‘ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಯ ಹರಿಕಾರರಾಗಿರುವ ಗ್ರಾಮ ಪಂಚಾಯಿತಿ ಜನ ಪ್ರತಿನಿಧಿಗಳು ಮತ್ತು ಪಿಡಿಒ ಅವರು ಹಳ್ಳಿಗಳಲ್ಲಿ ರಸ್ತೆ ನಿರ್ಮಾಣ, ನೈರ್ಮಲ್ಯ, ಶೌಚಾಲಯ ನಿರ್ಮಾಣ, ಶಾಲೆಗಳಿಗೆ ಕಾಂಪೌಂಡ್ ನಿರ್ಮಾಣ, ಚರಂಡಿಗಳ ಸ್ವಚ್ಛತೆ, ಕುಡಿಯುವ ನೀರು, ಅಂತರ್ಜಲ ಪೂರಣ, ಕಲ್ಯಾಣಿಗಳ ಸ್ವಚ್ಛತೆಯಂತಹ ಕೆಲಸಗಳಿಗೆ ಆದ್ಯತೆ ನೀಡಬೇಕು. ನಿವೇಶನ, ಅನುದಾನ ಹಂಚಿಕೆಗಳು ಸೇರಿದಂತೆ ಸರ್ಕಾರದ ಎಲ್ಲ ರೀತಿಯ ಯೋಜನೆಗಳು ಕಟ್ಟಕಡೆಯ ಸಾಮಾನ್ಯ ವ್ಯಕ್ತಿಗೂ ತಲುಪುವಂತೆ ನೋಡಿಕೊಳ್ಳಬೇಕು. ಆಗ ಮಾತ್ರ ಸಾಮಾನ್ಯರ ಜೀವನಮಟ್ಟ ಸುಧಾರಣೆಯಾಗುತ್ತದೆ’ ಎಂದು ಹೇಳಿದರು.