<p><strong>ಗುಡಿಬಂಡೆ: </strong>ಲಾಕ್ಡೌನ್ ಅವಧಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ತೆರಿಗೆ ವಸೂಲಿ ಆಗದಿರುವುದರಿಂದ ಪೌರಕಾರ್ಮಿಕರು ಪಟ್ಟಣ ಪಂಚಾಯಿತಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಗುತ್ತಿಗೆ ನೌಕರರ 5 ತಿಂಗಳ ವೇತನ ಬಾಕಿ ಇದೆ ಎಂದು ತಹಶೀಲ್ದಾರ್ ಡಿ. ಹನುಮಂತರಾಯಪ್ಪ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 11 ವಾರ್ಡ್ಗಳ ಪೈಕಿ ಅಧಿಕೃತವಾಗಿ 3,627 ಮನೆ ಹಾಗೂ ನಿವೇಶಗಳ ಪಟ್ಟಿ ಇದೆ. ಅದರಲ್ಲಿ 1,200 ಮಾತ್ರ ಇ-ಸ್ವತ್ತಿನಲ್ಲಿ ನೋಂದಣಿಯಾಗಿದೆ ಎಂದರು.</p>.<p>ತಾಲ್ಲೂಕು ಕಚೇರಿಯಲ್ಲಿ ಶೇ 70ರಷ್ಟು ಗುತ್ತಿಗೆ ಅಧಾರದ ನೌಕರರಿದ್ದಾರೆ. ಇವರ ವೇತನಕ್ಕೆ ತೆರಿಗೆ ಹಣದಿಂದಲೇ ವೇತನೆ ನೀಡಲಾಗುತ್ತದೆ ಎಂದರು.</p>.<p>ಜನರಿಗೆ ಇ-ಸ್ವತ್ತಿನ ಬಗ್ಗೆ ತಪ್ಪು ತಿಳುವಳಿಕೆ ಇದೆ. ಅದನ್ನು ನಿವಾರಿಸಲು ಶಾಸಕರು ಹಾಗೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಪಡೆದು, ಜನರಿಗೆ ಹೊರೆಯಾಗದಂತೆ ಸರಳೀಕೃತ ಯೋಜನೆ ಮೂಲಕ ಇ- ಸ್ವತ್ತು ಅಭಿಯಾನ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.</p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜಶೇಖರ ಮಾತನಾಡಿ, ‘ನಾನು ಅಧಿಕಾರ ವಹಿಸಿಕೊಂಡು ಮೂರು ತಿಂಗಳಾಗಿದೆ. ಇ-ಸ್ವತ್ತು ವಿಚಾರದಲ್ಲಿ ಹಲವು ದೂರುಗಳು ಬಂದಿವೆ. ಮಧ್ಯವರ್ತಿಗಳ ಕಾರಣದಿಂದಾಗಿ ಇ-ಸ್ವತ್ತು ವಿಚಾರದಲ್ಲಿ ಗೊಂದಲ ಉಂಟಾಗಿದೆ. ಜನರು ಅರ್ಜಿಯೊಂದಿಗೆ ಅಗತ್ಯ ದಾಖಲೆಯೊಂದಿಗೆ ನೋಂದಣಿ ಮಾಡಿದ 30 ದಿನದ ಒಳಗೆ ಸ್ಥಳಕ್ಕೆ ತೆರಳಿ ನಿಗದಿತ ಶುಲ್ಕ ಪಡೆದು<br />ಇ-ಸ್ವತ್ತು ಮಾಡಿಕೊಡಲಾಗುವುದು’ ಎಂದು ತಿಳಿಸಿದರು.</p>.<p>ಪಟ್ಟಣ ಪಂಚಾಯಿತಿ ಅರ್ಥಿಕ ಸಂಕಷ್ಟದಲ್ಲಿದ್ದು, ಆರ್ಥಿಕ ಚೇತರಿಕೆ ನೀಡಲು ಇ- ಸ್ವತ್ತು ಪ್ರಾರಂಭಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಡಿಬಂಡೆ: </strong>ಲಾಕ್ಡೌನ್ ಅವಧಿಯಲ್ಲಿ ನಿರೀಕ್ಷಿತ ಮಟ್ಟದಲ್ಲಿ ತೆರಿಗೆ ವಸೂಲಿ ಆಗದಿರುವುದರಿಂದ ಪೌರಕಾರ್ಮಿಕರು ಪಟ್ಟಣ ಪಂಚಾಯಿತಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ. ಗುತ್ತಿಗೆ ನೌಕರರ 5 ತಿಂಗಳ ವೇತನ ಬಾಕಿ ಇದೆ ಎಂದು ತಹಶೀಲ್ದಾರ್ ಡಿ. ಹನುಮಂತರಾಯಪ್ಪ ಹೇಳಿದರು.</p>.<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 11 ವಾರ್ಡ್ಗಳ ಪೈಕಿ ಅಧಿಕೃತವಾಗಿ 3,627 ಮನೆ ಹಾಗೂ ನಿವೇಶಗಳ ಪಟ್ಟಿ ಇದೆ. ಅದರಲ್ಲಿ 1,200 ಮಾತ್ರ ಇ-ಸ್ವತ್ತಿನಲ್ಲಿ ನೋಂದಣಿಯಾಗಿದೆ ಎಂದರು.</p>.<p>ತಾಲ್ಲೂಕು ಕಚೇರಿಯಲ್ಲಿ ಶೇ 70ರಷ್ಟು ಗುತ್ತಿಗೆ ಅಧಾರದ ನೌಕರರಿದ್ದಾರೆ. ಇವರ ವೇತನಕ್ಕೆ ತೆರಿಗೆ ಹಣದಿಂದಲೇ ವೇತನೆ ನೀಡಲಾಗುತ್ತದೆ ಎಂದರು.</p>.<p>ಜನರಿಗೆ ಇ-ಸ್ವತ್ತಿನ ಬಗ್ಗೆ ತಪ್ಪು ತಿಳುವಳಿಕೆ ಇದೆ. ಅದನ್ನು ನಿವಾರಿಸಲು ಶಾಸಕರು ಹಾಗೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಪಡೆದು, ಜನರಿಗೆ ಹೊರೆಯಾಗದಂತೆ ಸರಳೀಕೃತ ಯೋಜನೆ ಮೂಲಕ ಇ- ಸ್ವತ್ತು ಅಭಿಯಾನ ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.</p>.<p>ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜಶೇಖರ ಮಾತನಾಡಿ, ‘ನಾನು ಅಧಿಕಾರ ವಹಿಸಿಕೊಂಡು ಮೂರು ತಿಂಗಳಾಗಿದೆ. ಇ-ಸ್ವತ್ತು ವಿಚಾರದಲ್ಲಿ ಹಲವು ದೂರುಗಳು ಬಂದಿವೆ. ಮಧ್ಯವರ್ತಿಗಳ ಕಾರಣದಿಂದಾಗಿ ಇ-ಸ್ವತ್ತು ವಿಚಾರದಲ್ಲಿ ಗೊಂದಲ ಉಂಟಾಗಿದೆ. ಜನರು ಅರ್ಜಿಯೊಂದಿಗೆ ಅಗತ್ಯ ದಾಖಲೆಯೊಂದಿಗೆ ನೋಂದಣಿ ಮಾಡಿದ 30 ದಿನದ ಒಳಗೆ ಸ್ಥಳಕ್ಕೆ ತೆರಳಿ ನಿಗದಿತ ಶುಲ್ಕ ಪಡೆದು<br />ಇ-ಸ್ವತ್ತು ಮಾಡಿಕೊಡಲಾಗುವುದು’ ಎಂದು ತಿಳಿಸಿದರು.</p>.<p>ಪಟ್ಟಣ ಪಂಚಾಯಿತಿ ಅರ್ಥಿಕ ಸಂಕಷ್ಟದಲ್ಲಿದ್ದು, ಆರ್ಥಿಕ ಚೇತರಿಕೆ ನೀಡಲು ಇ- ಸ್ವತ್ತು ಪ್ರಾರಂಭಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>