<p><strong>ಗೌರಿಬಿದನೂರು:</strong> ‘ಸಮಾಜದಲ್ಲಿ ಧಾರ್ಮಿಕ ಹಾಗೂ ಶೈಕ್ಷಣಿಕ ಕಾರ್ಯಗಳಿಗೆ ಸಹಕಾರ ನೀಡುವ ಮೂಲಕ ಜನರಲ್ಲಿ ಸಾಮರಸ್ಯ ಬೆಸೆಯುವ ಜತೆಗೆ ಭಕ್ತಿ ಭಾವನೆ ಬೆಳೆಸಿ ಮಾನಸಿಕ ನೆಮ್ಮದಿ ಮೂಡಿಸಬೇಕಿದೆ’ ಎಂದು ಮುಖಂಡ ಜಕ್ಕೇನಹಳ್ಳಿ ಆರ್. ವೆಂಕಟಾಚಲ ಹೇಳಿದರು.</p>.<p>ತಾಲ್ಲೂಕಿನ ಇಡಗೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶನಿ ದೇವರ ದೇವಾಲಯದ ಅಭಿವೃದ್ಧಿ ಕಾರ್ಯಕ್ಕೆ ₹ 50 ಸಾವಿರ ದೇಣಿಗೆ ನೀಡಿ ಅವರು ಮಾತನಾಡಿದರು.</p>.<p>ಕೊರೊನಾದಿಂದಾಗಿ ದೇಶದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಧಾರ್ಮಿಕ ಕೇಂದ್ರಗಳು ಕೂಡ ಆದಾಯವಿಲ್ಲದೆ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿವೆ. ಗ್ರಾಮೀಣ ಭಾಗದ ದೇವಾಲಯಗಳ ನಿರ್ಮಾಣದಿಂದ ಹಿಂದೂ ಸಂಪ್ರದಾಯ, ಸಾಂಸ್ಕೃತಿಕ, ಪರಂಪರೆಯನ್ನು ಉಳಿಸಿ ಬೆಳೆಸಲು ಸಾಧ್ಯ ಎಂದರು.</p>.<p>ಗ್ರಾಮಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಮೂಲಕ ಜನರಲ್ಲಿ ಸಾಮರಸ್ಯ ಮೂಡಿಸಬೇಕಾದರೆ ಪುರಾತನ ದೇವಾಲಯಗಳನ್ನು ಸಂರಕ್ಷಣೆ ಮಾಡುವುದು ಅಗತ್ಯವಾಗಿದೆ. ದೇವಾಲಯಗಳು ಧಾರ್ಮಿಕ ಹಾಗೂ ಆಧ್ಯಾತ್ಮಿಕ ಚಟುವಟಿಕೆಗಳ ತಾಣವಾಗಿದ್ದು, ಅವುಗಳನ್ನು ಉತ್ತಮ ಸ್ಥಿತಿಯಲ್ಲಿ ಇರಿಸಿಕೊಳ್ಳುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ಜಿ. ಸೋಮಯ್ಯ ಮಾತನಾಡಿ, ಸ್ಥಳೀಯ ದಾನಿಗಳ ನೆರವಿನಿಂದ ದೇವಾಲಯದ ಅಭಿವೃದ್ಧಿ ಕೆಲಸಗಳನ್ನು ನಡೆಸಲಾಗುವುದು. ಇದರಿಂದ ಗ್ರಾಮದ ಜನರಲ್ಲಿ ಸೋದರತ್ವ ಭಾವನೆ ಮೂಡಿಸಿ ಎಲ್ಲರಲ್ಲೂ ಒಮ್ಮತದ ವಾತಾವರಣ ನಿರ್ಮಾಣ ಮಾಡಲು ಸಹಕಾರಿಯಾಗುತ್ತದೆ ಎಂದರು.</p>.<p>ಗ್ರಾಮ ಪಂಚಾಯತಿ ಸದಸ್ಯರಾದ ನಾಗರಾಜ್ ಬಡಗಿ, ಸುಬ್ಬಣ್ಣ, ಶಂಕರ್, ಮುಖಂಡರಾದ ಈಶ್ವರಪ್ಪ, ಕೆಇಬಿ ಮಂಜು, ಬಸವರಾಜು, ಅಶ್ವತ್ಥ ರೆಡ್ಡಿ, ಶಿವಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ‘ಸಮಾಜದಲ್ಲಿ ಧಾರ್ಮಿಕ ಹಾಗೂ ಶೈಕ್ಷಣಿಕ ಕಾರ್ಯಗಳಿಗೆ ಸಹಕಾರ ನೀಡುವ ಮೂಲಕ ಜನರಲ್ಲಿ ಸಾಮರಸ್ಯ ಬೆಸೆಯುವ ಜತೆಗೆ ಭಕ್ತಿ ಭಾವನೆ ಬೆಳೆಸಿ ಮಾನಸಿಕ ನೆಮ್ಮದಿ ಮೂಡಿಸಬೇಕಿದೆ’ ಎಂದು ಮುಖಂಡ ಜಕ್ಕೇನಹಳ್ಳಿ ಆರ್. ವೆಂಕಟಾಚಲ ಹೇಳಿದರು.</p>.<p>ತಾಲ್ಲೂಕಿನ ಇಡಗೂರು ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಶನಿ ದೇವರ ದೇವಾಲಯದ ಅಭಿವೃದ್ಧಿ ಕಾರ್ಯಕ್ಕೆ ₹ 50 ಸಾವಿರ ದೇಣಿಗೆ ನೀಡಿ ಅವರು ಮಾತನಾಡಿದರು.</p>.<p>ಕೊರೊನಾದಿಂದಾಗಿ ದೇಶದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಧಾರ್ಮಿಕ ಕೇಂದ್ರಗಳು ಕೂಡ ಆದಾಯವಿಲ್ಲದೆ ಅಭಿವೃದ್ಧಿ ಕಾರ್ಯಗಳು ನಿಂತು ಹೋಗಿವೆ. ಗ್ರಾಮೀಣ ಭಾಗದ ದೇವಾಲಯಗಳ ನಿರ್ಮಾಣದಿಂದ ಹಿಂದೂ ಸಂಪ್ರದಾಯ, ಸಾಂಸ್ಕೃತಿಕ, ಪರಂಪರೆಯನ್ನು ಉಳಿಸಿ ಬೆಳೆಸಲು ಸಾಧ್ಯ ಎಂದರು.</p>.<p>ಗ್ರಾಮಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಮೂಲಕ ಜನರಲ್ಲಿ ಸಾಮರಸ್ಯ ಮೂಡಿಸಬೇಕಾದರೆ ಪುರಾತನ ದೇವಾಲಯಗಳನ್ನು ಸಂರಕ್ಷಣೆ ಮಾಡುವುದು ಅಗತ್ಯವಾಗಿದೆ. ದೇವಾಲಯಗಳು ಧಾರ್ಮಿಕ ಹಾಗೂ ಆಧ್ಯಾತ್ಮಿಕ ಚಟುವಟಿಕೆಗಳ ತಾಣವಾಗಿದ್ದು, ಅವುಗಳನ್ನು ಉತ್ತಮ ಸ್ಥಿತಿಯಲ್ಲಿ ಇರಿಸಿಕೊಳ್ಳುವುದು ಸಮಾಜದ ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.</p>.<p>ಗ್ರಾಮ ಪಂಚಾಯಿತಿ ಸದಸ್ಯ ಜಿ. ಸೋಮಯ್ಯ ಮಾತನಾಡಿ, ಸ್ಥಳೀಯ ದಾನಿಗಳ ನೆರವಿನಿಂದ ದೇವಾಲಯದ ಅಭಿವೃದ್ಧಿ ಕೆಲಸಗಳನ್ನು ನಡೆಸಲಾಗುವುದು. ಇದರಿಂದ ಗ್ರಾಮದ ಜನರಲ್ಲಿ ಸೋದರತ್ವ ಭಾವನೆ ಮೂಡಿಸಿ ಎಲ್ಲರಲ್ಲೂ ಒಮ್ಮತದ ವಾತಾವರಣ ನಿರ್ಮಾಣ ಮಾಡಲು ಸಹಕಾರಿಯಾಗುತ್ತದೆ ಎಂದರು.</p>.<p>ಗ್ರಾಮ ಪಂಚಾಯತಿ ಸದಸ್ಯರಾದ ನಾಗರಾಜ್ ಬಡಗಿ, ಸುಬ್ಬಣ್ಣ, ಶಂಕರ್, ಮುಖಂಡರಾದ ಈಶ್ವರಪ್ಪ, ಕೆಇಬಿ ಮಂಜು, ಬಸವರಾಜು, ಅಶ್ವತ್ಥ ರೆಡ್ಡಿ, ಶಿವಶಂಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>