ಕೇಂದ್ರ ಸಚಿವರಿಂದ ಬರ ಅಧ್ಯಯನ

ಚಿಕ್ಕಬಳ್ಳಾಪುರ: ಕೇಂದ್ರ ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ರಾಜ್ಯ ಸಚಿವ ರಮೇಶ್ ಜಿಗಜಿಣಗಿ ಅವರ ನೇತೃತ್ವದ ಬಿಜೆಪಿ ಮುಖಂಡರ ತಂಡ ಸೋಮವಾರ ತಾಲ್ಲೂಕಿನ ಹೂವಿನವಾರಹಳ್ಳಿಯಲ್ಲಿ ಬರ ಅಧ್ಯಯನ ನಡೆಸಿತು.
ಈ ವೇಳೆ ಮಾತನಾಡಿದ ಜಿಗಜಿಣಗಿ, 'ರಾಜ್ಯ ಸರ್ಕಾರ ಬರ ಪರಿಹಾರಕ್ಕೆ ಕ್ರಮಕೈಗೊಂಡಿಲ್ಲ. ಆಂತರಿಕ ಕಚ್ಚಾಟದಲ್ಲೇ ದಿನ ಉರುಳುತ್ತಿವೆ. ರೈತರ ನೋವಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ' ಎಂದು ಹೇಳಿದರು.
'ಬಿಜೆಪಿಯವರದು ರಾಜಕೀಯ ಪ್ರೇರಿತ ಅಧ್ಯಯನ ಎಂಬ ಕೃಷಿ ಸಚಿವರ ಹೇಳಿಕೆ ಬೇಜವಾಬ್ದಾರಿತನದಿಂದ ಕೂಡಿದೆ. ರೈತರ ಸಮಸ್ಯೆಗಳ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡುವುದು ನಮ್ಮ ಜವಾಬ್ದಾರಿ' ಎಂದು ತಿಳಿಸಿದರು. ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ, ಮಾಜಿ ಶಾಸಕ ಬಿ.ಸುರೇಶ್ ಗೌಡ ಅಧ್ಯಯನ ತಂಡದಲ್ಲಿ ಇದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.