ತಾಲ್ಲೂಕು ಆರೋಗ್ಯಾಧಿಕಾರಿ ಡಾ. ನರಸಿಂಹಮೂರ್ತಿ ಮಾತನಾಡಿ, ‘ಸೋಂಕು ಕಡಿಮೆಯಾಗುತ್ತಿದೆ ಎಂದು ಅಸಡ್ಡೆ ತೋರದೆ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವ ಮೂಲಕ ಸೋಂಕನ್ನು ನಿಯಂತ್ರಿಸುವ ಅನಿವಾರ್ಯತೆ ಇದೆ. ಇನ್ನೇನು ಚಳಿಗಾಲ ಸಹ ಆರಂಭವಾಗುತ್ತಿದ್ದು, ಸೋಂಕು ಹರಡುವ ಅಪಾಯ ಹೆಚ್ಚಿರುವುದರಿಂದ, ಮತ್ತಷ್ಟು ಎಚ್ಚರಿಕೆಯಿಂದ ಇರಬೇಕಾದ ಅಗತ್ಯವಿದೆ. ಈಗಾಗಲೇ ವಿಶ್ವದ ಹಲವು ರಾಷ್ಟ್ರಗಳಲ್ಲಿ ವೈರಸ್ ತನ್ನ ಎರಡನೇ ಹಂತದ ದಾಳಿಯನ್ನು ಪ್ರಾರಂಭಿಸಿದೆ. ಈ ಎರಡನೇ ದಾಳಿಯೂ ಇನ್ನೂ ಭಯಂಕರ ರೂಪ ತಾಳಿದ್ದು, ಹೆಚ್ಚಾಗಿ ಹಬ್ಬುತ್ತಿರುವ ರಾಷ್ಟ್ರಗಳನ್ನು ಲಾಕ್ಡೌನ್ ಸಹ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಗಂಭೀರತೆ ತಿಳಿದು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದರು.