದು ಬಿಟ್ಟು ಬೇರೇನೂ ಸಹಾಯ ಮಾಡಿಲ್ಲ‘ ಎಂದು ಆರೋಪಿಸಿದರು.</p>.<p>’ರಾಜ್ಯ ಸರ್ಕಾರಕ್ಕೆ ಜನರ ಆರೋಗ್ಯಕ್ಕಿಂತಲೂ ತುರ್ತಾಗಿ ಖಜಾನೆಗೆ ದುಡ್ಡು ಬರುವುದು ಮುಖ್ಯವಾಗಿದೆ. ಹೀಗಾಗಿ ಮದ್ಯ ಮಾರಾಟಕ್ಕೆ ಅವಕಾಶ ನೀಡುವಂತೆ ಎರಡು ಬಾರಿ ಪ್ರಧಾನಮಂತ್ರಿ ಅವರಿಗೆ ಮನವಿ ಸಲ್ಲಿಸಿ ಛೀಮಾರಿ ಹಾಕಿಸಿಕೊಂಡಿದೆ‘ ಎಂದು ಹೇಳಿದರು.</p>.<p>’ಜನರಿಗೆ ಸರ್ಕಾರ ಉಚಿತವಾಗಿ ಮಾಸ್ಕ್, ಸ್ಯಾನಿಟೈಸರ್ ವಿತರಿಸಿಲ್ಲ. ಬದಲು ಮಾಸ್ಕ್ ಇಲ್ಲದೆ ಹೊರ ಬಂದರೆ ದಂಡ ಹಾಕುವುದಾಗಿ ಅಧಿಕಾರಿಗಳು ಬೆದರಿಸುತ್ತಾರೆ. ದಂಡ ಕಟ್ಟಲು ಜನರು ಎಲ್ಲಿಂದ ಹಣ ತರಬೇಕು‘ ಎಂದು ಪ್ರಶ್ನಿಸಿದರು.</p>.<p>’ಈವರೆಗೆ ಸರ್ಕಾರ ರೈತರು, ಜನಸಾಮಾನ್ಯರ ಹಿತ ಕಾಯುವ ಕೆಲಸ ಮಾಡಿಲ್ಲ. ಲಾಕ್ಡೌನ್ ಸಂದರ್ಭದಲ್ಲಿ ರೈತರು ಹಾಗೂ ಕಾರ್ಮಿಕರ ಹಿತ ರಕ್ಷಿಸುವ ಉದ್ದೇಶದಿಂದ ರೈತರಿಂದ ನೇರವಾಗಿ ಹತ್ತು ಟನ್ ತರಕಾರಿಯನ್ನು ಖರೀದಿಸಿ ಜನತೆಗೆ ವಿತರಿಸುವ ಕಾರ್ಯಕ್ಕೆ ಮುಂದಾಗಿದ್ದೇವೆ‘ ಎಂದು ತಿಳಿಸಿದರು.</p>.<p>ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಮುಖಂಡರಾದ ನಂದಿ ಆಂಜನಪ್ಪ, ಕೆ.ವಿ.ನವೀನ್ ಕಿರಣ್, ಪುರದಗಡ್ಡೆ ಮುನೇಗೌಡ, ಅಡಗಲ್ ಶ್ರೀಧರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>