<p><strong>ಗುಡಿಬಂಡೆ: </strong>ಗ್ರಾಮಾಂತರ ಪ್ರದೇಶಗಳಲ್ಲಿನ ರಸ್ತೆ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಗ್ರಾಮಸ್ಥರು ಉಸ್ತುವಾರಿ ವಹಿಸಿದಾಗ ಮಾತ್ರ ಗುಣಮಟ್ಟದ ಕಾಮಗಾರಿ ಸಾಧ್ಯ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.</p>.<p>ತಾಲ್ಲೂಕಿನ ಗುಮ್ಮರೆಡ್ಡಿಹಳ್ಳಿ ಹಾಗೂ ಬೀಚಗಾನಹಳ್ಳಿ ಕ್ರಾಸ್ನಿಂದ ತಿರುಮಣಿ ಗ್ರಾಮದ ರಸ್ತೆ ಕಾಮಗಾರಿಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ಶಾಸಕನಾದ ಮೊದಲ ಅವಧಿಯಲ್ಲಿ ತಾಲ್ಲೂಕಿನ ಬಹುತೇಕ ಗ್ರಾಮಗಳ ರಸ್ತೆಗಳು ಹದೆಗೆಟ್ಟಿದ್ದವು. 7 ವರ್ಷಗಳಲ್ಲಿ ಶೇ 85ರಷ್ಟು ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗಿದೆ. ಕಾರಣಾಂತರಗಳಿಂದ ಶೇ 15ರಷ್ಟು ರಸ್ತೆ ಕಾಮಗಾರಿಬಾಕಿ ಇದ್ದು ಉಳಿದ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುವುದು ಎಂದರು.</p>.<p>ಸೋಮೇನಹಳ್ಳೀ ಹಾಗೂ ಕಾಟೇನಹಳ್ಳಿ ಗ್ರಾಮದಿಂದ ಗುಮ್ಮರೆಡ್ಡಿಹಳ್ಳಿ ಗ್ರಾಮದ ಸಂಪರ್ಕ ರಸ್ತೆಗೆ ₹30 ಲಕ್ಷ, ಬೀಚಗಾನಹಳ್ಳಿ ಕ್ರಾಸ್ನಿಂದ ತಿರುಮಣಿ ಗ್ರಾಮದ ರಸ್ತೆಗೆ ₹50 ಲಕ್ಷ ಬಿಡುಗಡೆ ಮಾಡಲಾಗಿದೆ. ಕಾಮಗಾರಿ ಗುಣಮಟ್ಟದಲ್ಲಿ ಲೋಪ ಕಂಡುಬಂದರೆ ಕಾಮಗಾರಿ ನಿಲ್ಲಿಸಿ. ನಾನೇ ಖುದ್ದು ಸ್ಥಳ ಪರಿಶೀಲನೆ ಮಾಡುತ್ತೇನೆ ಎಂದರು.</p>.<p>ಈ ಹಿಂದೆ ಕೃಷಿ ಇಲಾಖೆಯಿಂದ ಶೇಂಗಾ ಬಿತ್ತನೆ ಬೀಜ ಪ್ರಾತ್ಯಕ್ಷಿಕೆ ಮಾಡಲು ಉಚಿತವಾಗಿ ನೀಡಲಾಗುತ್ತಿತ್ತು. ಆಗ ಬೇಕಾದ ರೈತರು ಪಡೆದುಕೊಂಡು ಹೋಗುತ್ತಿದ್ದರು. ಆದರೆ ಈಗ ಒಂದೇ ಗ್ರಾಮದ ಆಯ್ದ ರೈತರಿಗೆ ಈ ಉಚಿತ ಬಿತ್ತನೆ ಬೀಜ ನೀಡಲು ತಿಳಿಸಿದ್ದೇನೆ. ಹೀಗೆ ಮಾಡಿದರೆ ಈ ಯೋಜನೆಯ ಉದ್ದೇಶ ಈಡೇರುತ್ತದೆ. ಈ ನಿಟ್ಟಿನಲ್ಲಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಎಲ್ಲರಿಗೂ ದೊರಕಿಸಿಕೊಡುವ ಕೆಲಸ ಮಾಡುತ್ತೇನೆ ಎಂದರು.</p>.<p>ತಹಶೀಲ್ದಾರ್ ಸಿಗ್ಬತ್ತುಲ್ಲಾ, ತಾ.ಪಂ ಇ.ಒ ರವೀಂದ್ರ, ಬಿಇಒ ವೆಂಕಟೇಶಪ್ಪ, ಮುಖಂಡ ಕೃಷ್ಣೇಗೌಡ, ಬೈರಾರೆಡ್ಡಿ, ಅಶ್ವತ್ಥರೆಡ್ಡಿ, ವೆಂಕಟೇಶ್, ಆದಿನಾರಾಯಣಪ್ಪ, ಸುಬ್ಬರಾಯಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ: </strong>ಗ್ರಾಮಾಂತರ ಪ್ರದೇಶಗಳಲ್ಲಿನ ರಸ್ತೆ ಕಾಮಗಾರಿ ನಡೆಯುವ ಸಂದರ್ಭದಲ್ಲಿ ಗ್ರಾಮಸ್ಥರು ಉಸ್ತುವಾರಿ ವಹಿಸಿದಾಗ ಮಾತ್ರ ಗುಣಮಟ್ಟದ ಕಾಮಗಾರಿ ಸಾಧ್ಯ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಹೇಳಿದರು.</p>.<p>ತಾಲ್ಲೂಕಿನ ಗುಮ್ಮರೆಡ್ಡಿಹಳ್ಳಿ ಹಾಗೂ ಬೀಚಗಾನಹಳ್ಳಿ ಕ್ರಾಸ್ನಿಂದ ತಿರುಮಣಿ ಗ್ರಾಮದ ರಸ್ತೆ ಕಾಮಗಾರಿಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.</p>.<p>ಶಾಸಕನಾದ ಮೊದಲ ಅವಧಿಯಲ್ಲಿ ತಾಲ್ಲೂಕಿನ ಬಹುತೇಕ ಗ್ರಾಮಗಳ ರಸ್ತೆಗಳು ಹದೆಗೆಟ್ಟಿದ್ದವು. 7 ವರ್ಷಗಳಲ್ಲಿ ಶೇ 85ರಷ್ಟು ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗಿದೆ. ಕಾರಣಾಂತರಗಳಿಂದ ಶೇ 15ರಷ್ಟು ರಸ್ತೆ ಕಾಮಗಾರಿಬಾಕಿ ಇದ್ದು ಉಳಿದ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುವುದು ಎಂದರು.</p>.<p>ಸೋಮೇನಹಳ್ಳೀ ಹಾಗೂ ಕಾಟೇನಹಳ್ಳಿ ಗ್ರಾಮದಿಂದ ಗುಮ್ಮರೆಡ್ಡಿಹಳ್ಳಿ ಗ್ರಾಮದ ಸಂಪರ್ಕ ರಸ್ತೆಗೆ ₹30 ಲಕ್ಷ, ಬೀಚಗಾನಹಳ್ಳಿ ಕ್ರಾಸ್ನಿಂದ ತಿರುಮಣಿ ಗ್ರಾಮದ ರಸ್ತೆಗೆ ₹50 ಲಕ್ಷ ಬಿಡುಗಡೆ ಮಾಡಲಾಗಿದೆ. ಕಾಮಗಾರಿ ಗುಣಮಟ್ಟದಲ್ಲಿ ಲೋಪ ಕಂಡುಬಂದರೆ ಕಾಮಗಾರಿ ನಿಲ್ಲಿಸಿ. ನಾನೇ ಖುದ್ದು ಸ್ಥಳ ಪರಿಶೀಲನೆ ಮಾಡುತ್ತೇನೆ ಎಂದರು.</p>.<p>ಈ ಹಿಂದೆ ಕೃಷಿ ಇಲಾಖೆಯಿಂದ ಶೇಂಗಾ ಬಿತ್ತನೆ ಬೀಜ ಪ್ರಾತ್ಯಕ್ಷಿಕೆ ಮಾಡಲು ಉಚಿತವಾಗಿ ನೀಡಲಾಗುತ್ತಿತ್ತು. ಆಗ ಬೇಕಾದ ರೈತರು ಪಡೆದುಕೊಂಡು ಹೋಗುತ್ತಿದ್ದರು. ಆದರೆ ಈಗ ಒಂದೇ ಗ್ರಾಮದ ಆಯ್ದ ರೈತರಿಗೆ ಈ ಉಚಿತ ಬಿತ್ತನೆ ಬೀಜ ನೀಡಲು ತಿಳಿಸಿದ್ದೇನೆ. ಹೀಗೆ ಮಾಡಿದರೆ ಈ ಯೋಜನೆಯ ಉದ್ದೇಶ ಈಡೇರುತ್ತದೆ. ಈ ನಿಟ್ಟಿನಲ್ಲಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಎಲ್ಲರಿಗೂ ದೊರಕಿಸಿಕೊಡುವ ಕೆಲಸ ಮಾಡುತ್ತೇನೆ ಎಂದರು.</p>.<p>ತಹಶೀಲ್ದಾರ್ ಸಿಗ್ಬತ್ತುಲ್ಲಾ, ತಾ.ಪಂ ಇ.ಒ ರವೀಂದ್ರ, ಬಿಇಒ ವೆಂಕಟೇಶಪ್ಪ, ಮುಖಂಡ ಕೃಷ್ಣೇಗೌಡ, ಬೈರಾರೆಡ್ಡಿ, ಅಶ್ವತ್ಥರೆಡ್ಡಿ, ವೆಂಕಟೇಶ್, ಆದಿನಾರಾಯಣಪ್ಪ, ಸುಬ್ಬರಾಯಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>