ತಾಲ್ಲೂಕು ಸಂಚಾಲಕ ಪಿ.ನರಸಿಂಹಮೂರ್ತಿ ಮಾತನಾಡಿ, ‘ರಾಜ್ಯ ಸರ್ಕಾರದಲ್ಲಿ ಬಹುತೇಕ ದಿನಗಳಿಂದ ಖಾಲಿಯಾಗಿಯೇ ಉಳಿದಿರುವ ಲಕ್ಷಾಂತರ ಬ್ಯಾಕ್ಲಾಗ್ ಹುದ್ದೆಗಳನ್ನು ಭರ್ತಿ ಮಾಡಬೇಕು. ಹೊರಗುತ್ತಿಗೆ ನೇಮಕಾತಿ ರದ್ದು ಮಾಡಬೇಕು ಹಾಗೂ ಪಿಟಿಸಿಎಲ್ ಕಾಯ್ದೆ ಬಲಪಡಿಸಿ ದಲಿತರ ಭೂಮಿ ದಲಿತರಲ್ಲಿಯೇ ಉಳಿಯುವಂತೆ ಮಾಡಬೇಕು. ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತಾಪಿ ಜನರ ವಿರೋಧಿ ಭೂಸುಧಾರಣೆ ಕಾಯ್ದೆ, ವಿದ್ಯುತ್ ಖಾಸಗೀಕರಣ ಮಸೂದೆ, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಮಾಡಲು ಒತ್ತಾಯಿಸಿ ಗೋಹತ್ಯೆ ನಿಷೇಧ ಕಾಯ್ದೆ, ಮತಾಂತರ ನಿಷೇಧ ಕಾಯ್ದೆಗಳನ್ನು ರದ್ದುಗೊಳಿಸಬೇಕೆಂಬ ಶರತ್ತುಗಳನ್ನು ವಿಧಿಸಿ ಕಾಂಗ್ರೆಸ್ ಪಕ್ಷದ ಪರವಾಗಿ ಮತಯಾಚನೆ ಮಾಡಲಾಗುವುದು’ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡ ಇಡಗೂರು ಸೋಮಯ್ಯ, ಜೆ.ಎನ್. ಆದಿನಾರಾಯಣಪ್ಪ, ನಗರಗೆರೆ ಲಕ್ಷ್ಮಿನಾರಾಯಣ, ಹುದುಗೂರು ಬಾಲಪ್ಪ, ಕೆ.ಎಸ್.ತಿಪ್ಪಯ್ಯ, ಧರಣಿಕುಮಾರ್, ತೇಜು ಇದ್ದರು.