ಸರ್ಕಾರ ಬರಪೀಡಿತ ತಾಲ್ಲೂಕು ಎಂದು ಘೋಷಣೆ ಮಾಡಿದೆ. ರೈತರು ಬೆಳೆದ ಬೆಳೆ ಸಂಪೂರ್ಣವಾಗಿ ಬೆಳೆ ನಷ್ಟ ಆಗಿದೆ. ಕೃಷಿ ಹಾಗೂ ತೋಟಗಾರಿಕೆ, ಕಂದಾಯ ಅಧಿಕಾರಿಗಳು ಜಂಟಿಯಾಗಿ ಸರ್ವೆ ಮಾಡಿ, ಬೆಳೆ ನಷ್ಟದ ಮಾಹಿತಿಯನ್ನು ಸರ್ಕಾರಕ್ಕೆ ವರದಿ ನೀಡಬೇಕು. ಕೂಡಲೇ ರೈತರಿಗೆ ಬೆಳೆ ನಷ್ಟ ಪರಿಹಾರ ಕಲ್ಪಿಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪುಟ್ಟಣ್ಣಯ್ಯ ಬಣದ ರಾಜ್ಯ ಮಹಿಳಾ ವಿಭಾಗದ ಉಪಾಧ್ಯಕ್ಷೆ ಅನಸೂಯಮ್ಮ ಮನವಿ ಮಾಡಿದರು.