<p><strong>ಚೇಳೂರು:</strong> ತಾಲ್ಲೂಕಿನ ಚಾಕವೇಲು ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಿಗೆ ಸಂಸದ ಡಾ.ಕೆ.ಸುಧಾಕರ್ ಭಾನುವಾರ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು. ಸಾರ್ವಜನಿಕರು ವಿವಿಧ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಆದಿರೆಡ್ಡಿಪಲ್ಲಿ, ವಡ್ಡಿವಾಂಡ್ಲಪಲ್ಲಿ, ಯುಗವಪ್ಯಾಯಿಲವಾಂಡ್ಲಪಲ್ಲಿ, ದಿಗವಪ್ಯಾಯಿಲವಾಂಡ್ಲಪಲ್ಲಿ, ಕೊತ್ತೂರು, ವೆಂಟಕರೆಡ್ಡಿಪಲ್ಲಿ, ವೆಂಕಟರೆಡ್ಡಿಪಲ್ಲಿ ತಾಂಡಾ, ಮದ್ದಿರೆಡ್ಡಿಪಲ್ಲಿ, ವೆಂಕಟೇಶಪಲ್ಲಿ, ಬುದ್ದಲವಾರಪಲ್ಲಿ, ಪಾಪಿರೆಡ್ಡಿಪಲ್ಲಿ ಮತ್ತಿತರ ಗ್ರಾಮಗಳಿಗೆ ಭೇಟಿ ನೀಡಿದರು.</p>.<p>ಅಂಗನವಾಡಿ ಕಟ್ಟಡಗಳ ನಿರ್ಮಾಣ, ಗೋಮಾಳ ಅಭಿವೃದ್ಧಿ, ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆಯ ಬಗ್ಗೆ ಮಾಹಿತಿ ಪಡೆದರು. </p>.<p>‘ಕೇಂದ್ರ ಸರ್ಕಾರ ರೈತರ ಬೆಳೆ ನಷ್ಟ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳುವ ಜೊತೆಗೆ ಅದನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಂತಹ ಮಹತ್ವದ ಯೋಜನೆಯನ್ನು ಜಾರಿ ಮಾಡಿ ಒಂದೂವರೆ ಕೋಟಿ ರೈತರಿಗೆ ₹ 1.5 ಲಕ್ಷ ಕೋಟಿ ಬೆಳೆ ವಿಮೆ ನೀಡಿದೆ ಎಂದು ತಿಳಿಸಿದರು.</p>.<p>ಕೇಂದ್ರ ಸರ್ಕಾರ ಪ್ರತಿಯೊಬ್ಬ ಭಾರತೀಯ ಪ್ರಜೆಗೂ ತಲುಪುವಂತೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದೆ. ಆಯುಷ್ಮಾನ್ ಭಾರತ್ ಯೋಜನೆಯ ಮೂಲಕ ಬಡವರ ಆರೋಗ್ಯ ಸಮಸ್ಯೆಗಳು, ಚಿಕಿತ್ಸೆ, ಶಸ್ತ್ರಚಿಕಿತ್ಸೆಗಳಿಗಾಗಿ ಒಬ್ಬ ವ್ಯಕ್ತಿಗೆ ಪ್ರತಿ ವರ್ಷ ₹ 5 ಲಕ್ಷ ವೆಚ್ಚ ಭರಿಸುತ್ತಿದೆ. ಇದರಿಂದ ಬಡವರು,ಮಧ್ಯಮ ವರ್ಗದವರಿಗೆ ಅನುಕೂಲವಾಗಿದೆ ಎಂದು ಹೇಳಿದರು.</p>.<p>ಅತಿ ಕಡಿಮೆ ದರದಲ್ಲಿ ಗುಣಮಟ್ಟದ ಔಷಧಗಳನ್ನು ಒದಗಿಸುವ ಜನೌಷಧಿ ಕೇಂದ್ರಗಳನ್ನು ದೇಶಾದ್ಯಂತ ತೆರೆಯಲಾಗಿದೆ. ಸ್ವಚ್ಛ ಭಾರತ್ ಯೋಜನೆಯಡಿ ವೈಯಕ್ತಿಕ ಶೌಚಾಲಗಳನ್ನು ನಿರ್ಮಿಸಿ ಗ್ರಾಮೀಣ ಮತ್ತು ನಗರ ಪ್ರದೇಶಗಳ ಬಡವರು, ಮಧ್ಯಮವರ್ಗದ ಜನರ ಆರೋಗ್ಯ ಮತ್ತು ಸ್ವಾಭಿಮಾನ ಕಾಪಾಡುತ್ತಿದೆ ಎಂದು ಹೇಳಿದರು.</p>.<p>ಹವಾಮಾನ ವೈಪರೀತ್ಯದಿಂದಾ ರೈತರಿಗೆ ಬೆಳೆ ನಷ್ಟದಿಂದಾಗುವ ಆರ್ಥಿಕ ಹೊರೆ ತಪ್ಪಿಸಲು ಫಸಲ್ ಬಿಮಾ ಯೋಜನೆ ಜಾರಿ ಮಾಡಿದೆ. ಈ ಯೋಜನೆಯ ಮೂಲಕ ದೇಶದ ಒಂದೂವರೆ ಕೋಟಿ ರೈತರಿಗೆ ₹ 1.5 ಲಕ್ಷ ಕೋಟಿ ರೂಪಾಯಿಗಳನ್ನು ಬೆಳೆ ವಿಮೆ ಪರಿಹಾರವಾಗಿ ನೀಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಆಯುಷ್ಮಾನ್ ಭಾರತ್ ಯೋಜನೆಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಲು ಅಧಿಕಾರಿಗಳು ಮತ್ತು ಗ್ರಾಮಗಳ ಮುಖಂಡರು ಮುಂದಾಗಬೇಕು ಎಂದು ಮನವಿ ಮಾಡಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹರಿನಾಥರೆಡ್ಡಿ, ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಕೋನಪ್ಪರೆಡ್ಡಿ, ಬಿಜೆಪಿ, ಜೆಡಿಎಸ್ ಮುಖಂಡರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೇಳೂರು:</strong> ತಾಲ್ಲೂಕಿನ ಚಾಕವೇಲು ಗ್ರಾ.ಪಂ ವ್ಯಾಪ್ತಿಯ ಗ್ರಾಮಗಳಿಗೆ ಸಂಸದ ಡಾ.ಕೆ.ಸುಧಾಕರ್ ಭಾನುವಾರ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು. ಸಾರ್ವಜನಿಕರು ವಿವಿಧ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಆದಿರೆಡ್ಡಿಪಲ್ಲಿ, ವಡ್ಡಿವಾಂಡ್ಲಪಲ್ಲಿ, ಯುಗವಪ್ಯಾಯಿಲವಾಂಡ್ಲಪಲ್ಲಿ, ದಿಗವಪ್ಯಾಯಿಲವಾಂಡ್ಲಪಲ್ಲಿ, ಕೊತ್ತೂರು, ವೆಂಟಕರೆಡ್ಡಿಪಲ್ಲಿ, ವೆಂಕಟರೆಡ್ಡಿಪಲ್ಲಿ ತಾಂಡಾ, ಮದ್ದಿರೆಡ್ಡಿಪಲ್ಲಿ, ವೆಂಕಟೇಶಪಲ್ಲಿ, ಬುದ್ದಲವಾರಪಲ್ಲಿ, ಪಾಪಿರೆಡ್ಡಿಪಲ್ಲಿ ಮತ್ತಿತರ ಗ್ರಾಮಗಳಿಗೆ ಭೇಟಿ ನೀಡಿದರು.</p>.<p>ಅಂಗನವಾಡಿ ಕಟ್ಟಡಗಳ ನಿರ್ಮಾಣ, ಗೋಮಾಳ ಅಭಿವೃದ್ಧಿ, ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆಯ ಬಗ್ಗೆ ಮಾಹಿತಿ ಪಡೆದರು. </p>.<p>‘ಕೇಂದ್ರ ಸರ್ಕಾರ ರೈತರ ಬೆಳೆ ನಷ್ಟ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳುವ ಜೊತೆಗೆ ಅದನ್ನು ಗಂಭೀರವಾಗಿ ಪರಿಗಣಿಸಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಂತಹ ಮಹತ್ವದ ಯೋಜನೆಯನ್ನು ಜಾರಿ ಮಾಡಿ ಒಂದೂವರೆ ಕೋಟಿ ರೈತರಿಗೆ ₹ 1.5 ಲಕ್ಷ ಕೋಟಿ ಬೆಳೆ ವಿಮೆ ನೀಡಿದೆ ಎಂದು ತಿಳಿಸಿದರು.</p>.<p>ಕೇಂದ್ರ ಸರ್ಕಾರ ಪ್ರತಿಯೊಬ್ಬ ಭಾರತೀಯ ಪ್ರಜೆಗೂ ತಲುಪುವಂತೆ ಹಲವು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದೆ. ಆಯುಷ್ಮಾನ್ ಭಾರತ್ ಯೋಜನೆಯ ಮೂಲಕ ಬಡವರ ಆರೋಗ್ಯ ಸಮಸ್ಯೆಗಳು, ಚಿಕಿತ್ಸೆ, ಶಸ್ತ್ರಚಿಕಿತ್ಸೆಗಳಿಗಾಗಿ ಒಬ್ಬ ವ್ಯಕ್ತಿಗೆ ಪ್ರತಿ ವರ್ಷ ₹ 5 ಲಕ್ಷ ವೆಚ್ಚ ಭರಿಸುತ್ತಿದೆ. ಇದರಿಂದ ಬಡವರು,ಮಧ್ಯಮ ವರ್ಗದವರಿಗೆ ಅನುಕೂಲವಾಗಿದೆ ಎಂದು ಹೇಳಿದರು.</p>.<p>ಅತಿ ಕಡಿಮೆ ದರದಲ್ಲಿ ಗುಣಮಟ್ಟದ ಔಷಧಗಳನ್ನು ಒದಗಿಸುವ ಜನೌಷಧಿ ಕೇಂದ್ರಗಳನ್ನು ದೇಶಾದ್ಯಂತ ತೆರೆಯಲಾಗಿದೆ. ಸ್ವಚ್ಛ ಭಾರತ್ ಯೋಜನೆಯಡಿ ವೈಯಕ್ತಿಕ ಶೌಚಾಲಗಳನ್ನು ನಿರ್ಮಿಸಿ ಗ್ರಾಮೀಣ ಮತ್ತು ನಗರ ಪ್ರದೇಶಗಳ ಬಡವರು, ಮಧ್ಯಮವರ್ಗದ ಜನರ ಆರೋಗ್ಯ ಮತ್ತು ಸ್ವಾಭಿಮಾನ ಕಾಪಾಡುತ್ತಿದೆ ಎಂದು ಹೇಳಿದರು.</p>.<p>ಹವಾಮಾನ ವೈಪರೀತ್ಯದಿಂದಾ ರೈತರಿಗೆ ಬೆಳೆ ನಷ್ಟದಿಂದಾಗುವ ಆರ್ಥಿಕ ಹೊರೆ ತಪ್ಪಿಸಲು ಫಸಲ್ ಬಿಮಾ ಯೋಜನೆ ಜಾರಿ ಮಾಡಿದೆ. ಈ ಯೋಜನೆಯ ಮೂಲಕ ದೇಶದ ಒಂದೂವರೆ ಕೋಟಿ ರೈತರಿಗೆ ₹ 1.5 ಲಕ್ಷ ಕೋಟಿ ರೂಪಾಯಿಗಳನ್ನು ಬೆಳೆ ವಿಮೆ ಪರಿಹಾರವಾಗಿ ನೀಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಆಯುಷ್ಮಾನ್ ಭಾರತ್ ಯೋಜನೆಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಸಲು ಅಧಿಕಾರಿಗಳು ಮತ್ತು ಗ್ರಾಮಗಳ ಮುಖಂಡರು ಮುಂದಾಗಬೇಕು ಎಂದು ಮನವಿ ಮಾಡಿದರು.</p>.<p>ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಹರಿನಾಥರೆಡ್ಡಿ, ಒಕ್ಕಲಿಗರ ಸಂಘದ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ಕೋನಪ್ಪರೆಡ್ಡಿ, ಬಿಜೆಪಿ, ಜೆಡಿಎಸ್ ಮುಖಂಡರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>