<p><strong>ಶಿಡ್ಲಘಟ್ಟ:</strong> ಈಚೆಗೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ವಾಹನ ಸವಾರರು ಜೀವ ಭದ್ರತೆ ಹಿತದೃಷ್ಟಿಯಿಂದ ದಾಖಲೆಗಳನ್ನು ಕ್ರಮಬದ್ಧವಾಗಿ ಇಟ್ಟುಕೊಳ್ಳಲು ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಚಿಂತಾಮಣಿ ಉಪ ವಿಭಾಗದ ಡಿವೈಎಸ್ಪಿ ಮುರಳೀಧರ್ ಹೇಳಿದರು.</p>.<p>ನಗರದಲ್ಲಿ ಗುರುವಾರ ವಾಹನ ತಪಾಸಣೆ ನಡೆಸಿದ ನಂತರ ಮಾತನಾಡಿದರು. ನಗರದ ವ್ಯಾಪ್ತಿಯಲ್ಲಿ ಸಂಚರಿಸುವ ಬಹುತೇಕ ಆಟೊಗಳಿಗೆ ವಿಮೆ ಇರುವುದಿಲ್ಲ. ಕೆಲವೊಂದು ದಾಖಲೆ ಇಲ್ಲ ಎಂಬ ದೂರುಗಳು ಕೇಳಿ ಬಂದಿವೆ. ವಿಮೆ ಸೌಲಭ್ಯ ಮಾಡಿಕೊಂಡು ದಾಖಲೆ ಕ್ರಮಬದ್ಧವಾಗಿ ಇಟ್ಟುಕೊಂಡು ಸಂಚರಿಸಬೇಕು ಎಂದರು.</p>.<p>ಸಂಚಾರ ನಿಯಮ ಪಾಲನೆ ಎಲ್ಲರ ಕರ್ತವ್ಯವಾಗಬೇಕು. ಇದು ಜನರ ಹಿತಕ್ಕಾಗಿ ಮಾಡುತ್ತಿರುವ ಕಾರ್ಯ. ಜನರೇ ಎಚ್ಚೆತ್ತುಕೊಂಡು ಅಮೂಲ್ಯ ಜೀವ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಚಿಂತಿಸಬೇಕು. ವಾಹನಗಳ ದಾಖಲೆ ಕ್ರಮಬದ್ಧವಾಗಿ ಇಟ್ಟುಕೊಂಡು ಸಂಚಾರ ಮಾಡಿದರೆ ಎಲ್ಲರಿಗೂ ಕ್ಷೇಮ ಎಂದು ಮನವರಿಕೆ ಮಾಡಿಕೊಟ್ಟರು.</p>.<p>ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸ್, ನಗರ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ವೇಣುಗೋಪಾಲ್ ಮತ್ತು ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿಡ್ಲಘಟ್ಟ:</strong> ಈಚೆಗೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ವಾಹನ ಸವಾರರು ಜೀವ ಭದ್ರತೆ ಹಿತದೃಷ್ಟಿಯಿಂದ ದಾಖಲೆಗಳನ್ನು ಕ್ರಮಬದ್ಧವಾಗಿ ಇಟ್ಟುಕೊಳ್ಳಲು ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಚಿಂತಾಮಣಿ ಉಪ ವಿಭಾಗದ ಡಿವೈಎಸ್ಪಿ ಮುರಳೀಧರ್ ಹೇಳಿದರು.</p>.<p>ನಗರದಲ್ಲಿ ಗುರುವಾರ ವಾಹನ ತಪಾಸಣೆ ನಡೆಸಿದ ನಂತರ ಮಾತನಾಡಿದರು. ನಗರದ ವ್ಯಾಪ್ತಿಯಲ್ಲಿ ಸಂಚರಿಸುವ ಬಹುತೇಕ ಆಟೊಗಳಿಗೆ ವಿಮೆ ಇರುವುದಿಲ್ಲ. ಕೆಲವೊಂದು ದಾಖಲೆ ಇಲ್ಲ ಎಂಬ ದೂರುಗಳು ಕೇಳಿ ಬಂದಿವೆ. ವಿಮೆ ಸೌಲಭ್ಯ ಮಾಡಿಕೊಂಡು ದಾಖಲೆ ಕ್ರಮಬದ್ಧವಾಗಿ ಇಟ್ಟುಕೊಂಡು ಸಂಚರಿಸಬೇಕು ಎಂದರು.</p>.<p>ಸಂಚಾರ ನಿಯಮ ಪಾಲನೆ ಎಲ್ಲರ ಕರ್ತವ್ಯವಾಗಬೇಕು. ಇದು ಜನರ ಹಿತಕ್ಕಾಗಿ ಮಾಡುತ್ತಿರುವ ಕಾರ್ಯ. ಜನರೇ ಎಚ್ಚೆತ್ತುಕೊಂಡು ಅಮೂಲ್ಯ ಜೀವ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಚಿಂತಿಸಬೇಕು. ವಾಹನಗಳ ದಾಖಲೆ ಕ್ರಮಬದ್ಧವಾಗಿ ಇಟ್ಟುಕೊಂಡು ಸಂಚಾರ ಮಾಡಿದರೆ ಎಲ್ಲರಿಗೂ ಕ್ಷೇಮ ಎಂದು ಮನವರಿಕೆ ಮಾಡಿಕೊಟ್ಟರು.</p>.<p>ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸ್, ನಗರ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ವೇಣುಗೋಪಾಲ್ ಮತ್ತು ಸಿಬ್ಬಂದಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>