<p><strong>ಚೇಳೂರು:</strong> ಇಲ್ಲಿನ ಪಶು ಚಿಕಿತ್ಸಾಲಯ ಕೇಂದ್ರ ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದು, ವೈದ್ಯಾಧಿಕಾರಿಯೂ ಇಲ್ಲದೇ ರೈತರು ಜಾನುವಾರುಗಳ ಚಿಕಿತ್ಸೆಗೆ ಪರದಾಡುವಂತಾಗಿದೆ.</p>.<p>ತಾಲ್ಲೂಕಿನ ನಲ್ಲಗುಟ್ಲಪಲ್ಲಿ, ಪಾಳ್ಯಕೆರೆ, ಚೇಳೂರು ಗ್ರಾಮ ಪಂಚಾಯಿತಿಗಳಲ್ಲಿ 56ಕ್ಕೂ ಹೆಚ್ಚು ಗ್ರಾಮಗಳಿವೆ. ಈ ಪಶು ಚಿಕಿತ್ಸಾಲಯ ಕೇಂದ್ರದಲ್ಲಿ ಔಷಧಗಳ ಸಮಸ್ಯೆ, ವೈದ್ಯರ ಕೊರತೆ, ಸಾಮಗ್ರಿಗಳ ಕೊರತೆ ಸೇರಿದಂತೆ ನಾನಾ ಸೌಲಭ್ಯಗಳಿಂದ ವಂಚಿತವಾಗಿದೆ.</p>.<p>ಜಾನುವಾರುಗಳು ಕಾಯಿಲೆಯಿಂದ ಬಳಲಿದರೆ, ರೈತರು ಕಾಂಪೌಂಡರ್ನನ್ನೇ ನೆಚ್ಚಿಕೊಂಡು ಚಿಕಿತ್ಸೆಗೆ ಕರೆತರಬೇಕಾಗಿದೆ. ಕಾಂಪೌಂಡರೂ ಇಲ್ಲದಿದ್ದರೆ ಬರಿಗೈಲಿ ಮರಳಬೇಕಾಗಿದೆ. ಪಟ್ಟಣ ಹೋಗಿ ನೂರಾರು ಖರ್ಚು ಮಾಡಿ ಜಾನುವಾರುಗಳಿಗೆ ಚಿಕಿತ್ಸೆ ಮಾಡಿಸಬೇಕಾಗುತ್ತದೆ ಎಂದು ರೈತರು ಆರೋಪಿಸಿದ್ದಾರೆ.</p>.<p>‘ಎಂಟು ವರ್ಷಗಳಾದರೂ ಪಶು ಆಸ್ಪತ್ರೆ ವೈದ್ಯಾಧಿಕಾರಿಗಳಿಲ್ಲದೇ ಜಾನುವಾರುಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಪಶು ಆಸ್ಪತ್ರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಸೇರಿದ್ದು ಅನೇಕ ಸಲ ಮನವಿ ನೀಡಿದ್ದರೂ ಪ್ರಯೋಜನವಿಲ್ಲದಂತಾಗಿದೆ. ಪ್ರಭಾರಿ ವೈದ್ಯಾಧಿಕಾರಿಗಳನ್ನು ಹಾಕಿದರೂ ಅವರು ವಾರಕ್ಕೊಮ್ಮೆಯೂ ಬರುವುದಿಲ್ಲ’ ಎಂದು ಗ್ರಾಮಸ್ಥರು ದೂರಿದರು.</p>.<p>‘ರೋಗ ಬಂದು ಅನೇಕ ಕುರಿ-ಮೇಕೆಗಳು ಮರಣಹೊಂದಿದರೂ, ಯಾವೊಬ್ಬ ಪಶು ವೈದ್ಯಾಧಿಕಾರಿಯೂ ಬಂದು ನೋಡಲಿಲ್ಲ. ಇಲ್ಲಿ ಮೂಕ ಜೀವಿಗಳ ಆಕ್ರಂದನ ನೋಡುವವರಿಲ್ಲ’ ಎನ್ನುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೇಳೂರು:</strong> ಇಲ್ಲಿನ ಪಶು ಚಿಕಿತ್ಸಾಲಯ ಕೇಂದ್ರ ಮೂಲ ಸೌಲಭ್ಯಗಳಿಂದ ವಂಚಿತವಾಗಿದ್ದು, ವೈದ್ಯಾಧಿಕಾರಿಯೂ ಇಲ್ಲದೇ ರೈತರು ಜಾನುವಾರುಗಳ ಚಿಕಿತ್ಸೆಗೆ ಪರದಾಡುವಂತಾಗಿದೆ.</p>.<p>ತಾಲ್ಲೂಕಿನ ನಲ್ಲಗುಟ್ಲಪಲ್ಲಿ, ಪಾಳ್ಯಕೆರೆ, ಚೇಳೂರು ಗ್ರಾಮ ಪಂಚಾಯಿತಿಗಳಲ್ಲಿ 56ಕ್ಕೂ ಹೆಚ್ಚು ಗ್ರಾಮಗಳಿವೆ. ಈ ಪಶು ಚಿಕಿತ್ಸಾಲಯ ಕೇಂದ್ರದಲ್ಲಿ ಔಷಧಗಳ ಸಮಸ್ಯೆ, ವೈದ್ಯರ ಕೊರತೆ, ಸಾಮಗ್ರಿಗಳ ಕೊರತೆ ಸೇರಿದಂತೆ ನಾನಾ ಸೌಲಭ್ಯಗಳಿಂದ ವಂಚಿತವಾಗಿದೆ.</p>.<p>ಜಾನುವಾರುಗಳು ಕಾಯಿಲೆಯಿಂದ ಬಳಲಿದರೆ, ರೈತರು ಕಾಂಪೌಂಡರ್ನನ್ನೇ ನೆಚ್ಚಿಕೊಂಡು ಚಿಕಿತ್ಸೆಗೆ ಕರೆತರಬೇಕಾಗಿದೆ. ಕಾಂಪೌಂಡರೂ ಇಲ್ಲದಿದ್ದರೆ ಬರಿಗೈಲಿ ಮರಳಬೇಕಾಗಿದೆ. ಪಟ್ಟಣ ಹೋಗಿ ನೂರಾರು ಖರ್ಚು ಮಾಡಿ ಜಾನುವಾರುಗಳಿಗೆ ಚಿಕಿತ್ಸೆ ಮಾಡಿಸಬೇಕಾಗುತ್ತದೆ ಎಂದು ರೈತರು ಆರೋಪಿಸಿದ್ದಾರೆ.</p>.<p>‘ಎಂಟು ವರ್ಷಗಳಾದರೂ ಪಶು ಆಸ್ಪತ್ರೆ ವೈದ್ಯಾಧಿಕಾರಿಗಳಿಲ್ಲದೇ ಜಾನುವಾರುಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಪಶು ಆಸ್ಪತ್ರೆ ಜಿಲ್ಲಾ ಪಂಚಾಯಿತಿ ವ್ಯಾಪ್ತಿಗೆ ಸೇರಿದ್ದು ಅನೇಕ ಸಲ ಮನವಿ ನೀಡಿದ್ದರೂ ಪ್ರಯೋಜನವಿಲ್ಲದಂತಾಗಿದೆ. ಪ್ರಭಾರಿ ವೈದ್ಯಾಧಿಕಾರಿಗಳನ್ನು ಹಾಕಿದರೂ ಅವರು ವಾರಕ್ಕೊಮ್ಮೆಯೂ ಬರುವುದಿಲ್ಲ’ ಎಂದು ಗ್ರಾಮಸ್ಥರು ದೂರಿದರು.</p>.<p>‘ರೋಗ ಬಂದು ಅನೇಕ ಕುರಿ-ಮೇಕೆಗಳು ಮರಣಹೊಂದಿದರೂ, ಯಾವೊಬ್ಬ ಪಶು ವೈದ್ಯಾಧಿಕಾರಿಯೂ ಬಂದು ನೋಡಲಿಲ್ಲ. ಇಲ್ಲಿ ಮೂಕ ಜೀವಿಗಳ ಆಕ್ರಂದನ ನೋಡುವವರಿಲ್ಲ’ ಎನ್ನುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>