ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ ಸಚಿವರಿಂದ ಬರ ಅಧ್ಯಯನ

Last Updated 3 ಡಿಸೆಂಬರ್ 2018, 6:56 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಕೇಂದ್ರ ಗ್ರಾಮೀಣಾಭಿವೃದ್ಧಿ,ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ರಾಜ್ಯ ಸಚಿವ ರಮೇಶ್ ಜಿಗಜಿಣಗಿ ಅವರ ನೇತೃತ್ವದ ಬಿಜೆಪಿ ಮುಖಂಡರ ತಂಡ ಸೋಮವಾರ ತಾಲ್ಲೂಕಿನ ಹೂವಿನವಾರಹಳ್ಳಿಯಲ್ಲಿ ಬರ ಅಧ್ಯಯನ ನಡೆಸಿತು.

ಈ ವೇಳೆ ಮಾತನಾಡಿದ ಜಿಗಜಿಣಗಿ, 'ರಾಜ್ಯ ಸರ್ಕಾರ ಬರ ಪರಿಹಾರಕ್ಕೆ ಕ್ರಮಕೈಗೊಂಡಿಲ್ಲ. ಆಂತರಿಕ ಕಚ್ಚಾಟದಲ್ಲೇ ದಿನ ಉರುಳುತ್ತಿವೆ. ರೈತರ ನೋವಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ' ಎಂದು ಹೇಳಿದರು.

'ಬಿಜೆಪಿಯವರದು ರಾಜಕೀಯ ಪ್ರೇರಿತ ಅಧ್ಯಯನ ಎಂಬ ಕೃಷಿ ಸಚಿವರ ಹೇಳಿಕೆ ಬೇಜವಾಬ್ದಾರಿತನದಿಂದ ಕೂಡಿದೆ. ರೈತರ ಸಮಸ್ಯೆಗಳ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡುವುದು ನಮ್ಮ ಜವಾಬ್ದಾರಿ' ಎಂದು ತಿಳಿಸಿದರು. ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ, ಮಾಜಿ ಶಾಸಕ ಬಿ.ಸುರೇಶ್ ಗೌಡ ಅಧ್ಯಯನ ತಂಡದಲ್ಲಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT