<p><strong>ಚಿಕ್ಕಬಳ್ಳಾಪುರ</strong>: ಡಾ.ಕೆ.ಸುಧಾಕರ್ ಶಾಸಕ ಮತ್ತು ಸಚಿವರಾಗಿದ್ದ ವೇಳೆ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ರಾಜಕೀಯ ಅವಕಾಶಗಳನ್ನು ದೊರಕಿಸಿಕೊಟ್ಟಿದ್ದಾರೆ ಎಂದು ಚಿಕ್ಕಬಳ್ಳಾಪುರ ಟಿಎಪಿಸಿಎಂಎಸ್ ಅಧ್ಯಕ್ಷ ಆವುಲಕೊಂಡರಾಯಪ್ಪ ತಿಳಿದರು. </p>.<p>ನಗರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂಬೇಡ್ಕರ್ ಭವನ, ಬಾಬೂ ಜಗಜೀವನ ರಾಂ ಭವನ ಮತ್ತು ವಾಲ್ಮೀಕಿ ಭವನಕ್ಕೆ ಜಾಗ ನೀಡಿ, ಅನುದಾನ ದೊರಕಿಸಿಕೊಟ್ಟಿದ್ದಾರೆ. ಆದರೆ ಈಗಿನ ಶಾಸಕರಿಗೆ ಸುಧಾಕರ್ ದೊರಕಿಸಿಕೊಟ್ಟ ಅನುದಾನದಲ್ಲಿ ಭವನ ನಿರ್ಮಿಸಲು ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದರು.</p>.<p>ಸುಧಾಕರ್ ಅವರ ಜೊತೆ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಇದ್ದಾರೆ. ಕ್ಷೇತ್ರದಲ್ಲಿ ಜಾತಿ ರಾಜಕೀಯ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಈ ಹಿಂದೆ ಈ ರೀತಿ ಸನ್ನಿವೇಶ ಇರಲಿಲ್ಲ. ಶಾಸಕರ ವರ್ತನೆ ಇದೇ ರೀತಿಯಲ್ಲಿ ಮುಂದುವರಿದರೆ ಹೋರಾಟ ನಡೆಸಬೇಕಾಗುತ್ತದೆ ಎಂದರು.</p>.<p>ನಗರಸಭೆ ಉಪಾಧ್ಯಕ್ಷ ಜೆ.ನಾಗರಾಜ್, ಸುಧಾಕರ್ ಸೋಲು ಕಂಡ ಕೆಲವೇ ತಿಂಗಳಲ್ಲಿ ಸಂಸದರಾಗಿ ಆಯ್ಕೆಯಾದರು. ಅವರ ಜನಪ್ರಿಯತೆಯನ್ನು ದಬ್ಬಾಳಿಕೆ ಮೂಲಕ ಮಣಿಸಬಹುದು ಎಂದುಕೊಂಡಿದ್ದರೆ ಅದು ಸಾಧ್ಯವಿಲ್ಲ ಎಂದರು.</p>.<p>‘ಮೃತ ಚಾಲಕ ಬಾಬು ಅವರ ಬಗ್ಗೆ ಮತ್ತು ಆ ಕುಟುಂಬದ ಬಗ್ಗೆ ಸಹಾನುಭೂತಿ ಇದೆ. ಅವರ ಕುಟುಂಬದೊಂದಿಗೆ ನಾವು ಇದ್ದೇವೆ. ಆದರೆ ಸಾವಿನ ಪ್ರಕರಣದಲ್ಲಿ ರಾಜಕೀಯ ಮಾಡಿ ತಮ್ಮ ಬೆಳೆ ಬೇಯಿಸಿಕೊಳ್ಳುವವರು ಉತ್ತಮ ನಾಗರಿಕರಾಗಲು ಸಾಧ್ಯವೇ ಇಲ್ಲ’ ಎಂದರು.</p>.<p>ನಗರಸಭೆ ಸದಸ್ಯ ಸತೀಶ್, ನಗರಸಭೆ ಮಾಜಿ ಅಧ್ಯಕ್ಷ ಮುನಿಕೃಷ್ಣ, ಶಿವಕುಮಾರ್, ಗಂಗರೇಕಾಲುವೆ ನರಸಿಂಹಮೂರ್ತಿ ಸೇರಿದಂತೆ ಬಿಜೆಪಿಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಮುಖಂಡರು ಮಾಧ್ಯಮಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಡಾ.ಕೆ.ಸುಧಾಕರ್ ಶಾಸಕ ಮತ್ತು ಸಚಿವರಾಗಿದ್ದ ವೇಳೆ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ರಾಜಕೀಯ ಅವಕಾಶಗಳನ್ನು ದೊರಕಿಸಿಕೊಟ್ಟಿದ್ದಾರೆ ಎಂದು ಚಿಕ್ಕಬಳ್ಳಾಪುರ ಟಿಎಪಿಸಿಎಂಎಸ್ ಅಧ್ಯಕ್ಷ ಆವುಲಕೊಂಡರಾಯಪ್ಪ ತಿಳಿದರು. </p>.<p>ನಗರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಅಂಬೇಡ್ಕರ್ ಭವನ, ಬಾಬೂ ಜಗಜೀವನ ರಾಂ ಭವನ ಮತ್ತು ವಾಲ್ಮೀಕಿ ಭವನಕ್ಕೆ ಜಾಗ ನೀಡಿ, ಅನುದಾನ ದೊರಕಿಸಿಕೊಟ್ಟಿದ್ದಾರೆ. ಆದರೆ ಈಗಿನ ಶಾಸಕರಿಗೆ ಸುಧಾಕರ್ ದೊರಕಿಸಿಕೊಟ್ಟ ಅನುದಾನದಲ್ಲಿ ಭವನ ನಿರ್ಮಿಸಲು ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದರು.</p>.<p>ಸುಧಾಕರ್ ಅವರ ಜೊತೆ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಇದ್ದಾರೆ. ಕ್ಷೇತ್ರದಲ್ಲಿ ಜಾತಿ ರಾಜಕೀಯ ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿದೆ. ಈ ಹಿಂದೆ ಈ ರೀತಿ ಸನ್ನಿವೇಶ ಇರಲಿಲ್ಲ. ಶಾಸಕರ ವರ್ತನೆ ಇದೇ ರೀತಿಯಲ್ಲಿ ಮುಂದುವರಿದರೆ ಹೋರಾಟ ನಡೆಸಬೇಕಾಗುತ್ತದೆ ಎಂದರು.</p>.<p>ನಗರಸಭೆ ಉಪಾಧ್ಯಕ್ಷ ಜೆ.ನಾಗರಾಜ್, ಸುಧಾಕರ್ ಸೋಲು ಕಂಡ ಕೆಲವೇ ತಿಂಗಳಲ್ಲಿ ಸಂಸದರಾಗಿ ಆಯ್ಕೆಯಾದರು. ಅವರ ಜನಪ್ರಿಯತೆಯನ್ನು ದಬ್ಬಾಳಿಕೆ ಮೂಲಕ ಮಣಿಸಬಹುದು ಎಂದುಕೊಂಡಿದ್ದರೆ ಅದು ಸಾಧ್ಯವಿಲ್ಲ ಎಂದರು.</p>.<p>‘ಮೃತ ಚಾಲಕ ಬಾಬು ಅವರ ಬಗ್ಗೆ ಮತ್ತು ಆ ಕುಟುಂಬದ ಬಗ್ಗೆ ಸಹಾನುಭೂತಿ ಇದೆ. ಅವರ ಕುಟುಂಬದೊಂದಿಗೆ ನಾವು ಇದ್ದೇವೆ. ಆದರೆ ಸಾವಿನ ಪ್ರಕರಣದಲ್ಲಿ ರಾಜಕೀಯ ಮಾಡಿ ತಮ್ಮ ಬೆಳೆ ಬೇಯಿಸಿಕೊಳ್ಳುವವರು ಉತ್ತಮ ನಾಗರಿಕರಾಗಲು ಸಾಧ್ಯವೇ ಇಲ್ಲ’ ಎಂದರು.</p>.<p>ನಗರಸಭೆ ಸದಸ್ಯ ಸತೀಶ್, ನಗರಸಭೆ ಮಾಜಿ ಅಧ್ಯಕ್ಷ ಮುನಿಕೃಷ್ಣ, ಶಿವಕುಮಾರ್, ಗಂಗರೇಕಾಲುವೆ ನರಸಿಂಹಮೂರ್ತಿ ಸೇರಿದಂತೆ ಬಿಜೆಪಿಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಮುಖಂಡರು ಮಾಧ್ಯಮಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>