<p><strong>ಚಿಕ್ಕಬಳ್ಳಾಪುರ: </strong>‘ರಾಜ್ಯದಲ್ಲೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಮಂಡಿಕಲ್ಲು ಹೋಬಳಿ ಹಾಗೂ ಗೌರಿಬಿದನೂರು ತಾಲ್ಲೂಕಿನ ಹೊಸೂರು ಹೋಬಳಿ ವ್ಯಾಪ್ತಿಯಲ್ಲಿ ಗ್ರಾಮ ನ್ಯಾಯಾಲಯಗಳನ್ನು ಪ್ರಾರಂಭಿಸಲಾಗುತ್ತಿದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಅಮರನಾರಾಯಣ ಹೇಳಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮನೆ ಬಾಗಿಲಲ್ಲೇ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹಾಗೂ ಜನರ ಹಂತದಲ್ಲೇ ಸಂಪೂರ್ಣ ನ್ಯಾಯದಾನ ಮಾಡುವ ಉದ್ದೇಶದಿಂದ 2008ರಲ್ಲಿ ಗ್ರಾಮ ನ್ಯಾಯಾಲಯ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಈ ಕಾಯ್ದೆಯ ಅನ್ವಯ ನಾಗರಿಕನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ತನ್ನ ಹಕ್ಕಿನಿಂದ ವಂಚಿತನಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಇದರ ಗುರಿಯಾಗಿದೆ’ ಎಂದು ತಿಳಿಸಿದರು.</p>.<p>‘ಕಾನೂನಿನ ಮುಂದೆ ಎಲ್ಲರೂ ಸಮಾನರು. ಜನಸಾಮಾನ್ಯನು ಕಾನೂನಿನ ಸವಲತ್ತುಗಳನ್ನು ಪಡೆಯಬೇಕು. ಅಲ್ಲದೆ, ಪ್ರಕರಣಗಳ ವಿಚಾರವಾಗಿ ಕಕ್ಷಿದಾರರು ನ್ಯಾಯಾಲಯಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಗ್ರಾಮ ನ್ಯಾಯಾಲಯವನ್ನು ಪ್ರಾಥಮಿಕವಾಗಿ ಮಂಡಿಕಲ್ಲಿನಲ್ಲಿರುವ ಕರ್ನಾಟಕ ಪಬ್ಲಿಕ್ ಕಾಲೇಜು ಹಾಗೂ ಹೊಸೂರಿನಲ್ಲಿರುವ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ಪ್ರಾರಂಭಿಸಲಾಗುತ್ತಿದ್ದು, ಜನರು ಈ ನ್ಯಾಯಾಲಯಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.</p>.<p>‘ನ್ಯಾಯಾಲಯಕ್ಕೆ ನೇಮಕಗೊಳ್ಳುವ ನ್ಯಾಯಾಧೀಶರನ್ನು ನ್ಯಾಯಾಧಿಕಾರಿ ಎಂದು ಕರೆಯಲಾಗುತ್ತದೆ. ನ್ಯಾಯಾಧಿಕಾರಿಯನ್ನು ಜಿಲ್ಲಾ ಮಟ್ಟದ ನ್ಯಾಯಾಧೀಶರು ನೇಮಕ ಮಾಡುವ ಅಧಿಕಾರ ಹೊಂದಿರುತ್ತಾರೆ. ಗ್ರಾಮ ನ್ಯಾಯಾಲಯದಲ್ಲಿ ₹50 ಸಾವಿರದ ಒಳಗಿನ ದಂಡಕ್ಕೆ ಒಳಪಟ್ಟ ಸಿವಿಲ್ ಪ್ರಕರಣಗಳು, ₹20 ಸಾವಿರ ದಂಡಕ್ಕೆ ಒಳಪಟ್ಟ ಕಳ್ಳತನ ಪ್ರಕರಣಗಳು, 2 ವರ್ಷಗಳ ಕಾಲ ಜೈಲುವಾಸ ಪ್ರಕರಣಗಳು, ಕೌಟುಂಬಿಕ ಕಲಹ ಪ್ರಕರಣಗಳನ್ನು ವಿಚಾರಣೆ ಮಾಡಲಾಗುತ್ತದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>‘ರಾಜ್ಯದಲ್ಲೇ ಮೊದಲ ಬಾರಿಗೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಮಂಡಿಕಲ್ಲು ಹೋಬಳಿ ಹಾಗೂ ಗೌರಿಬಿದನೂರು ತಾಲ್ಲೂಕಿನ ಹೊಸೂರು ಹೋಬಳಿ ವ್ಯಾಪ್ತಿಯಲ್ಲಿ ಗ್ರಾಮ ನ್ಯಾಯಾಲಯಗಳನ್ನು ಪ್ರಾರಂಭಿಸಲಾಗುತ್ತಿದೆ’ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಅಮರನಾರಾಯಣ ಹೇಳಿದರು.</p>.<p>ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮನೆ ಬಾಗಿಲಲ್ಲೇ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಹಾಗೂ ಜನರ ಹಂತದಲ್ಲೇ ಸಂಪೂರ್ಣ ನ್ಯಾಯದಾನ ಮಾಡುವ ಉದ್ದೇಶದಿಂದ 2008ರಲ್ಲಿ ಗ್ರಾಮ ನ್ಯಾಯಾಲಯ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಈ ಕಾಯ್ದೆಯ ಅನ್ವಯ ನಾಗರಿಕನು ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ತನ್ನ ಹಕ್ಕಿನಿಂದ ವಂಚಿತನಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಇದರ ಗುರಿಯಾಗಿದೆ’ ಎಂದು ತಿಳಿಸಿದರು.</p>.<p>‘ಕಾನೂನಿನ ಮುಂದೆ ಎಲ್ಲರೂ ಸಮಾನರು. ಜನಸಾಮಾನ್ಯನು ಕಾನೂನಿನ ಸವಲತ್ತುಗಳನ್ನು ಪಡೆಯಬೇಕು. ಅಲ್ಲದೆ, ಪ್ರಕರಣಗಳ ವಿಚಾರವಾಗಿ ಕಕ್ಷಿದಾರರು ನ್ಯಾಯಾಲಯಗಳಿಗೆ ಅಲೆದಾಡುವುದನ್ನು ತಪ್ಪಿಸುವ ಉದ್ದೇಶದಿಂದ ಗ್ರಾಮ ನ್ಯಾಯಾಲಯವನ್ನು ಪ್ರಾಥಮಿಕವಾಗಿ ಮಂಡಿಕಲ್ಲಿನಲ್ಲಿರುವ ಕರ್ನಾಟಕ ಪಬ್ಲಿಕ್ ಕಾಲೇಜು ಹಾಗೂ ಹೊಸೂರಿನಲ್ಲಿರುವ ಸಮೂಹ ಸಂಪನ್ಮೂಲ ಕೇಂದ್ರದಲ್ಲಿ ಪ್ರಾರಂಭಿಸಲಾಗುತ್ತಿದ್ದು, ಜನರು ಈ ನ್ಯಾಯಾಲಯಗಳ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.</p>.<p>‘ನ್ಯಾಯಾಲಯಕ್ಕೆ ನೇಮಕಗೊಳ್ಳುವ ನ್ಯಾಯಾಧೀಶರನ್ನು ನ್ಯಾಯಾಧಿಕಾರಿ ಎಂದು ಕರೆಯಲಾಗುತ್ತದೆ. ನ್ಯಾಯಾಧಿಕಾರಿಯನ್ನು ಜಿಲ್ಲಾ ಮಟ್ಟದ ನ್ಯಾಯಾಧೀಶರು ನೇಮಕ ಮಾಡುವ ಅಧಿಕಾರ ಹೊಂದಿರುತ್ತಾರೆ. ಗ್ರಾಮ ನ್ಯಾಯಾಲಯದಲ್ಲಿ ₹50 ಸಾವಿರದ ಒಳಗಿನ ದಂಡಕ್ಕೆ ಒಳಪಟ್ಟ ಸಿವಿಲ್ ಪ್ರಕರಣಗಳು, ₹20 ಸಾವಿರ ದಂಡಕ್ಕೆ ಒಳಪಟ್ಟ ಕಳ್ಳತನ ಪ್ರಕರಣಗಳು, 2 ವರ್ಷಗಳ ಕಾಲ ಜೈಲುವಾಸ ಪ್ರಕರಣಗಳು, ಕೌಟುಂಬಿಕ ಕಲಹ ಪ್ರಕರಣಗಳನ್ನು ವಿಚಾರಣೆ ಮಾಡಲಾಗುತ್ತದೆ’ ಎಂದು ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>