<p><strong>ಚಿಕ್ಕಬಳ್ಳಾಪುರ</strong>: ‘ಗಡಿ ಭಾಗದ ಗ್ರಾಮಗಳಲ್ಲಿ ಕನ್ನಡ ಶಾಲೆಗಳನ್ನು ಮುಚ್ಚಬಾರದು. ಅಲ್ಲಿ ಕನ್ನಡಕ್ಕೆ ಪ್ರೋತ್ಸಾಹ ಸಿಗುವಂತೆ ತರಗತಿಗಳನ್ನು ನಡೆಸಬೇಕು. ಗಡಿ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಹೆಚ್ಚು ಕನ್ನಡದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು’ ಎಂಬುದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಕೆ.ಅಮರನಾರಾಯಣ ಅವರ ಒತ್ತಾಸೆ.</p>.<p>‘ರಾಜ್ಯದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು. ಹಾಗಾಗಿ, ಎಲ್ಲೆಡೆ ಕನ್ನಡದಲ್ಲೇ ಫಲಕಗಳನ್ನು ಹಾಕಬೇಕು. ಇತ್ತೀಚಿನ ದಿನಗಳಲ್ಲಿ ಕನ್ನಡ ಅನುಷ್ಠಾನಕ್ಕೆ ಆಗುತ್ತಿದೆ. ಇನ್ನೂ ಹೆಚ್ಚು ಪರಿಣಾಮಕಾರಿ ಆಗಬೇಕಿದ್ದು, ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂಬುದೇ ನನ್ನ ಮೂಲ ಆಗ್ರಹ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಜಿಲ್ಲೆಯಲ್ಲಿ ಕನ್ನಡ ಭವನ ಇಲ್ಲ. ಹಾಗಾಗಿ ನಿಧಾನಗತಿ ನಡೆಯುತ್ತಿರುವ ಕಟ್ಟಡ ನಿರ್ಮಾಣ ಕೆಲಸವನ್ನು ಚುರುಕುಗೊಳಿಸಬೇಕು. ರೋಟರಿ ಸಂಸ್ಥೆ ಸಹಯೋಗದಲ್ಲಿ ‘ಕೋಟಿ ನಾಟಿ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕೊರೊನಾ ಕಾರಣದಿಂದ ಸದ್ಯಕ್ಕೆ ಚಟುವಟಿಕೆಗಳು ನಿಂತಿವೆ. ಮುಂದಿನ ದಿನಗಳಲ್ಲಿ ಮುಂದುವರಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.</p>.<p>‘ತವರು ಜಿಲ್ಲೆಯಲ್ಲಿ ಅಧ್ಯಕ್ಷನಾಗಿ ಆಯ್ಕೆಯಾಗಿರುವುದಕ್ಕೆ ಸಂತಸವಾಗಿದೆ. ನನ್ನ ಕನ್ನಡಪರ ಸೇವೆ ಗುರುತಿಸಿ ಆಯ್ಕೆ ಮಾಡಿದವರನ್ನು ಅಭಿನಂದಿಸುತ್ತೇನೆ. ನಾನು ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆಯ ಸುಗಟೂರಿನಲ್ಲಿ ಹುಟ್ಟಿದವನು. ಹಾಗಾಗಿ ಬಾಲ್ಯದಿಂದಲ್ಲೂ ಜಿಲ್ಲೆಯೊಂದಿಗೆ ನಿಕಟ ಸಂಬಂಧ ಇಟ್ಟುಕೊಂಡಿದ್ದೇನೆ’ ಎಂದು ಹೇಳಿದರು.</p>.<p>‘ನಾನು ಮೂಲತಃ ಸಾಹಿತ್ಯಾಸಕ್ತ. ಹಾಗಾಗಿ ಕಥೆ, ಕವನ, ನಾಟಕ, ಕಾದಂಬರಿ ಆಧರಿತ ಅನೇಕ ಚಲನಚಿತ್ರಗಳನ್ನು ನೋಡುತ್ತೇನೆ. ಸಾಹಿತ್ಯವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನನ್ನ ಅಧಿಕಾರಾವಧಿಯಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೆ ’ ಎಂದು ತಿಳಿಸಿದರು.</p>.<p>‘ಪ್ರವೃತ್ತಿಯಲ್ಲಿ ಯಾರು ಸಾಹಿತ್ಯ ಸೇವೆ ಮಾಡುತ್ತಾರೋ ಅವರು ಪರಿಷತ್ಗೆ ಆಯ್ಕೆಯಾಗಬಹುದು. ಚುನಾವಣೆ ಮುಕ್ತವಾಗಿರುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಯ್ಕೆ ವಿಧಾನಗಳಿರುವುದರಿಂದ ಯಾರನ್ನು ಆಯ್ಕೆ ಮಾಡಬೇಕು ಎಂಬುದನ್ನು ಮತದಾರರು ನಿರ್ಧರಿಸುತ್ತಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ‘ಗಡಿ ಭಾಗದ ಗ್ರಾಮಗಳಲ್ಲಿ ಕನ್ನಡ ಶಾಲೆಗಳನ್ನು ಮುಚ್ಚಬಾರದು. ಅಲ್ಲಿ ಕನ್ನಡಕ್ಕೆ ಪ್ರೋತ್ಸಾಹ ಸಿಗುವಂತೆ ತರಗತಿಗಳನ್ನು ನಡೆಸಬೇಕು. ಗಡಿ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಹೆಚ್ಚು ಕನ್ನಡದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು’ ಎಂಬುದು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಕೆ.ಅಮರನಾರಾಯಣ ಅವರ ಒತ್ತಾಸೆ.</p>.<p>‘ರಾಜ್ಯದಲ್ಲಿ ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು. ಹಾಗಾಗಿ, ಎಲ್ಲೆಡೆ ಕನ್ನಡದಲ್ಲೇ ಫಲಕಗಳನ್ನು ಹಾಕಬೇಕು. ಇತ್ತೀಚಿನ ದಿನಗಳಲ್ಲಿ ಕನ್ನಡ ಅನುಷ್ಠಾನಕ್ಕೆ ಆಗುತ್ತಿದೆ. ಇನ್ನೂ ಹೆಚ್ಚು ಪರಿಣಾಮಕಾರಿ ಆಗಬೇಕಿದ್ದು, ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಬೇಕು ಎಂಬುದೇ ನನ್ನ ಮೂಲ ಆಗ್ರಹ’ ಎಂದು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಜಿಲ್ಲೆಯಲ್ಲಿ ಕನ್ನಡ ಭವನ ಇಲ್ಲ. ಹಾಗಾಗಿ ನಿಧಾನಗತಿ ನಡೆಯುತ್ತಿರುವ ಕಟ್ಟಡ ನಿರ್ಮಾಣ ಕೆಲಸವನ್ನು ಚುರುಕುಗೊಳಿಸಬೇಕು. ರೋಟರಿ ಸಂಸ್ಥೆ ಸಹಯೋಗದಲ್ಲಿ ‘ಕೋಟಿ ನಾಟಿ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕೊರೊನಾ ಕಾರಣದಿಂದ ಸದ್ಯಕ್ಕೆ ಚಟುವಟಿಕೆಗಳು ನಿಂತಿವೆ. ಮುಂದಿನ ದಿನಗಳಲ್ಲಿ ಮುಂದುವರಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.</p>.<p>‘ತವರು ಜಿಲ್ಲೆಯಲ್ಲಿ ಅಧ್ಯಕ್ಷನಾಗಿ ಆಯ್ಕೆಯಾಗಿರುವುದಕ್ಕೆ ಸಂತಸವಾಗಿದೆ. ನನ್ನ ಕನ್ನಡಪರ ಸೇವೆ ಗುರುತಿಸಿ ಆಯ್ಕೆ ಮಾಡಿದವರನ್ನು ಅಭಿನಂದಿಸುತ್ತೇನೆ. ನಾನು ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆಯ ಸುಗಟೂರಿನಲ್ಲಿ ಹುಟ್ಟಿದವನು. ಹಾಗಾಗಿ ಬಾಲ್ಯದಿಂದಲ್ಲೂ ಜಿಲ್ಲೆಯೊಂದಿಗೆ ನಿಕಟ ಸಂಬಂಧ ಇಟ್ಟುಕೊಂಡಿದ್ದೇನೆ’ ಎಂದು ಹೇಳಿದರು.</p>.<p>‘ನಾನು ಮೂಲತಃ ಸಾಹಿತ್ಯಾಸಕ್ತ. ಹಾಗಾಗಿ ಕಥೆ, ಕವನ, ನಾಟಕ, ಕಾದಂಬರಿ ಆಧರಿತ ಅನೇಕ ಚಲನಚಿತ್ರಗಳನ್ನು ನೋಡುತ್ತೇನೆ. ಸಾಹಿತ್ಯವನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನನ್ನ ಅಧಿಕಾರಾವಧಿಯಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೆ ’ ಎಂದು ತಿಳಿಸಿದರು.</p>.<p>‘ಪ್ರವೃತ್ತಿಯಲ್ಲಿ ಯಾರು ಸಾಹಿತ್ಯ ಸೇವೆ ಮಾಡುತ್ತಾರೋ ಅವರು ಪರಿಷತ್ಗೆ ಆಯ್ಕೆಯಾಗಬಹುದು. ಚುನಾವಣೆ ಮುಕ್ತವಾಗಿರುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಯ್ಕೆ ವಿಧಾನಗಳಿರುವುದರಿಂದ ಯಾರನ್ನು ಆಯ್ಕೆ ಮಾಡಬೇಕು ಎಂಬುದನ್ನು ಮತದಾರರು ನಿರ್ಧರಿಸುತ್ತಾರೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>