<p><strong>ಚಿಕ್ಕಬಳ್ಳಾಪುರ:</strong> ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಹೋಬಳಿಯ ಎಸ್.ದೇವಗಾನಹಳ್ಳಿ ರಾಮಸಮುದ್ರ ಕೆರೆಯ ನೀರನ್ನು ಶಿಡ್ಲಘಟ್ಟ ನಗರಕ್ಕೆ ಪೂರೈಸಲು ಜಿಲ್ಲಾಡಳಿತ ಮುಂದಾಗಿದೆ. ತಕ್ಷಣವೇ ಈ ಯೋಜನೆ ಕೈಬಿಡಬೇಕು ಎಂದು ಆಗ್ರಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಅವರಿಗೆ ದೇವಗಾನಹಳ್ಳಿ ಗ್ರಾಮಸ್ಥರು ಬುಧವಾರ ಮನವಿ ಸಲ್ಲಿಸಿದರು.</p>.<p>ರಾಮಸಮುದ್ರ ಕೆರೆಯು 1889ರಲ್ಲಿ ಸ್ಥಾಪನೆಯಾಗಿದೆ. 1894ರಲ್ಲಿ ಉದ್ಘಾಟನೆಯಾಗಿದೆ. ಕೃಷಿ ಬಳಕೆಗೆ ಎಂದೇ ಈ ಕೆರೆ ನಿರ್ಮಿಸಲಾಗಿದೆ. ಇದು ಈ ಭಾಗಕ್ಕೆ ಆಸರೆಯಾಗಿದೆ. ರಾಮಸಮುದ್ರದ ಕೆರೆ ಅಭಿವೃದ್ಧಿಗೊಳಿಸಲಾಗಿದೆ. ಮೂರು ಬಾರಿ ಕೋಡಿಯೂ ಹರಿದಿದೆ.</p>.<p>ಆದರೆ ಈಗ ಜಿಲ್ಲಾಡಳಿತ ಶಿಡ್ಲಘಟ್ಟ ನಗರಕ್ಕೆ ಇಲ್ಲಿಂದ ಕುಡಿಯುವ ನೀರು ಪೂರೈಸಲು ಯೋಜನೆ ರೂಪಿಸುತ್ತಿದೆ. ಇದನ್ನು ತಕ್ಷಣವೇ ಕೈ ಬಿಡಬೇಕು.</p>.<p>ಯಾವುದೇ ರೀತಿಯ ನಾಲೆಗಳು ಈ ಭಾಗದಲ್ಲಿ ಇಲ್ಲ. ಈ ಕೆರೆಯೇ ಜಲಮೂಲಕ್ಕೆ ಆಧಾರ. ಇಲ್ಲಿನ ರೈತರಲ್ಲಿ ಶೇ 70ರಷ್ಟು ಬಡವರು, ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದವರು ಇದ್ದಾರೆ. ಈ ಕೆರೆ ನಂಬಿ ಜೀವನ ಸಾಗಿಸುತ್ತಿದ್ದಾರೆ. ತಾವು ಈ ಬಗ್ಗೆ ಸಮಗ್ರವಾಗಿ ಪರಿಶೀಲಿಸಬೇಕು. ಕುಡಿಯುವ ನೀರು ಪೂರೈಕೆ ಯೋಜನೆ ಕೈ ಬಿಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.</p>.<p>ಕೃಷಿ ಮತ್ತು ನೀರಾವರಿ ಕಾಯ್ದೆ ಅನ್ವಯ ಸದರಿ ಕೆರೆ ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳಿಗೆ ಜೂನ್–ಜುಲೈನಲ್ಲಿ ನೀರು ಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಕೆರೆ ನೀರು ಬಳಕೆದಾರರ ಸಂಘದ ಪದಾಧಿಕಾರಿಗಳು, ರಾಮಸಮುದ್ರ ಕೆರೆ ವ್ಯಾಪ್ತಿಯ ಗ್ರಾಮಗಳ ರೈತರು ಕೋರಿದ್ದಾರೆ.</p>.<p>ಜಿಲ್ಲಾ ಜಾಗೃತ ಮತ್ತು ಮೇಲುಸ್ತುವಾರಿ ಸಮಿತಿ ಮಾಜಿ ಸದಸ್ಯ ಡಿ.ವಿ ಪ್ರಸಾದ್, ಸೀತಾರಾಮಪ್ಪ, ಎಂ.ನರಸಿಂಹರೆಡ್ಡಿ, ಮುನಿರಾಜು ವೈ.ವಿ., ಗ್ರಾ.ಪಂ ಮಾಜಿ ಸದಸ್ಯ ವಿ.ವೆಂಕಟೇಶಪ್ಪ, ಹನುಮಪ್ಪ ಬಿ., ನಾಗೇಶ್, ಚಂದ್ರಶೇಖರ್, ಪ್ರದೀಪ್ ಕುಮಾರ್ ಮತ್ತಿತರರು ನಿಯೋಗದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಹೋಬಳಿಯ ಎಸ್.ದೇವಗಾನಹಳ್ಳಿ ರಾಮಸಮುದ್ರ ಕೆರೆಯ ನೀರನ್ನು ಶಿಡ್ಲಘಟ್ಟ ನಗರಕ್ಕೆ ಪೂರೈಸಲು ಜಿಲ್ಲಾಡಳಿತ ಮುಂದಾಗಿದೆ. ತಕ್ಷಣವೇ ಈ ಯೋಜನೆ ಕೈಬಿಡಬೇಕು ಎಂದು ಆಗ್ರಹಿಸಿ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಅವರಿಗೆ ದೇವಗಾನಹಳ್ಳಿ ಗ್ರಾಮಸ್ಥರು ಬುಧವಾರ ಮನವಿ ಸಲ್ಲಿಸಿದರು.</p>.<p>ರಾಮಸಮುದ್ರ ಕೆರೆಯು 1889ರಲ್ಲಿ ಸ್ಥಾಪನೆಯಾಗಿದೆ. 1894ರಲ್ಲಿ ಉದ್ಘಾಟನೆಯಾಗಿದೆ. ಕೃಷಿ ಬಳಕೆಗೆ ಎಂದೇ ಈ ಕೆರೆ ನಿರ್ಮಿಸಲಾಗಿದೆ. ಇದು ಈ ಭಾಗಕ್ಕೆ ಆಸರೆಯಾಗಿದೆ. ರಾಮಸಮುದ್ರದ ಕೆರೆ ಅಭಿವೃದ್ಧಿಗೊಳಿಸಲಾಗಿದೆ. ಮೂರು ಬಾರಿ ಕೋಡಿಯೂ ಹರಿದಿದೆ.</p>.<p>ಆದರೆ ಈಗ ಜಿಲ್ಲಾಡಳಿತ ಶಿಡ್ಲಘಟ್ಟ ನಗರಕ್ಕೆ ಇಲ್ಲಿಂದ ಕುಡಿಯುವ ನೀರು ಪೂರೈಸಲು ಯೋಜನೆ ರೂಪಿಸುತ್ತಿದೆ. ಇದನ್ನು ತಕ್ಷಣವೇ ಕೈ ಬಿಡಬೇಕು.</p>.<p>ಯಾವುದೇ ರೀತಿಯ ನಾಲೆಗಳು ಈ ಭಾಗದಲ್ಲಿ ಇಲ್ಲ. ಈ ಕೆರೆಯೇ ಜಲಮೂಲಕ್ಕೆ ಆಧಾರ. ಇಲ್ಲಿನ ರೈತರಲ್ಲಿ ಶೇ 70ರಷ್ಟು ಬಡವರು, ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದವರು ಇದ್ದಾರೆ. ಈ ಕೆರೆ ನಂಬಿ ಜೀವನ ಸಾಗಿಸುತ್ತಿದ್ದಾರೆ. ತಾವು ಈ ಬಗ್ಗೆ ಸಮಗ್ರವಾಗಿ ಪರಿಶೀಲಿಸಬೇಕು. ಕುಡಿಯುವ ನೀರು ಪೂರೈಕೆ ಯೋಜನೆ ಕೈ ಬಿಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.</p>.<p>ಕೃಷಿ ಮತ್ತು ನೀರಾವರಿ ಕಾಯ್ದೆ ಅನ್ವಯ ಸದರಿ ಕೆರೆ ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳಿಗೆ ಜೂನ್–ಜುಲೈನಲ್ಲಿ ನೀರು ಹರಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಕೆರೆ ನೀರು ಬಳಕೆದಾರರ ಸಂಘದ ಪದಾಧಿಕಾರಿಗಳು, ರಾಮಸಮುದ್ರ ಕೆರೆ ವ್ಯಾಪ್ತಿಯ ಗ್ರಾಮಗಳ ರೈತರು ಕೋರಿದ್ದಾರೆ.</p>.<p>ಜಿಲ್ಲಾ ಜಾಗೃತ ಮತ್ತು ಮೇಲುಸ್ತುವಾರಿ ಸಮಿತಿ ಮಾಜಿ ಸದಸ್ಯ ಡಿ.ವಿ ಪ್ರಸಾದ್, ಸೀತಾರಾಮಪ್ಪ, ಎಂ.ನರಸಿಂಹರೆಡ್ಡಿ, ಮುನಿರಾಜು ವೈ.ವಿ., ಗ್ರಾ.ಪಂ ಮಾಜಿ ಸದಸ್ಯ ವಿ.ವೆಂಕಟೇಶಪ್ಪ, ಹನುಮಪ್ಪ ಬಿ., ನಾಗೇಶ್, ಚಂದ್ರಶೇಖರ್, ಪ್ರದೀಪ್ ಕುಮಾರ್ ಮತ್ತಿತರರು ನಿಯೋಗದಲ್ಲಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>